Ramesh Jarkiholi: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಸ್ಫೋಟಕ ಸುಳಿವು ನೀಡಿದ ರಮೇಶ್ ಜಾರಕಿಹೊಳಿ
ರಾಯಚೂರು, ನವೆಂಬರ್ 12: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿವೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು ನೇಮಕಗೊಂಡ ನಂತರ ಕಮಲ ಪಾಳಯದಲ್ಲಿ ವಿಜಯೇಂದ್ರ ಅವರ ವಿರೋಧಿ ಬಣ ಬಲಿಷ್ಠವಾಗಿದ್ದು, ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈಗಾಗಲೇ ಹಲವು ಗೌಪ್ಯ ಸಭೆಗಳನ್ನು ಮಾಡಿ ತಮ್ಮ ಬೇಡಿಕೆಯನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದೆ. ಹೀಗಾಗಿ ಡಿಸೆಂಬರ್ ಅಥವಾ ಜನವರಿಯಲ್ಲಿ ವಿಜಯೇಂದ್ರ ಬದಲಾವಣೆಯಾಗುತ್ತೆ ಎನ್ನುವ ಚರ್ಚೆಗಳು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಟೋಟಕ ಸುಳಿವು ನೀಡಿದ್ದಾರೆ.

ಈ ಕುರಿತು ಸೋಮವಾರ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾತನಾಡಿ, ಬಿ ವೈ ವಿಜಯೇಂದ್ರ ಇರುವವರೆಗೂ ನಾನು ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಿಲ್ಲ, ಒಪ್ಪುವುದಿಲ್ಲ. ಅವರ ಸ್ಥಾನಮಾನದ ಕೆಲಸಕ್ಕೆ ನಾನು ವಿರೋಧ ಮಾಡಿಲ್ಲ.
ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವರಿಷ್ಠರು ತೀರ್ಮಾನಿಸುತ್ತಾರೆ. ಬಹಿರಂಗವಾಗಿ ನಾನು ಕೆಲವೊಂದು ವಿಷಯಗಳನ್ನ ಹೇಳಲ್ಲ. ಡಿಸೆಂಬರ್ ಅಥವಾ ಜನವರಿಯಲ್ಲಿ ಏನಾದ್ರೂ ನಿರ್ಣಯ ಆಗುತ್ತೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವುಸಾದಿಸಲಿದೆ. ನಮ್ಮ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರ ಸಾಮಾನ್ಯ ಕಾರ್ಯಕರ್ತ, ನಮ್ಮ ಜೂನಿಯರ್ ಅವರ ಬಗ್ಗೆ ಮಾತನಾಡೋಕೆ ಹೋಗ್ಬೆಡಿ ಅವರ ಅಪ್ಪನ ಬಗ್ಗೆ ಮಾತನಾಡಿ ಅವರ ಬಗ್ಗೆ ಗೌರವ ವಿದೆ ರಮೇಶ್ ಜಾರಕಿಹೊಳಿ ಅವರು ಹೇಳಿದರು.
ಸಿದ್ದರಾಮಯ್ಯನವರಿಗೆ ಕೊನೆಗಳಿಗೆಯಲ್ಲಿ ಈ ಪರಿಸ್ಥಿತಿ ಬರಬಾರದಾಗಿತ್ತು. ಯಾವುದೇ ಒಂದು ಜಾತಿಗೆ ಸಿಮಿತವಾಗಿ ಮುಸ್ಲಿಂಮರು ಅನ್ನುವಾಗಿಲ್ಲ. ಕುರುಬರು ಎನ್ನುವಾಗಿಲ್ಲ, ವಾಲ್ಮೀಕಿ ಅನ್ನುವಾಗಿಲ್ಲ. ಲಿಂಗಾಯತರು ಅನ್ನುವಾಗಿಲ್ಲ. ಏನು ಬಾಯಿ ಬಿಡದಂತ ಪರಿಸ್ಥಿತಿಯಲ್ಲಿದ್ದು, ಹುಲಿಯಾಗಿ ಇದ್ದವರು ಇಲಿಯಾಗಿ ಬಿಟ್ಟಿದ್ದಾರೆ. ನಾವು ಮಂತ್ರಿಯಾಗಿದಾಗ ಅವರು ಮಾತನಾಡುವ ಸ್ಟೈಲ್ ನೋಡಿದ್ರ ಈಗ ನಮಗೆ ಬೇಜಾರ ಆಗುತ್ತದೆ.
ನಮ್ಮ ಪಕ್ಷ ಗಟ್ಟಿ ಗೊಳಿಸುವುದಕ್ಕಾಗಿ ನಾವು ಯತ್ನಾಳ್, ಸೇರಿ ಪ್ರವಾಸ ಮಾಡುತ್ತಿದ್ದೆವೆ. ಪಕ್ಷವನ್ನು ಗಟ್ಟಿಗೊಳಿಸುವುದಕ್ಕಾಗಿ ಸಾಮುಹಿಕ ನಾಯಕತ್ವದಲ್ಲಿ ಪ್ರವಾಸ ಮಾಡುತ್ತಿದ್ದೆವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದರು.
ವಕ್ಬ ಆಸ್ತಿ ಬಳಿಕೆ ವಿಚಾರವಾಗಿ ಮಾತನಾಡಿ, ಇದು ವ್ಯವಸ್ತಿತ ನಾಟಕ. 30- 40 ವರ್ಷಗಳಿಂದ ನಡೆದಿರುವ ಹಗರಣ ಇದಾಗಿದೆ. ರಾಜ್ಯ ಸರಕಾರ ಈಗಾಗಲೇ ಇದನ್ನು ವಾಪಾಸ ತೆಗೆದುಕೊಳ್ಳಲಿಕೆ ನೋಟಿಸನ್ನು ನೀಡಿದ್ದಾರೆ. ನಾವು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡುತ್ತವೆ. ರೈತರಿಗೆ ಅನ್ಯಾಯವಾಗದಂತೆ ಪೂರ್ಣಪ್ರಮಾಣದಲ್ಲಿ ರೈತರ ಪಹಣಿಯಲ್ಲಿ ವಕ್ಬ ಅನ್ನುವ ಹೆಸರು ತೆಗೆದು ರೈತರ ಹೆಸರು ಬರಬೇಕೆಂದು ಒತ್ತಾಯ ಮಾಡುತ್ತವೆ. ಕಣ್ಣೊರೆಸುವ ತಂತ್ರ ಮಾಡಿದರೆ ಕೇಂದ್ರ ಸರಕಾರದ ಮೋದಿಯವರ ನೇತ್ರತ್ವದಲ್ಲಿ ಪೂರ್ಣ ಪ್ರಮಾಣದಲ್ಲಿ ರೈತರಿಗೆ ಅನ್ಯಾಯವಾಗದಂತೆ ಸರಿಪಡಿಸುವ ಕೆಲಸ ಆಗುತ್ತದೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications