ರಾಮಾನುಜಾಚಾರ್ಯರ 1000ನೇ ಜಯಂತಿಗೆ 500 ಕೋಟಿ ರು.
ಮೇಲುಕೋಟೆ, ಜುಲೈ 07: ವೈಷ್ಣವರ ಪವಿತ್ರ ಕ್ಷೇತ್ರ ಮೇಲುಕೋಟೆ ಅಭಿವೃದ್ಧಿ ಹಾಗೂ ವಿಶಿಷ್ಟಾದೈತ ಪ್ರತಿಪಾದಕ ಶ್ರೀರಾಮಾನುಜಾಚಾರ್ಯರ 1,000ನೇ ಜಯಂತಿ ಆಚರಣೆಗಾಗಿ 500 ಕೋಟಿ ರು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಸಿದ್ದರಾಮಯ್ಯ ಅವರು ತಮ್ಮ ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. 500 ಕೋಟಿ ರು ಸಿಕ್ಕರೆ ಹೆಚ್ಚು ವಿಜೃಂಭಣೆಯಿಂದ ಆಚರಣೆ, ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಪಂಡವಾಪುರ (ಕಂದಾಯ) ಸಹಾಯಕ ಆಯುಕ್ತರಾದ ಎಚ್ ಎಲ್ ನಾಗರಾಜ್ ಅವರು ಹೇಳಿದ್ದಾರೆ. [ನೆನಪನ್ನು ಮೆಲುಕು ಹಾಕಿಸುವ ಮೇಲುಕೋಟೆ]

ವಿವಿಧ ಕ್ಷೇತ್ರಗಳ ಅಧಿಕಾರಿಗಳು, ವಿವಿಧ ದೇಗುಲಗಳ ಅರ್ಚಕರು, ಆಡಳಿತ ಮಂಡಳಿ ಸೇರಿದಂತೆ ಎಲ್ಲರೂ ಸಭೆ ಸೇರಿ ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗಾಗಿ ಯೋಜನೆ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದಿಂದ ಅನುದಾನ ನಿರೀಕ್ಷಿಸಲಾಗಿದೆ ಎಂದರು.
ಈ ಬಗ್ಗೆ ವಿಸ್ತೃತ ಮನವಿ ಹಾಗೂ ನೀಲನಕ್ಷೆಯನ್ನು ಸರ್ಕಾರಕ್ಕೆ ಶೀಘ್ರದಲ್ಲೇ ಸಲ್ಲಿಸಲಾಗುವುದು. 500 ಕೋಟಿ ರು ಅನುದಾನಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದಿದ್ದಾರೆ.
ಈ ಮನವಿ ಪತ್ರದಲ್ಲಿ 2017ರಲ್ಲಿ ಶ್ರೀರಾಮಾನುಜಾಚಾರ್ಯರ 1,000ನೇ ಜಯಂತಿ ಆಚರಿಸಲಾಗುತ್ತದೆ. ಇದಕ್ಕೂ ಮುನ್ನ ಜಕ್ಕನಹಳ್ಳಿ ಸರ್ಕಲ್ ನಲ್ಲಿ ಶ್ರೀರಾಮಾನುಜಾಚಾರ್ಯರ ಪ್ರತಿಮೆ ಸ್ಥಾಪಿಸಲು ಕೋರಲಾಗಿದೆ. ಇದಲ್ಲದೆ ಕನಕ ಗೋಪುರ, ಕುಡಿಯುವ ನೀರಿನ ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಯೋಗಾನರಸಿಂಹ ಸ್ವಾಮಿ ದೇಗುಲದ ರಾಜ ಗೋಪುರ ದುರಸ್ತಿ, ಪ್ರವಾಸಿಗರಿಗೆ ತಂಗುದಾಣ, ಮ್ಯೂಸಿಯಂ ಸ್ಥಾಪನೆ, ಮೇಲುಕೋಟೆಯ 108 ಕೊಳಗಳ ಸ್ವಚ್ಛತೆ, ಅಭಿವೃದ್ಧಿ, ನಿರ್ವಹಣೆ, ದೇಗುಲಕ್ಕೆ ಹೊಸ ರಥ ಹೀಗೆ ಅನೇಕ ಯೋಜನೆಗಳು ಸೇರಿವೆ ಎಂದು ಮಂಡ್ಯ ಜಿಲ್ಲಾಡಳಿತ ಹೇಳಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications