ಫೆಬ್ರವರಿ 26ಕ್ಕೆ ರಾಮನಗರದಲ್ಲಿ 'ಜಲಾಂದೋಲನ' ಮ್ಯಾರಥಾನ್
ನೀರಿನ ಪರಿಣಾಮಕಾರಿ ಬಳಕೆ ಹಾಗೂ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಫೆಬ್ರವರಿ 26ರಂದು ರಾಮನಗರ ಜಿಲ್ಲಾಡಳಿತದಿಂದ ಮ್ಯಾರಥಾನ್ ಆಯೋಜಿಸಲಾಗಿದೆ. ಅಂದಹಾಗೆ ಈ ವರ್ಷ ರಾಮನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ
ರಾಮನಗರ, ಫೆಬ್ರವರಿ 23: ಜಲಾಂದೋಲನ ಅಭಿಯಾನದ ಭಾಗವಾಗಿ ರಾಮನಗರ ಜಿಲ್ಲಾಡಳಿತದಿಂದ ಮ್ಯಾರಥಾನ್ ಆಯೋಜಿಸಲು ತೀರ್ಮಾನಿಸಲಾಗಿದೆ. ನೀರಿನ ಸಂರಕ್ಷಣೆ ಹಾಗೂ ಪರಿಣಾಮಕಾರಿ ನೀರು ನಿರ್ವಹಣೆ ಬಗ್ಗೆ ಅರಿವು ಮೂಡಿಸುವ ಕಾರಣದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
2016-17ರಲ್ಲಿ ರಾಮನಗರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು, ಇದರಿಂದ ನೀರಿನ ಸಮಸ್ಯೆ ತಾರಕಕ್ಕೇರಿದೆ. "ರಾಮನಗರ ಜಿಲ್ಲೆಯಾದ್ಯಂತ ನೀರಿನ ಸಂರಕ್ಷಣೆ ಹಾಗೂ ಪರಿಣಾಮಕಾರಿ ನಿರ್ವಹಣೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ" ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ.ಬಿ.ಆರ್.ಮಮತಾ ತಿಳಿಸಿದ್ದಾರೆ.[ಬಕೆಟ್ ನೀರಲ್ಲಿ ಸ್ನಾನ ಮಾಡಿ, ವಾರಕ್ಕೊಮ್ಮೆ ಗಾಡಿ ತೊಳೀರಿ...]

ಬಾಷ್ ಫೌಂಡೇಷನ್, ಬಿಡದಿ ಕೈಗಾರಿಕಾ ಒಕ್ಕೂಟ ಮತ್ತು ರೋಟರಿ ಸಿಲ್ಕ್ ಸಹಯೋಗದಲ್ಲಿ ಜಿಲ್ಲಾಡಳಿತವು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇನ್ನು ಮ್ಯಾರಥಾನ್ ಅನ್ನು ಫೆಬ್ರವರಿ 26ರಂದು ರಾಮನಗರ ಜಿಲ್ಲಾಡಳಿತವು ಆಯೋಜಿಸಿದ್ದು, ಇದಕ್ಕೆ ಯೆಲ್ಲೋ ಮತ್ತು ರೆಡ್ ಫೌಂಡೇಷನ್ ಆಫ್ ರಾಮನಗರದ ಸಹಯೋಗವಿದೆ.[ಕೆಆರೆಸ್ ನಲ್ಲಿ ಕಾಣುತ್ತಿದೆ ನೆಲ, ಬೆಂಗಳೂರಿಗರ ಪಾಲಿಗೆ ಕೆಟ್ಟಕಾಲ]
ಜಿಲ್ಲಾಡಳಿತವು ಈಗಾಗಲೇ ಮಾಧ್ಯಮ ಜಲಾಂದೋಲನ, ಕೃಷಿ ಜಲಾಂದೋಲನ, ಶಿಕ್ಷಣ ಜಲಾಂದೋಲನ ಮತ್ತು ಮಹಿಳಾ ಜಲಾಂದೋಲನ ಎಂಬ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications