ಸಿಡಿ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ ಮೊರೆ
ಬೆಂಗಳೂರು, ಫೆ. 11: ಅಶ್ಲೀಲ ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಎಸ್ಐಟಿ ರಚನೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾಳೆ.
ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ದಾಖಲಿಸಿದ್ದ ಪ್ರಕರಣದಲ್ಲಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿತ್ತು. ರಮೇಶ್ ಜಾರಕಿಹೊಳಿ ಮೇಲಿನ ಅತ್ಯಾಚಾರ, ಕೆಲಸದ ಅಮಿಷೆ ತೋರಿಸಿ ಲೈಂಗಿಕ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ಇತ್ತೀಚೆಗೆ ಬಿ ವರದಿಯನ್ನು ಸಲ್ಲಿಸಿತ್ತು.
ಇದೀಗ ಸಂತ್ರಸ್ತ ಯುವತಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ನಡೆಸಿದ ಎಸ್ಐಟಿ ರಚನೆ ಕಾನೂನು ಬಾಹಿರ. ಎಸ್ಐಟಿ ರಚನೆ ಸರಿಯಿಲ್ಲ. ಸರ್ಕಾರ ಸ್ವಯಂ ಪ್ರೇರಿತವಾಗಿ ಎಸ್ಐಟಿ ರಚನೆ ಮಾಡಿದೆ ಎಂದು ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಎಸ್ಐಟಿ ರಚನೆ ಕಾನೂನು ಬದ್ಧವಲ್ಲ. ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ವಿಚಾರಣೆ ನಡೆಸುವುದು ಎಷ್ಟು ಸರಿ. ನನಗೆ ಈ ವರದಿ ಮೇಲೆ ನಂಬಿಕೆ ಇಲ್ಲ ಎಂಬುದು ಸಂತ್ರಸ್ತ ಯುವತಿಯ ವಾದ.
ಎಸ್ಐಟಿ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕಾರಣ ಇದೀಗ ಮತ್ತೆ ರಮೇಶ್ ಜಾರಕಿಹೊಳಿ ಇಕ್ಕಟ್ಟಿನಲ್ಲಿ ಸಿಲುಕಿದಂತಾಗಿದೆ. ಒಂದಡೆಗೆ ಸುಪ್ರೀಂನಲ್ಲಿ ಸಲ್ಲಿಸಿರುವ ಅರ್ಜಿ ಇತ್ಯರ್ಥವಾಗಬೇಕು. ಒಂದು ವೇಳೆ ಎಸ್ಐಟಿ ರಚನೆ ಸರಿಯಿಲ್ಲ ಎಂದು ಅರ್ಜಿದಾರಳ ಮನವಿಗೆ ಜಯ ಸಿಕ್ಕರೆ ಮತ್ತೆ ಸಿಡಿ ಪ್ರಕರಣ ಮತ್ತೆ ವಿವಾದಕ್ಕೆ ನಾಂದಿ ಹಾಡಲಿದೆ. ಒಂದು ವೇಳೆ ಹೈಕೋರ್ಟ್ ತೀರ್ಪನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದರೆ, ಜಾರಕಿಹೊಳಿ ಸಚಿವರಾಗುವ ಹಾದಿ ಸುಗಮವಾಗಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications