ರಮ್ಯಾ ಟ್ವೀಟ್ ಗೆ ಉತ್ತರಿಸದೆ ಮೌನಕ್ಕೆ ಜಾರಿದ ರಾಜೀವ್ ಚಂದ್ರಶೇಖರ್
ಬೆಂಗಳೂರು, ಫೆಬ್ರವರಿ 6: 'ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮತ್ತು ಡಿಜಿಟಲ್ ಕಮ್ಯುನಿಕೇಶನ್' ಮುಖ್ಯಸ್ಥೆ ರಮ್ಯಾ (ದಿವ್ಯ ಸ್ಪಂದನ) ಟ್ವೀಟ್ ನಲ್ಲೇ ಎನ್.ಡಿ.ಎ ನಾಯಕ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಬಾಯಿ ಮುಚ್ಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಲೆಳೆಯಲು ಹೋಗಿದ್ದ ಉದ್ಯಮಿ ರಾಜೀವ್ ಚಂದ್ರಶೇಖರ್ ಇದೀಗ ರಮ್ಯಾ ಸರಣಿ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ ಪೇಚಿಗೆ ಸಿಲುಕಿದ್ದಾರೆ. ರಮ್ಯಾ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ರಾಜೀವ್ ಚಂದ್ರಶೇಖರ್ ಮುಗುಮ್ಮಾಗಿ ಕುಳಿತಿದ್ದಾರೆ. ಸಿಎಂ, ರಾಜೀವ್ ಮತ್ತು ರಮ್ಯಾ ನಡುವೆ ನಡೆದ ಟ್ಟೀಟ್ ಸಮರದ ವಿವರಗಳು ಇಲ್ಲಿವೆ.
| Array |
ಪ್ರಧಾನಿಗೆ ಪಂಥಾಹ್ವಾನ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಮಾತನಾಡಿ ಮರಳಿದ ನಂತರ ಸಿದ್ದರಾಮಯ್ಯ ಟ್ಟೀಟ್ ಒಂದನ್ನು ಮಾಡಿದ್ದರು.
"ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಈಗ ನಾನು ಅವರನ್ನು ನೇರಾ ನೇರ ಮಾತುಕತೆಗೆ ಆಹ್ವಾನಿಸುತ್ತಿದ್ದೇನೆ. ಇದರ ಆರಂಭವಾಗಿ, ನೀವು,
1. ಲೋಕಪಾಲರನ್ನು ನೇಮಿಸಿ
2. ನ್ಯಾಯಧೀಶ ಲೋಯಾ ಸಾವಿನ ಪ್ರಕರಣವನ್ನು ತನಿಖೆ ಮಾಡಿ
3. ಜಯ್ ಶಾ ಭಾರೀ ಆಸ್ತಿ ಏರಿಕೆ ಬಗ್ಗೆ ತನಿಖೆ ಮಾಡಿ
4. ಕಳಂಕರಹಿತ ವ್ಯಕ್ತಿಯನ್ನು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಿ,"
ಎಂದು ಟ್ಟೀಟ್ ಮಾಡಿದ್ದರು.
|
ಸಿಎಂ ಕಾಲೆಳೆದ ರಾಜೀವ್
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟ್ಟೀಟ್ ಗೆ ಕಾಮೆಂಟ್ ಮಾಡಿದ್ದ ರಾಜೀವ್ ಚಂದ್ರಶೇಖರ್ "ಯಸ್ ಸಿದ್ದರಾಮಯ್ಯನವರೇ ಸಂಪೂರ್ಣ ಪಟ್ಟಿಯ ಬಗ್ಗೆ ಮಾತನಾಡೋಣ," ಎಂದು ಅವರೂ ಆಹ್ವಾನ ನೀಡಿದ್ದರು.
|
ಪೇಚಿಗೆ ಸಿಲುಕಿಸಿದ ಟ್ಟೀಟ್
ರಾಜೀವ್ ಚಂದ್ರಶೇಖರ್ ಟ್ಟೀಟ್ ಗೆ ಪ್ರತಿಕ್ರಿಯೆ ನೀಡಿದ್ದ ರಮ್ಯಾ, "ಇಲ್ಲಿ ಸಂಪೂರ್ಣ ಪಟ್ಟಿ ಇದೆ. ಇದಕ್ಕೆ ನಿಮ್ಮಿಂದ ಉತ್ತರ ಬೇಕಾಗಿದೆ," ಎಂದು ಟ್ಟೀಟ್ ಮಾಡಿದ್ದರು. ಇದರಲ್ಲಿ ಅವರು ನಾಲ್ಕು ಅಂಶಗಳನ್ನು ಉಲ್ಲೇಖಿಸಿದ್ದರು.
"1. ಕೆಎಂಎಫ್ ಗೆ ಕೋರಮಂಗಲದಲ್ಲಿ ಹಂಚಿಕೆ ಮಾಡಿದ ಭೂಮಿ
2. ಹಾಸನದಲ್ಲಿ ಹಂಚಿಕೆ ಮಾಡಿದ ಎಸ್ಇಝಡ್ ಜಮೀನು
3. ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಹಂಚಿಕೆಯಾದ 75 ಎಕರೆ ಭೂಮಿ
4. ದಾಬಸ್ ಪೇಟೆಯಲ್ಲಿ ಘಟಕ ಸ್ಥಾಪಿಸಲು ಕೆಐಎಡಿಬಿಯಿಂದ ವಶಕ್ಕೆ ಪಡೆದುಕೊಂಡ ಜಾಗ," ಎಂದು ರಮ್ಯಾ ಟ್ಟೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಮೌನಂ ಸಮ್ಮತಿ ಲಕ್ಷಣಂ?
ಇದಾದ ಬಳಿಕ ರಾಜೀವ್ ಚಂದ್ರಶೇಖರ್ ಹಲವಾರು ಟ್ಟೀಟ್ ಗಳನ್ನು ಮಾಡಿದ್ದು ಯಾವುದರಲ್ಲೂ ರಮ್ಯಾ ಪ್ರಶ್ನೆಗೆ ಉತ್ತರಿಸುವ ಗೋಜಿಗೆ ಹೋಗಿಲ್ಲ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮೌನ ಸಮ್ಮತಿಯ ಲಕ್ಷಣವೋ ಗೊತ್ತಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications