ಜಲ ಸಂರಕ್ಷಣೆಗಾಗಿ ರಾಮನಗರದಲ್ಲಿ ಮ್ಯಾರಥಾನ್
ರಾಮನಗರ, ಫೆಬ್ರವರಿ 26 : ಕರ್ನಾಟಕದಲ್ಲಿ ಭಾರೀ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಜೀವಜಲ ಸಂರಕ್ಷಣೆ ಮತ್ತು ಜಲ ಸಂಪನ್ಮೂಲ ನಿರ್ವಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಮನಗರದಲ್ಲಿ ಭಾನುವಾರ ಬೆಳಿಗ್ಗೆ ರಾಮನಗರದಲ್ಲಿ 'ಜಲಾಂದೋಲನ ಮ್ಯಾರಥಾನ್' ಆಯೋಜಿಸಲಾಗಿತ್ತು.
ರಾಮನಗರದ ಕೆಂಪೇಗೌಡನದೊಡ್ಡಿ ಸಮೀಪದ ಜೀಗೇನಹಳ್ಳಿ ಬಡಾವಣೆಯಿಂದ ಸಿದ್ದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿರುವ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು. ಮ್ಯಾರಥಾನ್ ನಲ್ಲಿ ವಿದ್ಯಾರ್ಥಿಗಳು, ಹಿರಿಯರು, ನುರಿತ ಓಟಗಾರರು, ಹವ್ಯಾಸಿಗಳು ಭಾರೀ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಎಲ್ಲ ವಯೋಮಾನದವರಿಗಾಗಿ 7 ಕಿ.ಮೀ ಓಟ, ಹವ್ಯಾಸಿ ಓಟಗಾರರಿಗಾಗಿ 11 ಕಿ.ಮೀ ಮತ್ತು ನುರಿತ ಓಟಗಾರರಿಗಾಗಿ 21 ಕಿ.ಮೀ (ಹಾಫ್ ಮ್ಯಾರಥಾನ್) ವಿಭಾಗಗಳಲ್ಲಿ 1,700 ಸ್ಪರ್ಧಿಗಳು ಭಾಗವಹಿಸಿದ್ದರು. ಅಲ್ಲದೆ, ಹಿರಿಯ ನಾಗರಿಕರಿಗಾಗಿ 5 ಕಿ.ಮೀ ದೂರದ ಓಟವನ್ನೂ ಆಯೋಜಿಸಲಾಗಿತ್ತು.
ಜನರಲ್ಲಿ ನೀರಿನ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಿದ್ದರಿಂದ ಗೆದ್ದವರಿಗೆ ಯಾವುದೇ ಬಹುಮಾನವನ್ನು ಇಟ್ಟಿರಲಿಲ್ಲ. ಆದರೂ, ಸ್ಪರ್ಧಿಗಳಲ್ಲಿ ಉತ್ಸಾಹದ ಕೊರತೆಯಿರಲಿಲ್ಲ. ಬಿರುಬಿಸಿಲಿನಲ್ಲಿ ಓಟಗಾರರು ಓಡಿದರಲ್ಲದೆ, ಹಳ್ಳಿಜನರಲ್ಲಿ ನೀರಿನ ಬಳಕೆ ಮತ್ತು ಉಳಿಕೆಯ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು.

ಯೆಲ್ಲೋ ಅಂಡ್ ರೆಡ್ ಫೌಂಡೇಷನ್ ಈ ಓಟದ ಸ್ಪರ್ಧೆಯನ್ನು ಆಯೋಜಿಸಿತ್ತು. ಬಾಷ್ ಫೌಂಡೇಷನ್, ಬಿಡದಿ ಕೈಗಾರಿಕಾ ಒಕ್ಕೂಟ ಮತ್ತು ರೋಟರಿ ಸಿಲ್ಕ್ ಸಹಯೋಗದಲ್ಲಿ ಮ್ಯಾರಥಾನ್ ನಡೆಸಲಾಯಿತು. ಬೆಂಗಳೂರು ಗ್ರಾಮೀಣ ಲೋಕಸಭೆಯನ್ನು ಪ್ರತಿನಿಧಿಸುವ ಡಿಕೆ ಸುರೇಶ್ ಅವರು ರಾಮನಗರ ಮ್ಯಾರಥಾನ್ ಗೆ ಚಾಲನೆ ನೀಡಿದರು.
ಮ್ಯಾರಥಾನ್ ಯಶಸ್ವಿಯಾಯಿತಾದರೂ, ನೀರಿನ ಉಳಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದ್ದ ಸ್ಪರ್ಧಾಳುಗಳು ಓಡುವಾಗ ಬಳಸಿದ ಮಿನರಲ್ ನೀರಿನ ಬಾಟಲಿಯನ್ನು ಅಲ್ಲಲ್ಲಿ ಚೆಲ್ಲಿದ್ದಲ್ಲದೆ, ನೀರನ್ನು ಪೋಲು ಮಾಡುತ್ತಿದ್ದುದು ಕಂಡುಬಂದಿತು. ಅಲ್ಲದೆ, ಮ್ಯಾರಥಾನ್ ದಾರಿಯುದ್ದಕ್ಕೂ ಹಳ್ಳಿಯಾಗಲಿ, ಮನೆಗಳಾಗಲಿ ಅಷ್ಟೊಂದು ಇಲ್ಲದಿರುವುದು ಸ್ವಲ್ಪ ಹಿನ್ನಡೆಯಂತೆ ಕಂಡಿತು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications