ರಾಮನಗರ-ಚನ್ನಪಟ್ಟಣ ನಗರ ಸಾರಿಗೆ ಬಸ್ಗೆ ಚಾಲನೆ
ರಾಮನಗರ, ಆಗಸ್ಟ್ 24 : ರಾಮನಗರ ಹಾಗೂ ಚನ್ನಪಟ್ಟಣ ಜನರ ಬಹುದಿನದ ಬೇಡಿಕೆ ಈಡೇರಿದೆ. ನಗರ ಬಸ್ ಸಂಚಾರ ಸೇವೆ ಆರಂಭವಾಗಿದೆ. ರಾಮಗರ ಬಸ್ ಡಿಪೋಗೆ ಒಟ್ಟು 10 ಬಸ್ಸುಗಳು ಸೇರ್ಪಡೆಗೊಂಡಿವೆ.
ಜೆ-ನರ್ಮ್ ಯೋಜನೆ ಅಡಿ ಕರ್ನಾಟಕ ಸರ್ಕಾರ ಅವಳಿ ನಗರಕ್ಕೆ 10 ಬಸ್ಸುಗಳನ್ನು ನೀಡಿದ್ದು, ಶುಕ್ರವಾರದಿಂದ ಬಸ್ಸುಗಳು ಸಂಚಾರ ಆರಂಭಿಸಿವೆ. ಹಸಿರು ಬಣ್ಣ ಹೊಂದಿರುವ ಈ ಬಸ್ಸುಗಳನ್ನು ನಗರ ಸಾರಿಗೆಯ ವಿನ್ಯಾಸಕ್ಕೆ ತಕ್ಕಂತೆ ರೂಪಿಸಲಾಗಿದೆ.[ಸಿದ್ದಗಂಗಾ ನಗರ ಸಾರಿಗೆಗೆ 32 ಬಸ್ ಸೇರ್ಪಡೆ]

ಸದ್ಯ, ಚನ್ನಪಟ್ಟಣ ಹಾಗೂ ರಾಮನಗರ ನಡುವೆ ನಗರ ಸಾರಿಗೆ ಬಸ್ಸುಗಳು ಸಂಚಾರ ನಡೆಸುತ್ತಿವೆ. ಇದರಿಂದಾಗಿ ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರಿಗೆ ಹೆಚ್ಚು ಅನುಕೂಲವಾಗಿದೆ. ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲುಗಡೆಗಾಗಿ ಪರದಾಡುವುದು ತಪ್ಪಿದೆ.[ಜೆ ನರ್ಮ್: ಮಂಗಳೂರು, ಉಡುಪಿಗೆ 65 ಅತ್ಯಾಧುನಿಕ ಬಸ್]
ರಾಮನಗರದಿಂದ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನವರೆಗೂ ಬಸ್ ಸೇವೆಯನ್ನು ವಿಸ್ತರಿಸಲಾಗಿದೆ. ಇದರಿಂದ ಜೂನಿಯರ್ ಕಾಲೇಜು, ಪದವಿ ಕಾಲೇಜು, ಐಟಿಐ ಹಾಗೂ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅಂತೆಯೇ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಬಳಿ ನಿಲುಗಡೆಗೂ ವ್ಯವಸ್ಥೆ ಕಲ್ಪಿಸಲಾಗಿದೆ.[ಹೊಸ 241 ಟಾಟಾ ಬಸ್ ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ]
ಈ ನಗರ ಸಾರಿಗೆ ಬಸ್ಸುಗಳು ಸುಮಾರು 30 ಆಸನ ಸಾಮರ್ಥ್ಯವನ್ನು ಹೊಂದಿವೆ. ಆಧುನಿಕ ಸಂವಹನ ಸಾಧನ, ಸ್ವಯಂಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಪ್ರಯಾಣಿಕರಿಗೆ ನಿಲುಗಡೆ ಕುರಿತು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್, ಸಿಸಿಟಿವಿ ಕ್ಯಾಮೆರಾಗಳನ್ನು ಬಸ್ ಒಳಗೊಂಡಿದೆ.











Click it and Unblock the Notifications