ರಾಜ್ಯದೆಲ್ಲೆಡೆ ಭಕ್ತಿ ಭಾವದ ಈದ್-ಉಲ್-ಫಿತ್ರ್ ಆಚರಣೆ
ಬೆಂಗಳೂರು, ಜೂನ್ 05: ರಾಜ್ಯದೆಲ್ಲೆಡೆ ಇಂದು ಸಂಭ್ರಮದ ಈದ್-ಉಲ್-ಫಿತ್ರ್ ಅನ್ನು ಮುಸ್ಲಿಂ ಸಮುದಾಯದವರು ಭಕ್ತಿ-ಭಾವದಿಂದ ಆಚರಣೆ ಮಾಡಿದರು.
ಒಂದು ತಿಂಗಳ ಕಾಲ ಪವಿತ್ರ ರಂಜಾನ್ ಉಪವಾಸ ವೃತ ಪೂರೈಸಿರುವ ಮುಸ್ಲಿಂ ಬಾಂಧವರು ಇಂದು ಬೆಳಿಗ್ಗೆಯೇ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಕೋರಿಕೊಂಡರು.
ಬೆಂಗಳೂರು: ರಂಜಾನ್ ಪ್ರಯುಕ್ತ ಸಂಚಾರ ಮಾರ್ಗ ಬದಲಾವಣೆ
ಬಹಳ ಅಪರೂಪವಾಗಿ ರಾಜ್ಯದೆಲ್ಲೆಡೆ ಇಂದು ಒಂದೇ ದಿನ ಈದ್-ಉಲ್ ಫಿತ್ರ್ ಅನ್ನು ಆಚರಣೆ ಮಾಡಲಾಗುತ್ತಿದೆ. ನಿನ್ನೆ ರಾತ್ರಿ ಚಂದ್ರನ ದರ್ಶನವೂ ರಾಜ್ಯದೆಲ್ಲೆಡೆ ಒಂದೇ ಬಾರಿ ಆಗಿದ್ದರಿಂದ ಇಂದು ಎಲ್ಲೆಡೆ ಒಟ್ಟಿಗೆ ಆಚರಣೆ ಮಾಡಲಾಗುತ್ತಿದೆ.
ಸಾಮಾನ್ಯವಾಗಿ ಕರಾವಳಿಯ ಮುಸ್ಲಿಂರು ಕೇರಳದವರೊಂದಿಗೆ ಒಂದು ದಿನ ಮುಂಚಿತವಾಗಿ ರಂಜಾನ್ ಆಚರಿಸುತ್ತಿದ್ದರು. ಆದರೆ ಈ ಬಾರಿ ಚಂದ್ರ ದರ್ಶನದಿಂದಾಗಿ ಒಂದೇ ದಿನ ರಾಜ್ಯದೆಲ್ಲೆಡೆ ರಂಜಾನ್ ಆಚರಿಸುವಂತಾಗಿದೆ.
ರಂಜಾನ್ ಹಬ್ಬಕ್ಕೆ ಸಿಎಂ ಕುಮಾರಸ್ವಾಮಿ, ವಿಪಕ್ಷ ನಾಯಕ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮುಂತಾದ ರಾಜಕೀಯ ಮುಖಂಡರು, ಸಿನಿಮಾ ನಟರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.