ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನವೇ: ಹೆಚ್ಡಿಕೆಗೆ ರಣದೀಪ್ ಸುರ್ಜೆವಾಲ ಪ್ರಶ್ನೆ
ಬೆಂಗಳೂರು, ಏಪ್ರಿಲ್ 14: ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ ಕುಮಾರಸ್ವಾಮಿಯವರೇ? ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ ಹೆಚ್.ಡಿ ಕುಮಾರಸ್ವಾಮಿ ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.

ಮಹಿಳೆಯರನ್ನು ಗೌರವಿಸದ ಬಿಜೆಪಿಯ ಜೊತೆ ಸಂಬಂಧ ಬೆಳೆದ ಕೂಡಲೇ ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ ಕುಮಾರಸ್ವಾಮಿಯವರೇ? ಹಿಂದೆ ಸುಮಲತಾ ಅವರನ್ನು ಎಲ್ಲಿ ಮಲಗಿದ್ದೆ ಎಂದು ಕೇಳಿದ್ದಿರಿ, ಈಗ ಒಂದು ಹೆಜ್ಜೆ ಮುಂದೆ ಹೋಗಿ ಇಡೀ ರಾಜ್ಯದ ಮಹಿಳೆಯರ ನಡತೆಗೆ ಕಪ್ಪು ಚುಕ್ಕೆ ತರುವಂಥ ಮಾತಾಡಿದ್ದೀರಿ ಇದು ನಿಜವಾಗಿಯೂ ಅಕ್ಷಮ್ಯ ಎಂದಿದ್ದಾರೆ.
ಮದ್ಯದ ಬೆಲೆಯ ಬಗ್ಗೆ ಮಾತಾಡಿ ಪುರುಷರನ್ನು ದಾರಿ ತಪ್ಪಿಸುವ ಮನೆ ಒಡೆಯುವ ಕೆಲಸ ಮಾಡಿದ್ದಾಯಿತು. ಈಗ ಗೃಹಲಕ್ಷ್ಮಿಯರ ಬಗ್ಗೆ ಮಾತಾಡಿ ಜನರ ದಿಕ್ಕು ತಪ್ಪಿಸುತ್ತಿದ್ದೀರ? ನಿಜವಾಗಿಯೂ ದಾರಿ ತಪ್ಪಿದವರು ನೀವೇ ಹೊರತು ಮಹಿಳೆಯರಲ್ಲ ಮಿಸ್ಟರ್ ಕುಮಾರಸ್ವಾಮಿಯವರೇ. ಹೆಣ್ಣುಮಕ್ಕಳನ್ನು ಅವಮಾನಿಸುವಂಥ ಮಾತುಗಳನ್ನಾಡಿದ ನಿಮ್ಮ ಮಗನ ಕೀಳು ಮಟ್ಟದ ಹೇಳಿಕೆಗೆ ನಿಮ್ಮ ಸಹಮತವಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ @hd_kumaraswamy ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.
— Randeep Singh Surjewala (@rssurjewala) April 14, 2024
ಮಹಿಳೆಯರನ್ನು ಗೌರವಿಸದ ಬಿಜೆಪಿಯ ಜೊತೆ ಸಂಬಂಧ ಬೆಳೆದ ಕೂಡಲೇ ಮಹಿಳೆಯರ ನಡತೆಯ ಬಗ್ಗೆ ಮಾತಾಡುವಷ್ಟು ಉದ್ಧಟತನ ಬಂದಿತೆ… pic.twitter.com/utf6Y5eXUX
ಕುಮಾರಸ್ವಾಮಿಯವರೇ ನಿಮ್ಮ ತಂದೆ ಈ ದೇಶದ ಪ್ರಧಾನಿಯಾಗಿದ್ದವರು ಅವರಾದರೂ ನಿಮ್ಮ ಈ ನೀಚ ಮನಸ್ಥಿತಿಯ ಮಾತನ್ನು ಒಪ್ಪುವರೇ? ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಕುಮಾರಸ್ವಾಮಿ ಅವರ ಮಹಿಳೆಯರ ಬಗೆಗಿನ ಅವಹೇಳನಕಾರಿ ಹೇಳಿಕೆ ಬಗ್ಗೆ ಏನು ಹೇಳುವಿರಿ? ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೀರ? ಇಲ್ಲ ಎಂದಾದರೆ ಬಿಜೆಪಿಯ ಜೊತೆಗಿನ ಜೆಡಿಎಸ್ ಮೈತ್ರಿಯನ್ನು ಕಡಿದುಕೊಳ್ಳುತ್ತೀರ?
ಉತ್ತರಿಸಿ ಮೋದಿಯವರೇ, ಹಾಗಿದ್ದರೆ ನಿಮ್ಮ ಬೇಟಿ ಬಚಾವೋ..ಬೇಟಿ ಪಡಾವೋ ಕೇವಲ ಬೂಟಾಟಿಕೆಯ ಘೋಷಣೆ ಅಷ್ಟೇನಾ? ಮಹಿಳಾ ಸಬಲೀಕರಣವನ್ನು ಸಹಿಸಲಾಗದ ನಿಮ್ಮ ಮಹಿಳಾ ವಿರೋಧಿ ಮನಸ್ಥಿತಿಗೆ ಧಿಕ್ಕಾರವಿರಲಿ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications