Get Updates
Get notified of breaking news, exclusive insights, and must-see stories!

ಬೇಟೆಗೆ ಹೋಗಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು; ಉಯ್ಯಂಬಳ್ಳಿ ಉದ್ವಿಗ್ನ

ರಾಮನಗರ, ಮಾರ್ಚ್ 16: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೇಟೆಗೆಂದು ಹೋಗಿದ್ದ ಉಯ್ಯಂಬಳ್ಳಿ ಗ್ರಾಮದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಅಸುನೀಗಿದ್ದು, ಉದ್ವಿಗ್ನ ಪರಿಸ್ಥಿತಿಗೆಕಾರಣವಾಗಿದೆ.

ಬೇಟೆಗೆ ಹೋಗಿದ್ದ ಯುವಕನನ್ನು ಅರಣ್ಯಾಧಿಕಾರಿಗಳೇ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದರು. ಇದರಿಂದ, ಪರಿಸ್ಥಿತಿಯು ಉದ್ವಿಗ್ನಗೊಂಡಿತ್ತು.

Ramanagara: Villagers protest alleging forest officials kills their man

ಸ್ಥಳಕ್ಕೆ ಆಗಮಿಸಿದ್ದ ಪೊಲೀಸರ ಮೇಲೂ ಗ್ರಾಮಸ್ಥರು ಹಲ್ಲೆ ನಡೆಸಲು ಮುಂದಾಗಿದ್ದರು. ಆದರೂ, ಹರಸಾಹಸ ಮಾಡಿ ಪೊಲೀಸರು ಜನರನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೂ, ರೊಚ್ಚಿಗೆದ್ದಿರುವ ಗ್ರಾಮಸ್ಥರು, ರಾಮನಗರ- ಸಂಗಮ ರಸ್ತೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಸ್ತೆ ತಡೆ ನಡೆಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+