Get Updates
Get notified of breaking news, exclusive insights, and must-see stories!

ಬೆಳಗಾವಿ: ಅಥಣಿಯಲ್ಲಿ ಮಹೇಶ್ ಕುಮಟಳ್ಳಿಗಿಂತ ರಮೇಶ್ ಜಾರಕಿಹೊಳಿಯೆ ಲಕ್ಷ್ಮಣ ಸವದಿಗೆ ಪ್ರತಿಸ್ಪರ್ಧಿ!

ಬೆಳಗಾವಿ, ಏಪ್ರಿಲ್. 29 : ಬೆಳಗಾವಿಯ ಅಥಣಿಯಲ್ಲಿ ಇಬ್ಬರು ಬದ್ಧ ಪ್ರತಿಸ್ಪರ್ಧಿಗಳಾದ ಬಿಜೆಪಿಯ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಡುವೆ ಕುತೂಹಲಕಾರಿ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಇದು ಇವರಿಬ್ಬರ ಸ್ಪರ್ಧೆ ಎನ್ನುವುದಕ್ಕಿಂತ ರಮೇಶ್ ಜಾರಕಿಹೊಳಿ ಮತ್ತು ಸವದಿ ನಡುವಿನ ಪೈಪೋಟಿ ಎನ್ನುವಂತಾಗಿದೆ.

ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮಹೇಶ್ ಕುಮಟಳ್ಳಿಗೆ ಟಿಕೆಟ್ ದೊರೆಯಲು ಪ್ರಮುಖ ಕಾರಣ ಎನ್ನಲಾಗಿತ್ತಿದೆ. ಈಗಾಗಲೇ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇದೇ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಣ ಸವದಿ ಕ್ಷೇತ್ರವನ್ನು ಮರಳಿ ಪಡೆಯಲು ಶ್ರಮಿಸುತ್ತಿದ್ದಾರೆ.

Ramesh Jarkiholi is Lakshman Savadi rival than Mahesh Kumathalli in Athani

ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ಆಡಳಿತರೂಢ ಕೇಸರಿ ಪಕ್ಷವನ್ನು ಸುತ್ತಿಗೆ ಮತ್ತು ಇಕ್ಕಳಕ್ಕೆ ಸಿಲುಕಿಸುವಂತೆ ಮಾಡಿದೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ.

ಮಹೇಶ್ ಕುಮಟಳ್ಳಿ ಗೆಲುವಿಗೆ ರಮೇಶ್ ಜಾರಕಿಹೊಳಿ ಕಳೆದ ಕೆಲವು ತಿಂಗಳಿನಿಂದ ಅಥಣಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಥಣಿಯಲ್ಲಿ ಜನಪ್ರಿಯ ನಾಯಕರಾಗಿರುವ ಕುಮಟಳ್ಳಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ವಿಭಾಗಗಳ ಬೆಂಬಲವನ್ನು ಹೊಂದಿದ್ದಾರೆ. ಏಕೆಂದರೆ ಕಾಂಗ್ರೆಸ್‌ನಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

Ramesh Jarkiholi is Lakshman Savadi rival than Mahesh Kumathalli in Athani

2013ರಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕುಮಟಳ್ಳಿಯನ್ನು 24,000 ಮತಗಳಿಂದ ಸೋಲಿಸಿದ್ದರು, ಆದರೆ 2018 ರ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಅದೇ ಪ್ರತಿಸ್ಪರ್ಧಿಗೆ ಸ್ಥಾನವನ್ನು ಬಿಟ್ಟುಕೊಟ್ಟರು. ಗೆದ್ದ ನಂತರ ಮಹೇಶ್ ಕುಮಟಳ್ಳಿ ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಅಧಿಕಾರಕ್ಕೆ ತರಲು ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ 17 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ತಂಡದಲ್ಲಿದ್ದವರು. ಮುಂದಿನ ವರ್ಷದ ನಡೆದ ಉಪಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಗೆಲುವು ಸಾಧಿಸಿದ್ದರು.

ಅಥಣಿ ಕ್ಷೇತ್ರದ 2.20 ಲಕ್ಷ ಮತದಾರರಲ್ಲಿ ಸುಮಾರು ಒಂದು ಲಕ್ಷ ಲಿಂಗಾಯತರು, 40,000 ಮರಾಠರು ಇದ್ದರೇ, ಇತರ ಪ್ರಮುಖ ಮತದಾರರೆಂದರೆ ಪರಿಶಿಷ್ಟ ಜಾತಿಯ 30,000 ಮತಗಳು ಮತ್ತು 28,000 ಮುಸ್ಲಿಮರು ಇದ್ದಾರೆ. ಲಿಂಗಾಯತರು ಪ್ರಮುಖ ಮತದಾರರಾಗಿರುವುದರಿಂದ ಅಥಣಿಯಲ್ಲಿ ಕಣದಲ್ಲಿರುವ ಬಹುತೇಕ ಅಭ್ಯರ್ಥಿಗಳು ಹಲವು ದಶಕಗಳಿಂದ ಲಿಂಗಾಯತರೇ ಆಗಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಹೇಶ್ ಕುಮಠಳ್ಳಿ ಇವರಿಬ್ಬರೂ ಕೂಡ ಈ ಪ್ರಬಲ ಸಮುದಾಯದಿಂದ ಬಂದವರಾಗಿದ್ದು, ಅಂತಿಮವಾಗಿ ಯಾರ ಬೆಂಬಲ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಥಣಿಯಲ್ಲಿ ಸ್ಪರ್ಧೆ ಸಮಬಲಗೊಂಡಿದೆ.

https://kannada.oneindia.com/topic/karnataka-assembly-elections-2023

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+