ಡಿವೈಎಸ್ಪಿ ಗಣಪತಿ ಊರು ರಂಗಸಮುದ್ರದಲ್ಲಿ ಕುದಿಮೌನ
ಮಡಿಕೇರಿ, ಜುಲೈ 11 : ದುರಂತ ಅಂತ್ಯ ಕಂಡ ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಸಾವಿನ ಸುದ್ದಿ ಇಡೀ ಜಿಲ್ಲೆಯನ್ನು ತಲ್ಲಣಿಸಿದ್ದರೆ, ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಹಲವು ಅನುಮಾನಗಳಿಗೆ ನೀರೆರೆಯುತ್ತಿದೆ. ಈ ಪ್ರಕರಣದಲ್ಲಿ ಸರ್ಕಾರ ನೀಡುತ್ತಿರುವ ಹೇಳಿಕೆ ಮತ್ತು ತೆಗೆದುಕೊಂಡಿರುವ ಕ್ರಮಗಳು ದಿನದಿಂದ ದಿನಕ್ಕೆ ಸಂಶಯವನ್ನು ಹುಟ್ಟು ಹಾಕುತ್ತಿದೆ.
ಆದರೆ ಮೃತ ಡಿವೈಎಸ್ಪಿ ಗಣಪತಿ ಅವರ ಹುಟ್ಟೂರು ಸೋಮವಾರಪೇಟೆ ತಾಲೂಕಿನ ಕುಶಾಲನಗರ ಬಳಿಯ ರಂಗಸಮುದ್ರದಲ್ಲಿ ನೀರವ ಮೌನ ಆವರಿಸಿದೆ. ಇಲ್ಲಿ ಚರ್ಚೆಗಳಿಲ್ಲ, ಪ್ರತಿಭಟನೆಗಳಿಲ್ಲ. ಆದರೆ, ಆಗಾಗ ಸುರಿವ ಮಳೆಯ ನಡುವೆಯೂ ಊರಿಗೆ ಊರೇ ಮೌನವಾಗಿ ಕಂಬನಿ ಮಿಡಿಯುತ್ತಿದೆ.
ಅಂತ್ಯಕ್ರಿಯೆ ಸಂದರ್ಭ ಕುಟುಂಬ ಸದಸ್ಯರು, ಅಪಾರ ಬಂಧು-ಬಳಗ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಪೊಲೀಸರಿಂದ ತುಂಬಿ ತುಳುಕಿದ್ದ ಮನೆಯಲ್ಲಿ ಮಾತ್ರವಲ್ಲ, ಇಡೀ ಊರಿನಲ್ಲಿ ಅದೇನೋ ಒಂದು ರೀತಿಯ ಸೂತಕದ ವಾತಾವರಣ ನಿರ್ಮಾಣವಾಗಿದೆ. [Live : ಜಾರ್ಜ್ ರಾಜೀನಾಮೆಗೆ ಪರಿಷತ್ ನಲ್ಲಿ ಬಿಗಿ ಪಟ್ಟು]

ಈಗಾಗಲೇ ತನಿಖೆಯ ಹಂತದಲ್ಲಿ ಮಾಹಿತಿ ಸಂಗ್ರಹಿಸಲು ಸಿಐಡಿ ತಂಡ ರಂಗಸಮುದ್ರದ ಮನೆಗೆ ಭೇಟಿ ನೀಡಿ ತೆರಳಿದ್ದಾರೆ. ಇನ್ನು ಕುಟುಂಬದ ಸದಸ್ಯರು ಮಾಧ್ಯಮದವರಿಂದ ದೂರವಿರಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಮೃತ ಗಣಪತಿ ತಂದೆ ಕುಶಾಲಪ್ಪ ಮತ್ತು ಸಹೋದರ ಡಿವೈಎಸ್ಪಿ ತಮ್ಮಯ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದು, ಇದು ಪ್ರಕರಣದ ದಿಕ್ಕು ತಪ್ಪಿಸಲು ಸರ್ಕಾರಕ್ಕೆ ಅನುಕೂಲವಾಗಿದೆ.
ಈ ನಡುವೆ, ಮಾಧ್ಯಮದವರಿಗೆ ಗಣಪತಿ ಅವರ ಸಹೋದರರು ರಂಗಸಮುದ್ರದ ಮನೆಯ ಆವರಣದಲ್ಲಿ ಆಕ್ರೋಶಗೊಂಡು ಬೈದು ಮಾಹಿತಿ ನೀಡಲು ನಿರಾಕರಿಸಿದ ಘಟನೆಯೂ ನಡೆದಿದೆ. ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಮ್ಮಯ್ಯ ಮಾಧ್ಯಮದವರ ಮುಂದೆ ಯಾವುದೇ ಮಾತನಾಡುತ್ತಿಲ್ಲ. ಕಾರಣ ಸರ್ಕಾರ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳ ಒತ್ತಡವಿರಬಹುದೇನೋ. [ಚಿತ್ರಗಳು : ಪಂಚಭೂತಗಳಲ್ಲಿ ಲೀನರಾದ ಡಿವೈಎಸ್ ಪಿ ಗಣಪತಿ]

ಆದರೆ, ಎರಡನೇ ಸಹೋದರ ಮಾಚಯ್ಯ ಮಾತ್ರ ಪ್ರಕರಣದ ಬಗ್ಗೆ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹೊರ ಹಾಕಿದ್ದಾರೆ. ಅವರ ಪ್ರಕಾರ, ಗಣಪತಿ ಅವರ ಬಳಿ ಎರಡು ಪೆನ್ಡ್ರೈವ್, ಇತ್ತು ಅವುಗಳನ್ನು ಪೊಲೀಸರು ಸೀಸ್ ಮಾಡಿದ್ದಾರೆ ಎಂದು ವಿವರ ನೀಡಿದ್ದಾರೆ.
ಈಗಾಗಲೇ ರಂಗಸಮುದ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಿ.ಟಿ.ರವಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆದರೆ ಆಡಳಿತ ಪಕ್ಷದ ಪರ ಯಾವೊಬ್ಬ ಸಚಿವರು ಇತ್ತ ಸುಳಿದಿಲ್ಲ. ಉಸ್ತುವಾರಿ ಸಚಿವ ಸೀತರಾಂ ಇತ್ತ ಬಂದಿಲ್ಲ. ಜಿಲ್ಲೆಯಲ್ಲಿ ಏನು ನಡೆಯುತ್ತದೆ ಎಂಬುದರ ಬಗ್ಗೆಯೂ ಹೇಳಿಕೆ ನೀಡುತ್ತಿಲ್ಲ. ಹೋಗಲಿ ಜಿಲ್ಲೆಗೆ ಭೇಟಿ ನೀಡುವ ಪ್ರಯತ್ನವನ್ನು ಕೂಡ ಮಾಡಿಲ್ಲ. [ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿ : ಓದುಗರ ಒಕ್ಕೊರಲ ಕೂಗು]

ಸದ್ಯ ಪತ್ನಿ ಪಾವನಾ ಮತ್ತು ಪುತ್ರ ನೇಹಾಲ್ ಭಾನುವಾರ ಸಂಜೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ನೀಡಿದ್ದಾರೆ. ಮೊದಲಿಗೆ ದೂರು ಸ್ವೀಕರಿಸಲು ಹಿಂದೇಟು ಹಾಕಿದ ಪೊಲೀಸರು ಪ್ರತಿಭಟನೆ ಬಳಿಕ ದೂರು ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಎಸ್ಪಿ ರಾಜೇಂದ್ರಪ್ರಸಾದ್ ಅವರು ಈಗಾಗಲೇ ಪ್ರಕರಣವನ್ನು ಸಿಐಡಿಗೆ ವಹಿಸಿದ್ದರಿಂದ ದೂರನ್ನು ಸಿಐಡಿಗೆ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications