ಎಸ್ಎಂ ಕೃಷ್ಣ ಭೇಟಿಯ ನಂತರ ರಮ್ಯಾ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 1 : ನಟಿ, ಮಂಡ್ಯದ ಮಾಜಿ ಸಂಸದೆ ರಮ್ಯಾ ಅವರು ರಾಜಕೀಯದಲ್ಲಿ ಸಕ್ರಿಯವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಶನಿವಾರ ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಅವರು ಮಾತುಕತೆ ನಡೆಸಿದರು. 'ಸದ್ಯ ನನಗೆ ಯಾವ ಅಧಿಕಾರವು ಬೇಡ, ಪಕ್ಷ ಜವಾಬ್ದಾರಿ ಕೊಟ್ಟರೆ ಅದನ್ನು ನಿಭಾಯಿಸಲು ಸಿದ್ಧ' ಎಂದರು.
ಶನಿವಾರ ಬೆಳಗ್ಗೆ ರಮ್ಯಾ ಅವರು ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 'ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು' ಎಂದು ಎಸ್.ಎಂ.ಕೃಷ್ಣ ಕಿವಿಮಾತು ಹೇಳಿದ್ದಾರೆ. [ಮಂಡ್ಯಕ್ಕೆ ಭೇಟಿ ನೀಡಿದ ಮಾಜಿ ಸಂಸದೆ ರಮ್ಯಾ ಹೇಳಿದ್ದೇನು?]
ಎಸ್.ಎಂ.ಕೃಷ್ಣ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ ಅವರು, 'ನಾನು ಎಲ್ಲಾ ವಿಚಾರವನ್ನು ಕೃಷ್ಣ ಅವರ ಬಳಿ ಹೇಳಿಕೊಳ್ಳುತ್ತೇನೆ. ನನ್ನ ಓದು, ರಾಜಕೀಯ ಎಲ್ಲಾ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಮಂಡ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಮಾತುಕತೆ ನಡೆಸಿದ್ದೇವೆ' ಎಂದು ತಿಳಿಸಿದರು. [ಪುಣೆಯಲ್ಲಿ ರಾಹುಲ್ ಗಾಂಧಿ ಜತೆ ಕಾಣಿಸಿಕೊಂಡ ರಮ್ಯಾ!]
'ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ಅವರೇ ತಿಳಿಸಿದ್ದಾರೆ. ಯಾವಾಗ ಬರುತ್ತಾರೆ ಎನ್ನುವುದು ದಿನಾಂಕ ಇನ್ನು ನಿಗದಿಯಾಗಿಲ್ಲ' ಎಂದು ಹೇಳಿದರು.

'ನಾನು ಎಲ್ಲೂ ನಾಪತ್ತೆಯಾಗಿಲ್ಲ'
'ನಾನು ಎಲ್ಲೂ ನಾಪತ್ತೆಯಾಗಿಲ್ಲ ಎಂದು ಹೇಳಿದ ರಮ್ಯಾ ಅವರು, ಪಬ್ಲಿಕ್ ಪಾಲಿಸಿ ಆನ್ ಇಂಟರ್ ನ್ಯಾಷನಲ್ ರಿಲೇಷನ್' ಬಗ್ಗೆ ಅಧ್ಯಯನ ಮಾಡಲು ಲಂಡನ್ಗೆ ಹೋಗಿದ್ದೆ. ಆಗಸ್ಟ್ ಕೊನೆಯ ವಾರದಲ್ಲಿ ಜರ್ಮನಿ ಹೋಗಿ 'ಗ್ಲೋಬಲ್ ಗವರ್ನೆನ್ಸ್' ಬಗ್ಗೆ ಅಧ್ಯಯನ ಮಾಡುತ್ತೇನೆ ಎಂದು ಹೇಳಿದರು.

'ನಾನು ಯಾರನ್ನೂ ಓವರ್ ಟೇಕ್ ಮಾಡುತ್ತಿಲ್ಲ'
'ಮಂಡ್ಯದಲ್ಲಿ ರೈತರ ಮನೆಗೆ ಭೇಟಿ ನೀಡುವ ಮೂಲಕ ನಾನು ಯಾರನ್ನೂ ಓವರ್ ಟೇಕ್ ಮಾಡುತ್ತಿಲ್ಲ. ಅಂಬರೀಶ್ ಅವರು ಹಿರಿಯ ರಾಜಕಾರಣಿ. ನಾನು ಈಗ ರಾಜಕಾರಣಕ್ಕೆ ಬಂದಿದಿದ್ದೇನೆ. ನಮ್ಮ ಜಿಲ್ಲೆಯಾದ ಕಾರಣ ನಾನು ಹೋಗಿದ್ದೇನೆ' ಎಂದರು.

ರಾಹುಲ್ ಗಾಂಧಿ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ
'ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ರಾಹುಲ್ ಗಾಂಧಿ ಅವರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಯಾವಾಗ ಬರುತ್ತಾರೆ? ಎನ್ನುವ ದಿನಾಂಕ ಇನ್ನೂ ನಿಗದಿಯಾಗಿಲ್ಲ' ಎಂದರು.

ನನಗೆ ಯಾವುದೇ ಅಧಿಕಾರವೂ ಬೇಡ
ರಮ್ಯಾ ಅವರನ್ನು ಪರಿಷತ್ ಸದಸ್ಯರಾಗಿ ಆಯ್ಕೆ ಮಾಡುವ ಬಗ್ಗೆ ಹಬ್ಬಿರುವ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಅವರು, 'ನನಗೆ ಪರಿಷತ್ ಸ್ಥಾನ ನೀಡಬೇಕು ಎಂದು ಕೇಳಿಲ್ಲ. ನಾನು ತುಂಬಾ ಕಲೊಯಬೇಕಾಗಿದೆ. ಯಾವ ಅಧಿಕಾರವು ಬೇಡ, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಪಕ್ಷ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ' ಎಂದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications