ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು : ಡಿ.ಕೆ.ಶಿವಕುಮಾರ್

Recommended Video

      ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು ಎಂದು ಹೇಳಿಕೆ ಕೊಟ್ಟ ಡಿ ಕೆ ಶಿವಕುಮಾರ್ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 14 : 'ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ಸ್ನೇಹಿತರು. ಅವರ ಕಷ್ಟ-ಸುಖದಲ್ಲಿ ನಾನು ಜೊತೆಗಿದ್ದೆ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

      ಶುಕ್ರವಾರ ಸದಾಶಿವನಗರ ನಿವಾಸದಲ್ಲಿ ಡಾ.ಜಿ.ಪರಮೇಶ್ವರ ಅವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವೆ ಎಂದರು.

      ಜಾರಕಿಹೊಳಿ ಸಹೋದರರು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನಗೊಂಡಿದ್ದರು. ಬೆಳಗಾವಿ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

      ಜಾರಕಿಹೊಳಿ ಸಹೋದರರು ತಮ್ಮ ಮೇಲೆ ಅಸಮಾಧಾನಗೊಂಡ ಬಳಿಕ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ರಮೇಶ್ ಜಾರಕಿಹೊಳಿ ಅವರ ಬಗ್ಗೆ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ ಬಳಿಕ ಜಾರಕಿಹೊಳಿ ಸಹೋದರರ ಅಸಮಾಧಾನ ಶಮನವಾಗುವುದೇ? ಕಾದು ನೋಡಬೇಕು....

      ಮಾಧ್ಯಮಗಳು ವೈಭವೀಕರಿಸುತ್ತಿವೆ

      ಮಾಧ್ಯಮಗಳು ವೈಭವೀಕರಿಸುತ್ತಿವೆ

      'ಬೆಳಗಾವಿ ಕಾಂಗ್ರೆಸ್‌ನಲ್ಲಿ ಬಹಳ ದೊಡ್ಡ ಸಮಸ್ಯೆ ಏನಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೆಲವು ಗೊಂದಲಗಳಿವೆ. ನಾವು ಕುಳಿತು ಮಾತನಾಡಿ ಅವುಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಮಾಧ್ಯಮಗಳು ಇದನ್ನು ವೈಭವೀಕರಿಸುತ್ತಿವೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.

      ಹಸ್ತಕ್ಷೇಪ ಮಾಡುವುದು ತಪ್ಪು

      ಹಸ್ತಕ್ಷೇಪ ಮಾಡುವುದು ತಪ್ಪು

      ಕಳೆದ ವಾರ ಬೆಳಗಾವಿಯಲ್ಲಿ ಮಾತನಾಡಿದ್ದ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು, 'ಬೆಳಗಾವಿ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡುವುದು ತಪ್ಪು. ಅಂತೆಯೇ ನಾನು ಬೆಂಗಳೂರಿನ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದರೆ ತಪ್ಪಾಗುತ್ತದೆ' ಎಂದು ಹೇಳಿದ್ದರು.

      ಪಕ್ಷ ಹೇಳಿದ ಕೆಲಸ ಮಾಡುವೆ

      ಪಕ್ಷ ಹೇಳಿದ ಕೆಲಸ ಮಾಡುವೆ

      ಶುಕ್ರವಾರ ಡಿ.ಕೆ.ಶಿವಕುಮಾರ್ ಅವರು, 'ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ಸ್ನೇಹಿತರು. ಅವರ ಕಷ್ಟ-ಸುಖದಲ್ಲಿ ನಾನು ಜೊತೆಗಿದ್ದೆ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ' ಎಂದು ಹೇಳಿದ್ದಾರೆ.

      ಕಳೆದ ವಾರ ಮಾತನಾಡಿದ್ದ ಅವರು, 'ನಾನು ಯಾವ ಜಿಲ್ಲೆಯ ರಾಜಕಾರಣದಲ್ಲೂ ಹಸ್ತಕ್ಷೇಪ ಮಾಡಿಲ್ಲ. ನನಗೆ ಯಾವ ಜಿಲ್ಲೆಯ ರಾಜಕಾರಣವೂ ಬೇಡ, ಪಕ್ಷ ಹೇಳಿದ ಕೆಲಸವನ್ನು ನಾನು ಮಾಡುವೆ' ಎಂದು ಹೇಳಿದ್ದರು.

      ಸಿದ್ದರಾಮಯ್ಯ ಜೊತೆ ಸಭೆ

      ಸಿದ್ದರಾಮಯ್ಯ ಜೊತೆ ಸಭೆ

      ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ಸೆ.16ರಂದು ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದು, ಸೆ.17ರಂದು ಜಾರಕಿಹೊಳಿ ಸಹೋದರರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+