ರಂಜಾನ್ ಮಾಸ: ಶಾಲಾ ವೇಳಾಪಟ್ಟಿ ಬದಲಿಸಿ ಆದೇಶ
ಬೆಂಗಳೂರು, ಮಾರ್ಚ್ 07: ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ, ಬೆಂಗಳೂರು ಸುತ್ತೋಲೆಯೊಂದನ್ನು ಹೊರಡಿಸಿದೆ. ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ.
ಈ ಸುತ್ತೋಲೆ ರಂಜಾನ್ ತಿಂಗಳಿನಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಶಾಸಕ ರಿಜ್ವಾನ್ ಅರ್ಷದ್ ಶಾಸಕರು ಶಿವಾಜಿನಗರ ಸೇರಿದಂತೆ ವಿವಿಧ ಪತ್ರಗಳನ್ನು ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ವಿವರ: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದು ಹೇಳಿದೆ.
ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31/10/2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ.
ಈ ಹಿನ್ನಲೆಯಲ್ಲಿ ಈ ಬಗ್ಗೆ ಕಛೇರಿಗೆ ಸಲ್ಲಿಸಲಾಗಿರುವ ಮನವಿಗಳನ್ನು ಪರಿಶೀಲಿಸಿ, ಈ ಕೆಳಗಿನಂತೆ ಆದೇಶಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ 10/04/2024ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು ಎಂದು ಮಾಹಿತಿ ನೀಡಲಾಗಿದೆ.
* ಬೆಳಗ್ಗೆ 8 ಗಂಟೆಯಿಂದ 8.40ರವರೆಗೆ
* 8.40 ರಿಂದ 9.20 ರವರೆಗೆ
* 9.20 ರಿಂದ 10.00 ರವರೆಗೆ
* 10.00 ರಿಂದ 10.15 ರವರೆಗೆ ವಿರಾಮ
* 10.15 ರಿಂದ 10.55 ರವರೆಗೆ
* 10.55 ರಿಂದ 11.35 ರವರೆಗೆ
* 11.35 ರಿಂದ 12.10 ರವರೆಗೆ
* 12.10 ರಿಂದ 12.45 ರವರೆಗೆ
ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೆ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು.ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವೃತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ತಿಂಗಳಿನಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.
2023-24ನೇ ಸಾಲಿಗೆ ನಿಗದಿಪಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆ.ಎಸ್.ಕ್ಯೂ.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ (SA-2) ವೇಳಾಪಟ್ಟಿಯಂತೆ 5ನೇ, 8ನೇ ಹಾಗೂ 9ನೇ ತರಗತಿಯ ಪರೀಕ್ಷಾ ಕಾರ್ಯ ನಡೆಸುವಂತೆ ಕ್ರಮವಹಿಸುವುದು.
2023-24ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications