ಡಿಕೆಶಿ ಕೊಟ್ಟರು ಡಿಚ್ಚಿ... ಕನಕಪುರ ಬಂಡೆ ಎದುರು ನಡೆಯಲಿಲ್ಲ ಎಚ್ಡಿಕೆ ಗೇಮ್ ಪ್ಲಾನ್! Ramanagara District
ಕರ್ನಾಟಕ ರಾಜಕೀಯ ಅಖಾಡದಲ್ಲಿ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು & ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ಜಿದ್ದಾಜಿದ್ದಿ ದೊಡ್ಡ ಮಟ್ಟಿಗೆ ಬೆಳೆದು ನಿಂತಿದೆ. ಪ್ರತಿಯೊಂದು ವಿಚಾರದಲ್ಲಿ ಕೂಡ ಈ ಇಬ್ಬರೂ ರಾಜಕೀಯ ನಾಯಕರು ಜಿದ್ದಿಗೆ ಬಿದ್ದು ಮುಂದೆ ನುಗ್ಗುತ್ತಾರೆ. ಹೀಗಿದ್ದಾಗ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ವಿಚಾರದಲ್ಲಿ ಕೂಡ ದೊಡ್ಡ ತಿಕ್ಕಾಟ ಶುರುವಾಗಿತ್ತು...
ರಾಮನಗರ ಜಿಲ್ಲೆ ಒಂದು ರೀತಿ ಕರ್ನಾಟಕ ರಾಜಕೀಯದ ಹಾಟ್ಸ್ಪಾಟ್ ಎನ್ನಬಹುದು, ಯಾಕೆ ಅಂದ್ರೆ ಒಂದು ಕಡೆ ಮೂಲತಃ ರಾಮನಗರ ಜಿಲ್ಲೆ ಅಂದ್ರೆ ಕನಕಪುರದವರೇ ಆಗಿರುವ ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾಕಷ್ಟು ಹಿಡಿತ ಹೊಂದಿದ್ದಾರೆ. ಹಾಗೇ ಇನ್ನೊಂದು ಕಡೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಸ್ಥಾಪನೆ ಮಾಡಿ ಅಲ್ಲಿನ ಜನರ ವಿಶ್ವಾಸ ಗಳಿಸಿದ್ದರು. ಈ ಮೂಲಕ ರಾಮನಗರ ಜಿಲ್ಲೆ ಜೆಡಿಎಸ್ & ಎಚ್.ಡಿ. ಕುಮಾರಸ್ವಾಮಿ ಅವರ ಪಾಲಿಗೆ ಭದ್ರಕೋಟೆ ಆಗಿತ್ತು. ಆದರೆ ಈಗ ಎಲ್ಲವೂ ಬದಲಾಗಿದೆ... ಇದರ ಜೊತೆಗೆ ರಾಮನಗರ ಜಿಲ್ಲೆಯ ಹೆಸರು ಕೂಡ ಬದಲಾಗಿ ಹೋಗಲಿದೆ!

ಡಿಕೆಶಿ ಕೊಟ್ಟರು ಡಿಚ್ಚಿ...
ಕನಕಪುರ ಬಂಡೆ ಅಂತಾ ಫೇಮಸ್ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹಾಗೇ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಹೆಸರನ್ನೇ ಸಂಪಾದನೆ ಮಾಡಿದ್ದಾರೆ. ಹೀಗಿದ್ದಾಗ ಈ ಇಬ್ಬರೂ ಒಕ್ಕಲಿಗ ನಾಯಕರ ನಡುವೆ ಜಿದ್ದಾಜಿದ್ದಿ ಇದ್ದೇ ಇದೆ, ಅದರಲ್ಲೂ ರಾಮನಗರ ಜಿಲ್ಲೆಯ ವಿಚಾರದಲ್ಲಿ ಒಂದಷ್ಟು ಜೋರಾಗಿಯೇ ಕಿಚ್ಚು ಹೊತ್ತಿಕೊಂಡಿತ್ತು.
ರಾಮನಗರ ಜಿಲ್ಲೆಯ ಹೆಸರು 'ಬೆಂಗಳೂರು ದಕ್ಷಿಣ' ಎಂದು ಬದಲಾವಣೆ ಮಾಡಲು ಒಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಲ್ಲಾ ಪ್ರಯತ್ನ ಮಾಡುತ್ತಿದ್ದರೆ, ಇನ್ನೊಂದು ಕಡೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಆಗಬಾರದು ಅಂತಾ ಎಚ್.ಡಿ. ಕುಮಾರಸ್ವಾಮಿ ಅವರು ಹಠ ಹಿಡಿದು ಕೂತಿದ್ದರು. ಹೀಗೆ ಇಬ್ಬರ ನಡುವೆ ಶುರುವಾಗಿದ್ದ ಜಟಾಪಟಿಯಲ್ಲಿ ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್ ಗೆದ್ದು ಬೀಗಿದ್ದಾರೆ!
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications