ಜಲ ಸಂರಕ್ಷಣೆಗಾಗಿ ರಾಮನಗರದಲ್ಲಿ ಮ್ಯಾರಥಾನ್
ರಾಮನಗರ, ಫೆಬ್ರವರಿ 26 : ಕರ್ನಾಟಕದಲ್ಲಿ ಭಾರೀ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಜೀವಜಲ ಸಂರಕ್ಷಣೆ ಮತ್ತು ಜಲ ಸಂಪನ್ಮೂಲ ನಿರ್ವಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಮನಗರದಲ್ಲಿ ಭಾನುವಾರ ಬೆಳಿಗ್ಗೆ ರಾಮನಗರದಲ್ಲಿ 'ಜಲಾಂದೋಲನ ಮ್ಯಾರಥಾನ್' ಆಯೋಜಿಸಲಾಗಿತ್ತು.
ರಾಮನಗರದ ಕೆಂಪೇಗೌಡನದೊಡ್ಡಿ ಸಮೀಪದ ಜೀಗೇನಹಳ್ಳಿ ಬಡಾವಣೆಯಿಂದ ಸಿದ್ದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿರುವ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು. ಮ್ಯಾರಥಾನ್ ನಲ್ಲಿ ವಿದ್ಯಾರ್ಥಿಗಳು, ಹಿರಿಯರು, ನುರಿತ ಓಟಗಾರರು, ಹವ್ಯಾಸಿಗಳು ಭಾರೀ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಎಲ್ಲ ವಯೋಮಾನದವರಿಗಾಗಿ 7 ಕಿ.ಮೀ ಓಟ, ಹವ್ಯಾಸಿ ಓಟಗಾರರಿಗಾಗಿ 11 ಕಿ.ಮೀ ಮತ್ತು ನುರಿತ ಓಟಗಾರರಿಗಾಗಿ 21 ಕಿ.ಮೀ (ಹಾಫ್ ಮ್ಯಾರಥಾನ್) ವಿಭಾಗಗಳಲ್ಲಿ 1,700 ಸ್ಪರ್ಧಿಗಳು ಭಾಗವಹಿಸಿದ್ದರು. ಅಲ್ಲದೆ, ಹಿರಿಯ ನಾಗರಿಕರಿಗಾಗಿ 5 ಕಿ.ಮೀ ದೂರದ ಓಟವನ್ನೂ ಆಯೋಜಿಸಲಾಗಿತ್ತು.
ಜನರಲ್ಲಿ ನೀರಿನ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಿದ್ದರಿಂದ ಗೆದ್ದವರಿಗೆ ಯಾವುದೇ ಬಹುಮಾನವನ್ನು ಇಟ್ಟಿರಲಿಲ್ಲ. ಆದರೂ, ಸ್ಪರ್ಧಿಗಳಲ್ಲಿ ಉತ್ಸಾಹದ ಕೊರತೆಯಿರಲಿಲ್ಲ. ಬಿರುಬಿಸಿಲಿನಲ್ಲಿ ಓಟಗಾರರು ಓಡಿದರಲ್ಲದೆ, ಹಳ್ಳಿಜನರಲ್ಲಿ ನೀರಿನ ಬಳಕೆ ಮತ್ತು ಉಳಿಕೆಯ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು.

ಯೆಲ್ಲೋ ಅಂಡ್ ರೆಡ್ ಫೌಂಡೇಷನ್ ಈ ಓಟದ ಸ್ಪರ್ಧೆಯನ್ನು ಆಯೋಜಿಸಿತ್ತು. ಬಾಷ್ ಫೌಂಡೇಷನ್, ಬಿಡದಿ ಕೈಗಾರಿಕಾ ಒಕ್ಕೂಟ ಮತ್ತು ರೋಟರಿ ಸಿಲ್ಕ್ ಸಹಯೋಗದಲ್ಲಿ ಮ್ಯಾರಥಾನ್ ನಡೆಸಲಾಯಿತು. ಬೆಂಗಳೂರು ಗ್ರಾಮೀಣ ಲೋಕಸಭೆಯನ್ನು ಪ್ರತಿನಿಧಿಸುವ ಡಿಕೆ ಸುರೇಶ್ ಅವರು ರಾಮನಗರ ಮ್ಯಾರಥಾನ್ ಗೆ ಚಾಲನೆ ನೀಡಿದರು.
ಮ್ಯಾರಥಾನ್ ಯಶಸ್ವಿಯಾಯಿತಾದರೂ, ನೀರಿನ ಉಳಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದ್ದ ಸ್ಪರ್ಧಾಳುಗಳು ಓಡುವಾಗ ಬಳಸಿದ ಮಿನರಲ್ ನೀರಿನ ಬಾಟಲಿಯನ್ನು ಅಲ್ಲಲ್ಲಿ ಚೆಲ್ಲಿದ್ದಲ್ಲದೆ, ನೀರನ್ನು ಪೋಲು ಮಾಡುತ್ತಿದ್ದುದು ಕಂಡುಬಂದಿತು. ಅಲ್ಲದೆ, ಮ್ಯಾರಥಾನ್ ದಾರಿಯುದ್ದಕ್ಕೂ ಹಳ್ಳಿಯಾಗಲಿ, ಮನೆಗಳಾಗಲಿ ಅಷ್ಟೊಂದು ಇಲ್ಲದಿರುವುದು ಸ್ವಲ್ಪ ಹಿನ್ನಡೆಯಂತೆ ಕಂಡಿತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications