ರಾಮನಗರದಲ್ಲಿ ಮರ್ಯಾದಾ ಹತ್ಯೆ, ಪೋಷಕರ ಬಂಧನ
ರಾಮನಗರ, ಸೆ.14 : ರಾಮನಗರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ನಂತರ ಮನೆಗೆ ಮರಳಿದ್ದ ಮಗಳಿಗೆ ವಿಷಹಾಕಿ ಕೊಲೆ ಮಾಡಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಯುವತಿಯನ್ನು ರಾಮನಗರದ ಕೈಲಾಂಚ ಹೋಬಳಿಯ ಕೆ.ಜಿ.ಹೊಸಳ್ಳಿ ನಿವಾಸಿ ರಂಜಿತಾ (15) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ರಂಜಿತಾ ಶವ ಮನೆಯಲ್ಲಿ ಪತ್ತೆಯಾಗಿದೆ. ರಂಜಿತಾ ತಂದೆ ಗೋವಿಂದರಾಜು ಮತ್ತು ತಾಯಿ ಜಯಲಕ್ಷ್ಮೀಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. [ಚಂದ್ರಕಲಾ ಕೊಲೆ ಮರ್ಯದಾ ಹತ್ಯೆ]

ಘಟನೆಯ ವಿವರ : ಕೆ.ಜಿ.ಹೊಸಳ್ಳಿ ನಿವಾಸಿಯಾದ ಗೋವಿಂದರಾಜು ಕ್ಷೌರಿಕ ವೃತ್ತಿ ಮಾಡಿಕೊಂಡಿದ್ದಾರೆ. ಜಯಲಕ್ಷ್ಮೀ ಅವರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಾರೆ. ಮಗಳು ಚೆನ್ನಾಗಿ ಓದಲಿ ಎಂದು ರಂಜಿತಾಳನ್ನು ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ಮೊದಲ ಮಗಳ ಮನೆಯಲ್ಲಿ ಬಿಟ್ಟಿದ್ದರು. [ತಮಿಳುನಾಡಿನಲ್ಲಿ ಮರ್ಯಾದಾ ಹತ್ಯೆ]
7ನೇ ತರಗತಿ ಫೇಲ್ ಆಗಿದ್ದ ರಂಜಿತಾ ನಂತರ ಓದು ನಿಲ್ಲಿಸಿದ್ದಳು. ರಂಜಿತಾಗೆ ಬೆಂಗಳೂರಿನಲ್ಲಿ ಪೇಂಟರ್ ಆಗಿದ್ದ ಹುಬ್ಬಳ್ಳಿ ಮೂಲದ ಮಂಜುನಾಥ್ ಪರಿಚಯವಾಗಿತ್ತು, ಪರಿಚಯ ಪ್ರೇಮಕ್ಕೆ ತಿರುಗುತ್ತು. ಇದನ್ನು ತಿಳಿದ ರಂಜಿತಾ ಕುಟುಂಬದವರು ಆಕೆಯನ್ನು ವಾಪಸ್ ಕರೆಸಿಕೊಂಡಿದ್ದರು.
ಆದರೆ, ರಂಜಿತಾ ಮತ್ತು ಮಂಜುನಾಥ್ ನಿರಂತರವಾಗಿ ಸಂಪರ್ಕದಲ್ಲಿದ್ದರು. ಸೆ.6ರಂದು ಪ್ರೇಮಿಗಳು ಓಡಿ ಹೋಗಿದ್ದರು. ಸೆ.8ರಂದು ರಂಜಿತಾ ತಾಯಿ ಜಯಲಕ್ಷ್ಮೀ ಈ ಕುರಿತು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಹುಬ್ಬಳ್ಳಿಯಲ್ಲಿ ರಂಜಿತಾ ಮತ್ತು ಮಂಜುನಾಥ್ ಪೊಲೀಸರಿಗೆ ಸಿಕ್ಕಿದ್ದರು. ಸೆ.12ರಂದು ಇಬ್ಬರನ್ನು ರಾಮನಗರಕ್ಕೆ ಕರೆತಂದ ಪೊಲೀಸರು ಮಂಜುನಾಥನನ್ನು ಬಂಧಿಸಿ, ರಂಜಿತಾಳನ್ನು ಮನೆಗೆ ಕಳುಹಿಸಿ ಕೊಟ್ಟಿದ್ದರು. ಸೆ.13ರ ಭಾನುವಾರ ರಂಜಿತಾ ಶವ ಮನೆಯಲ್ಲಿ ಪತ್ತೆಯಾಗಿತ್ತು.
ಆತ್ಮಹತ್ಯೆ ಎಂದರು : ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದ ರಂಜಿತಾ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾಳೆ. ಮಂಜುನಾಥನಿಂದ ಬೇರ್ಪಡಿಸಿದ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಸ್ಥಳೀಯರಿಗೆ ಹೇಳಿದ್ದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ತಂದೆ-ತಾಯಿಯನ್ನು ವಿಚಾರಣೆ ನಡೆಸಿದಾಗ ಪ್ರೀತಿಸಿ ಓಡಿ ಹೋದ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ರಂಜಿತಾ ತಂದೆ-ತಾಯಿಯನ್ನು ಬಂಧಿಸಿದ್ದಾರೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications