ಖಾತೆ ಕಿತ್ತಾಟ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ!
ಬೆಂಗಳೂರು, ಜ. 22: ಖಾತೆ ಮರು ಹಂಚಿಕೆ ವಿಚಾರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಿನ್ನೆ ಇಡೀ ದಿನ ವಲಸೆ ಬಿಜೆಪಿ ಸಚಿವರು ಬೆಂಗಳೂರಿನಲ್ಲಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಸಂಪುಟ ಸಭೆಗೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಖಾತೆ ಹಂಚಿಕೆ ಅಸಮಾಧಾನ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮಹತ್ವದ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ರಮೇಶ್ ಜಾರಕಿಹೊಳಿ ಅವರು, ಸಚಿವ ಡಾ. ಸುಧಾಕರ್ ಮತ್ತು ಮುನಿರತ್ನ ಜೊತೆಗೆ ನಾನು ಜೊತೆಗೆ ಮಾತನಾಡ ಬೇಕಾಗಿತ್ತು. ಆದರೆ ಈಗ ಎತ್ತಿನ ಹೊಳೆ ಯೋಜನೆಯ ಕಾರ್ಯಕ್ರಮ ಇದೆ, ಅಲ್ಲಿಗೆ ಹೋಗುತ್ತಿದ್ದೇನೆ. ಸಂಜೆ ಬಂದು ಅವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲವನ್ನು ಸರಿ ಮಾಡುತ್ತಾರೆ. ಖಾತೆ ಹಂಚಿಕೆ ವಿಷಯ ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಹೇಳಿದ್ದಾರೆ. ಜೊತೆಗೆ ವಲಸೆ ಸಚಿವರ ಕುರಿತು ಮಹತ್ವದ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ಅವರು ಕೊಟ್ಟಿದ್ದಾರೆ.

ಮಿತ್ರಮಂಡಳಿ ಕುರಿತು ರಮೇಶ್ ಮಾತು!
ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಿತ್ರರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ಮೈತ್ರಿ ಸರ್ಕಾರ ಪತನವಾಗಿತ್ತು. ಬಿಜೆಪಿ ಬಂದ ಬಳಿಕವೂ ಎಲ್ಲ 16 ಜನರೂ ಒಗ್ಗಟ್ಟಾಗಿದ್ದರು. ಆದರೆ ದಿನ ಕಳೆದಂತೆ ಆ ಒಗ್ಗಟ್ಟು ಕಡಿಮೆಯಾಗಿದೆ ಎಂಬುದು ರಮೇಶ್ ಜಾರಕಿಹೊಳಿ ಅವರ ಮಾತಿನಿಂದ ತಿಳಿದು ಬಂದಿದೆ. ಮಿತ್ರ ಮಂಡಳಿ ಕುರಿತು ಮಾತನಾಡಿರುವ ಅವರು ಹೀಗೆ ಹೇಳಿಕೆ ನೀಡಿದ್ದಾರೆ.
ಮಿತ್ರ ಮಂಡಳಿ, ಅದು ಇದು ಎಲ್ಲಾ ಹಳೆಯ ಕಥೆ, ನಾವು ಎಲ್ಲಾ ಒಟ್ಟಿಗೆ ಇದ್ದೀವೆ, ನಾವೆಲ್ಲರೂ ಬಿಜೆಪಿಯವರು. ಖಾತೆ ಹಂಚಿಕೆ ಅಸಮಾಧಾನ ಕುರಿತು ಇಲ್ಲಿ ತನಕ ನಾನು ಯಡಿಯೂರಪ್ಪ ಅವರೊಂದಿಗೆ ಮಾತನಾಡಿಲ್ಲ, ಅಗತ್ಯ ಬಿದ್ದಲ್ಲಿ ಮಾತನಾಡುತ್ತೇನೆ. ಖಾತೆ ಬದಲಾವಣೆ ಅನಿವಾರ್ಯ ಈಗ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಡಾ. ಸುಧಾಕರ್ ಅಸಮಾಧಾನ
ಖಾತೆ ಹಂಚಿಕೆ ಹಾಗೂ ಮರು ಹಂಚಿಕೆಯಿಂದ ಬಿಜೆಪಿ ಸರ್ಕಾರದಲ್ಲಿ ಅಸಮಾಧನ ಸ್ಪೋಟವಾಗಿದೆ. ತಮ್ಮಿಂದ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಕಿತ್ತುಕೊಂಡಿದ್ದಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ನಿನ್ನೆ (ಜ.21) ಬೆಂಗಳೂರಿನಲ್ಲಿದ್ದರೂ ಸಚಿವ ಸಂಪುಟ ಸಭೆಗೆ ಗೈರಾಗುವ ಮೂಲಕ ಸಿಎಂ ಯಡಿಯೂರಪ್ಪ ಅವರ ವಿರುದ್ಧ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

ತಣ್ಣಗಾಗದ ಮಾಧುಸ್ವಾಮಿ ಕೋಪ
ಮತ್ತೊಂದೆಡೆ ಸಣ್ಣ ನೀರಾವರಿ ಇಲಾಖೆ ಹಾಗೂ ಕಾನೂನು ಖಾತೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಕ್ಕೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಗರಂ ಆಗಿದ್ದಾರೆ. ಹೀಗಾಗಿ ಅವರೂ ಕೂಡ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಭಾಗವಹಿಸಿಲ್ಲ. ಆ ಮೂಲಕ ಸಿಎಂ ಯಡಿಯೂರಪ್ಪ ಅವರ ಮೇಲೆ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಆದರೆ ಮಾಧುಸ್ವಾಮಿ ಅವರನ್ನು ಕರೆದು ಮಾತನಾಡುವ ಗೋಜಿಗೆ ಸಿಎಂ ಯಡಿಯೂರಪ್ಪ ಅವರು ಹೋಗಿಲ್ಲ. ಇದು ತಲುಪುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ.
Recommended Video

ಯಡಿಯೂರಪ್ಪಗೆ ತಲೆನೋವಾದ ವಲಸೆ-ಮೂಲ
ಸಂಪುಟ ವಿಸ್ತರಣೆ ಬಳಿಕ ಪಕ್ಷದಲ್ಲಿನ ಅಸಮಾಧಾನವನ್ನು ಹೈಕಮಾಂಡ್ ಸಹಾಯದಿಂದ ಸಿಎಂ ಯಡಿಯೂರಪ್ಪ ಅವರು ತಣಿಸಿದ್ದರು. ಆದರೆ ಇದೀಗ ಮತ್ತೆ ವಲಸೆ ಹಾಗೂ ಮೂಲ ಬಿಜೆಪಿ ಸಚಿವರು ಖಾತೆ ಹಂಚಿಕೆ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಅವರ ಮೇಲೆ ಗರಂ ಆಗಿದ್ದಾರೆ. ಸಂಪುಟ ವಿಸ್ತರಣೆ ಬಳಿಕ ದೂರುಗಳಿದ್ದರೆ ಹೈಕಮಾಂಡ್ಗೆ ಕೊಡಿ ಎಂದಿದ್ದ ಯಡಿಯೂರಪ್ಪ ಅವರು ಈಗ ಆ ಮಾತು ಹೇಳುವ ಸ್ಥಿತಿಯಲ್ಲಿಲ್ಲ.
ಜೊತೆಗೆ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಸಚಿವರೂ ಇಲ್ಲ. ಹೀಗಾಗಿ ಖಾತೆ ಅಸಮಾಧಾನ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಖಾತೆ ಕಿತ್ತಾಟ ಹೀಗೆ ಮುಂದುವರೆದರೆ ಅದರ ನೇರ ಪರಿಣಾಮ ರಾಜ್ಯದ ಅಭಿವೃದ್ಧಿ ಮೇಲಾಗುತ್ತದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಈ ಅಸಮಾಧಾನವನ್ನು ಹೇಗೆ ತಣಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications