ರಿಯಲ್ ಎಸ್ಟೇಟ್ ಈ ಭಾಗದ ಜನರ ಅನುಕೂಲಕ್ಕೆ ಕ್ರಮ: ಡಿ.ಕೆ ಶಿವಕುಮಾರ್!
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡಬೇಕು ಎನ್ನುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಸಿಗೆ ಕೇಂದ್ರ ಸರ್ಕಾರವು ತಣ್ಣೀರು ಎರಚಿದೆ. ಆದರೆ ಇದೀಗ ರಾಮನಗರವನ್ನು ಬೆಂಗಳೂರು ದಕ್ಷಿಣ ಅಂತ ಮಾಡಿಯೇ ಮಾಡುತ್ತೇನೆ. ಅದನ್ನು ಯಾವ ರೀತಿ ಮಾಡಬೇಕು ಎನ್ನುವುದು ನನಗೆ ತುಂಬಾ ಚೆನ್ನಾಗಿ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ ರಾಮನಗರ ಹಾಗೂ ಕನಕಪುರದ ರಿಯಲ್ ಎಸ್ಟೇಟ್ನ ಬಗ್ಗೆಯೂ ಅವರು ಮಾತನಾಡಿದ್ದಾರೆ. ಹೌದು ಈ ಭಾಗದ ಜನರಿಗೂ ಏನಾದರೂ ಬೇಕಲ್ಲವೇ ಎಂದು ಕೇಳಿದ್ದಾರೆ.
ಕರ್ನಾಟಕದ ದಕ್ಷಿಣ ಭಾಗದಲ್ಲಿ ವಿವಿಧ ಕಾರಣಗಳಿಗೆ ರಿಯಲ್ ಎಸ್ಟೇಟ್ಗೆ ಭರ್ಜರಿ ಧಮಾಕ ಬಂದಿದೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿಯೇ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಸಹ ಹೇಳಲಾಗುತ್ತಿದೆ. ಈ ರೀತಿಯ ಚರ್ಚೆಗಳು ನಡೆಯುತ್ತಿರುವಾಗಲೇ ಡಿ.ಕೆ ಶಿವಕುಮಾರ್ ಅವರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಅದೇನು ಎನ್ನುವ ವಿವರ ನೋಡೋಣ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವ ವಿಚಾರವಾಗಿ ಅವರು ಮಾತನಾಡಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಹೇಗೆ ಮಾಡಬೇಕು ಎನ್ನುವುದು ನನಗೆ ತುಂಬಾ ಚೆನ್ನಾಗಿ ಗೊತ್ತಿದೆ ಅಂತ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಅವರು ಇದು ರಿಯಲ್ ಎಸ್ಟೇಟ್ಗಾಗಿ ಮಾಡಿರುವುದು ಅಥವಾ ಭೂಮಿ ಬೆಲೆ ಹೆಚ್ಚಳ ಮಾಡುವ ಕಾರಣದಿಂದ ಮಾಡಲಾಗುತ್ತಿದೆ ಎನ್ನುವುದನ್ನು ಪರೋಕ್ಷವಾಗಿಯೂ ಒಪ್ಪಿಕೊಂಡಿದ್ದಾರೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಯಾವ ರೀತಿ ಮಾಡಬೇಕು ಎನ್ನುವುದು ನಮಗೆ ಗೊತ್ತಿದೆ. ರಾಮನಗರ ಹೆಸರು ಪ್ರಸ್ತಾವನೆ ಆಗಬಾರದು ಎಂದು ಯಾರನ್ನು ಭೇಟಿ ಮಾಡಲಾಗಿದೆ ಎನ್ನುವ ವಿಷಯವೂ ತಿಳಿದಿದೆ. ಸಂವಿಧಾನದಲ್ಲಿ ಯಾರನ್ನು ಕೇಳಬೇಕು ಎನ್ನುವುದೇನು ಇಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
ರಿಯಲ್ ಎಸ್ಟೇಟ್ಗಾಗಿ ಹೆಸರು ಬದಲಾವಣೆ: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವುದರ ಹಿಂದೆ ರಿಯಲ್ ಎಸ್ಟೇಟ್ ಲೆಕ್ಕಾಚಾರ ಇದೆ ಎನ್ನುವ ಮಾತು ಈ ವಿಷಯ ಪ್ರಸ್ತಾವನೆಯಾದಾಗಿನಿಂದಲೂ ಇದೆ. ಇದೀಗ ಮಾಜಿ ಸಚಿವ ಅಶ್ವತ್ಥನಾರಾಯಣ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮಾಡಲು ಮುಂದಾಗಿರುವುದು ರಿಯಲ್ ಎಸ್ಟೇಟ್ಗಾಗಿಯೇ ಎಂದಿದ್ದಾರೆ. ಈ ಆರೋಪಕ್ಕೆ ಉತ್ತರಿಸಿರುವ ಡಿ.ಕೆ ಶಿವಕುಮಾರ್ ನಿಜ ಎಂಬರ್ಥದಲ್ಲಿ ಮಾತನಾಡಿದ್ದಾರೆ.
ಇದಕ್ಕೆ ಉತ್ತರಿಸಿರುವ ಡಿ.ಕೆ ಶಿವಕುಮಾರ್ ಅವರು, ಅವರು ಬೆಂಗಳೂರಿಗೆ ಬಂದಿದ್ದು ಯಾವ ಕಾರಣಕ್ಕೆ ಅಂತ ಅಶ್ವತ್ಥನಾರಾಯಣ ಅವರನ್ನು ಪ್ರಶ್ನೆ ಮಾಡಿದ್ದಾರೆ. ಮುಂದುವರಿದು ಕನಕಪುರದವರಿಗೆ ಹಾಗೂ ರಾಮನಗರದವರಿಗೆ ಏನೂ ಬೇಡವೇ ಎಂದು ಕೇಳಿದ್ದಾರೆ. ಈ ಜಿಲ್ಲೆಯ ಹೆಸರು ಬದಲಾಗಿ ಬೆಂಗಳೂರು ಬ್ರ್ಯಾಂಡ್ ಮೌಲ್ಯ ಈ ಭಾಗಕ್ಕೂ ವಿಸ್ತರಣೆ ಆಗಲಿದೆ ಎನ್ನುವ ಲೆಕ್ಕಾಚಾರ ಜೋರಾಗಿತ್ತು. ಆದರೆ, ಈ ಲೆಕ್ಕಾಚಾರ ಇದೀಗ ತಲೆಕೆಳಗೆ ಆದಂತೆ ಆಗಿದೆ.
-
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications