ಸಿಡಿ ಪ್ರಕರಣ; ಸಂತ್ರಸ್ತ ಯುವತಿ 2ನೇ ವಿಡಿಯೋ ಮೂಲಕ ಮತ್ತೆ ಪ್ರತ್ಯಕ್ಷ
ಬೆಂಗಳೂರು, ಮಾರ್ಚ್ 25; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಮತ್ತೊಮ್ಮೆ ಪ್ರತ್ಯಕ್ಷವಾಗಿದ್ದಾಳೆ. ಎಸ್ಐಟಿ ಸಿಡಿ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.
Recommended Video
ಗುರುವಾರ ಸಂತ್ರಸ್ತ ಯುವತಿ ಮತ್ತೆ ಪ್ರತ್ಯಕ್ಷವಾಗಿದ್ದಾಳೆ. 2ನೇ ವಿಡಿಯೋವನ್ನು ಬಿಡುಗಡೆ ಮಾಡಿದ್ದಾಳೆ. "ಎಸ್ಐಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿಕೆ ನೀಡಿದ್ದು, ಮೊದಲು ನನಗೆ ತಂದೆ-ತಾಯಿಯ ರಕ್ಷಣೆ ಮುಖ್ಯ" ಎಂದು ಹೇಳಿದ್ದಾಳೆ.
ಸದನದಲ್ಲಿ ಸಿಡಿ ಗದ್ದಲ; ಸಿಎಂ ಮನವಿಗೂ ಒಪ್ಪದ ಕಾಂಗ್ರೆಸ್
2ನೇ ವಿಡಿಯೋದಲ್ಲಿ ಎಸ್ಐಟಿ ವಿರುದ್ಧ ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ನನ್ನ ತಂದೆ ತಾಯಿಗೆ ರಕ್ಷಣೆ ಕೊಡಬೇಕು ಎಂದು ವಿಪಕ್ಷ ನಾಯಕರು, ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾಳೆ. ತಂದೆ ತಾಯಿಗೆ ರಕ್ಷಣೆ ಕೊಟ್ಟರೆ ಎಸ್ಐಟಿ ಮುಂದೆ ಬಂದು ಹೇಳಿಕೆ ನೀಡುತ್ತೇನೆ ಎಂದು ತಿಳಿಸಿದ್ದಾಳೆ.
ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಏನಿದೆ? #CD #RameshJarkiholi pic.twitter.com/W7FiFJlI4G
— oneindiakannada (@OneindiaKannada) March 25, 2021
"ಎಸ್ಐಟಿ ಯಾವ ಪರವಾಗಿ ಕೆಲಸ ಮಾಡುತ್ತಿದೆ?" ಎಂದು ಪ್ರಶ್ನೆ ಮಾಡಿದ್ದಾಳೆ. ಮಾರ್ಚ್ 12ರಂದು ನಾನು ವಿಡಿಯೋ ಕಳಿಸಿದ್ದೇನೆ. ಎಸ್ಐಟಿ ಪೊಲೀಸರು ಒಂದು ದಿನ ಕಾದು ರಮೇಶ್ ಜಾರಕಿಹೊಳಿ ದೂರು ನೀಡಿದ ಬಳಿಕ ಅದನ್ನು ಬಿಡುಗೆ ಮಾಡಿದ್ದಾರೆ ಎಂದು ದೂರಿದ್ದಾಳೆ.
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್
"ಎಸ್ಐಟಿ ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ. ನಮ್ಮ ತಂದೆ, ತಾಯಿ ಸ್ವ ಇಚ್ಛೆಯಿಂದ ಅಪಹರಣದ ದೂರು ನೀಡಿಲ್ಲ. ನಾನು ತಪ್ಪೇ ಮಾಡಿಲ್ಲ ಎಂದು ನಮ್ಮ ಪೋಷಕರಿಗೂ ಗೊತ್ತು" ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.
ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣ: ಅಜ್ಞಾತ ಸ್ಥಳಕ್ಕೆ ಸಂತ್ರಸ್ತೆ ಪೋಷಕರು?
"ಅವರು ದೂರು ನೀಡಿರುವುದಕ್ಕೆ ಸಾಧ್ಯವಿಲ್ಲ. ನನಗೆ ಯಾವತ್ತಿದ್ರು ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ" ಎಂದು ಹೇಳಿದ್ದಾಳೆ.