ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನವೇ: ಹೆಚ್ಡಿಕೆಗೆ ರಣದೀಪ್ ಸುರ್ಜೆವಾಲ ಪ್ರಶ್ನೆ
ಬೆಂಗಳೂರು, ಏಪ್ರಿಲ್ 14: ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ ಕುಮಾರಸ್ವಾಮಿಯವರೇ? ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ ಹೆಚ್.ಡಿ ಕುಮಾರಸ್ವಾಮಿ ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.

ಮಹಿಳೆಯರನ್ನು ಗೌರವಿಸದ ಬಿಜೆಪಿಯ ಜೊತೆ ಸಂಬಂಧ ಬೆಳೆದ ಕೂಡಲೇ ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ ಕುಮಾರಸ್ವಾಮಿಯವರೇ? ಹಿಂದೆ ಸುಮಲತಾ ಅವರನ್ನು ಎಲ್ಲಿ ಮಲಗಿದ್ದೆ ಎಂದು ಕೇಳಿದ್ದಿರಿ, ಈಗ ಒಂದು ಹೆಜ್ಜೆ ಮುಂದೆ ಹೋಗಿ ಇಡೀ ರಾಜ್ಯದ ಮಹಿಳೆಯರ ನಡತೆಗೆ ಕಪ್ಪು ಚುಕ್ಕೆ ತರುವಂಥ ಮಾತಾಡಿದ್ದೀರಿ ಇದು ನಿಜವಾಗಿಯೂ ಅಕ್ಷಮ್ಯ ಎಂದಿದ್ದಾರೆ.
ಮದ್ಯದ ಬೆಲೆಯ ಬಗ್ಗೆ ಮಾತಾಡಿ ಪುರುಷರನ್ನು ದಾರಿ ತಪ್ಪಿಸುವ ಮನೆ ಒಡೆಯುವ ಕೆಲಸ ಮಾಡಿದ್ದಾಯಿತು. ಈಗ ಗೃಹಲಕ್ಷ್ಮಿಯರ ಬಗ್ಗೆ ಮಾತಾಡಿ ಜನರ ದಿಕ್ಕು ತಪ್ಪಿಸುತ್ತಿದ್ದೀರ? ನಿಜವಾಗಿಯೂ ದಾರಿ ತಪ್ಪಿದವರು ನೀವೇ ಹೊರತು ಮಹಿಳೆಯರಲ್ಲ ಮಿಸ್ಟರ್ ಕುಮಾರಸ್ವಾಮಿಯವರೇ. ಹೆಣ್ಣುಮಕ್ಕಳನ್ನು ಅವಮಾನಿಸುವಂಥ ಮಾತುಗಳನ್ನಾಡಿದ ನಿಮ್ಮ ಮಗನ ಕೀಳು ಮಟ್ಟದ ಹೇಳಿಕೆಗೆ ನಿಮ್ಮ ಸಹಮತವಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ @hd_kumaraswamy ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.
— Randeep Singh Surjewala (@rssurjewala) April 14, 2024
ಮಹಿಳೆಯರನ್ನು ಗೌರವಿಸದ ಬಿಜೆಪಿಯ ಜೊತೆ ಸಂಬಂಧ ಬೆಳೆದ ಕೂಡಲೇ ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ… pic.twitter.com/utf6Y5eXUX
ಕುಮಾರಸ್ವಾಮಿಯವರೇ ನಿಮ್ಮ ತಂದೆ ಈ ದೇಶದ ಪ್ರಧಾನಿಯಾಗಿದ್ದವರು ಅವರಾದರೂ ನಿಮ್ಮ ಈ ನೀಚ ಮನಸ್ಥಿತಿಯ ಮಾತನ್ನು ಒಪ್ಪುವರೇ? ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಕುಮಾರಸ್ವಾಮಿ ಅವರ ಮಹಿಳೆಯರ ಬಗೆಗಿನ ಅವಹೇಳನಕಾರಿ ಹೇಳಿಕೆ ಬಗ್ಗೆ ಏನು ಹೇಳುವಿರಿ? ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೀರ? ಇಲ್ಲ ಎಂದಾದರೆ ಬಿಜೆಪಿಯ ಜೊತೆಗಿನ ಜೆಡಿಎಸ್ ಮೈತ್ರಿಯನ್ನು ಕಡಿದುಕೊಳ್ಳುತ್ತೀರ?
ಉತ್ತರಿಸಿ ಮೋದಿಯವರೇ, ಹಾಗಿದ್ದರೆ ನಿಮ್ಮ ಬೇಟಿ ಬಚಾವೋ..ಬೇಟಿ ಪಡಾವೋ ಕೇವಲ ಬೂಟಾಟಿಕೆಯ ಘೋಷಣೆ ಅಷ್ಟೇನಾ? ಮಹಿಳಾ ಸಬಲೀಕರಣವನ್ನು ಸಹಿಸಲಾಗದ ನಿಮ್ಮ ಮಹಿಳಾ ವಿರೋಧಿ ಮನಸ್ಥಿತಿಗೆ ಧಿಕ್ಕಾರವಿರಲಿ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್












Click it and Unblock the Notifications