ರೇಪ್ ಕೇಸ್: ಬಂಧನ ಭೀತಿಯಲ್ಲಿ ಶಾಸಕ ಜೀವರಾಜ್

ಮಾಜಿ ಸಚಿವರ ವಿರುದ್ಧ ಶುಕ್ರವಾರ ಬೆಳಗ್ಗೆ ನೊಂದ ಯುವತಿ ನರಸಿಂಹರಾಜಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಜೀವರಾಜ್ ಅವರ ವಿರುದ್ಧ ಐಪಿಸಿ ಸೆಕ್ಷನ್ 366, 354, 376 ಹಾಗೂ 506ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದ್ದು, ವಿಚಾರಣೆ ನಡೆಸಲು ಶಾಸಕ ಜೀವರಾಜ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.
2010ರಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಸಂಬಂಧ ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಜೀವರಾಜ್ ಅವರು ನಿರಾಕರಿಸಿದ್ದಾರೆ. ಜೀವರಾಜ್ ಅವರ ಬೆಂಬಲಿಗರು ಶೀಘ್ರವೇ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡುವ ಸುಳಿವು ನೀಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಜೀವರಾಜ್, 'ಶೃಂಗೇರಿ ಶಾರದಾಂಬೆ ಮೇಲಾಣೆ ನಾನು ಅತ್ಯಾಚಾರ ಎಸಗಿಲ್ಲ. ಯಾವುದೇ ರೀತಿ ತಪ್ಪು ಮಾಡಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದೆ ಆರೋಪ ಮಾಡಿದ್ದಾರೆ. ಯುವತಿಯ ಸಂಬಂಧಿಕರಿಗೆ ಬಗರ್ ಹುಕಂ ವಿಷಯದಲ್ಲಿ ಅವರಿಗೆ ಸಹಾಯ ಮಾಡಿದ್ದೆ. ಆದರೆ ನನಗೆ ಈಗ ತೊಂದರೆಗೆ ಸಿಲುಕಿಸಿದ್ದಾರೆ. ನಾನು ಎಲ್ಲವನ್ನು ಧೈರ್ಯವಾಗಿ ಎದುರಿಸುತ್ತೇನೆ' ಎಂದಿದ್ದಾರೆ
ಎನ್ ಆರ್ ಪುರದ ಕೆಸಕಿ ಮಡಬೂರು ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣದ ಬಗ್ಗೆ ಇನ್ನಷ್ಟು ವಿವರ ನೀಡಿದ ಜೀವರಾಜ್ ಅವರು " ಅರಣ್ಯ ಅವರ ಮನೆಗೂ ನಮ್ಮ ಮನೆಗೂ 10 ಕಿ.ಮೀ ದೂರ ಇದೆ. ಮನು ನಮ್ಮ ಜತೆ ಹತ್ತಾರು ವರ್ಷದಿಂದ ಜತೆಗಿದ್ದವರು. ಮನು ಅವರ ಹೆಂಡತಿ ಚಿಕ್ಕಮ್ಮನ ಮಗಳು ಅರಣ್ಯ. ಹೀಗಾಗಿ ನನಗೂ ಪರಿಚಯ ಇದ್ದೇ ಇದೆ. ಇವರ ಮೇಲೆ ಈಗಾಗಲೇ ವಿಧಾನಸಭಾ ಠಾಣೆಯಲ್ಲಿ ಆಗಸ್ಟ್ ತಿಂಗಳಿನಲ್ಲೇ ದೂರು ನೀಡಿದ್ದೇನೆ.
ಜುಲೈ 19 ರಿಂದ ಮೂರು ದಿನ ನನ್ನನ್ನು ಪೀಡಿಸಿದ್ದರು. ಹಣ ಕೊಡದಿದ್ದರೆ ಬ್ಲಾಕ್ ಮೇಲ್ ಮಾಡುವುದಾಗಿ ಬೆದರಿಕೆ ನೀಡಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೂ ತಿಳಿಸಿದ್ದೆ. ದೂರು ನೀಡಿದ ಮೇಲೆ ಎಫ್ಐಆರ್ ಹಾಕಿ ಚಾರ್ಚ್ ಶೀಟ್ ಆದರೆ ಸಮಸ್ಯೆ ಎಂದು ಈಗ ರೀತಿ ತಂತ್ರ ಮಾಡಿದ್ದಾರೆ. ನಾನು ಕೈ ಮುಗಿದು ಹೇಳುತ್ತೇನೆ ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರುವ ತನಕ ಸುಮ್ಮನ್ನೆ ಆರೋಪ ಮಾಡಬೇಡಿ.
ಬಿಜೆಪಿ ಆಡಳಿತ ಅವಧಿಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಜೀವರಾಜ್ ಅವರ ಮೇಲೆ ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಭೂ ಅಕ್ರಮ ಎಸೆಗಿದ ಆರೋಪ ಕೇಳಿ ಬಂದಿತ್ತು.
ನರಸಿಂಹರಾಜಪಪುರ ತಾಲ್ಲೂಕಿನ ವಾಸುದೇವ ಕೋಟ್ಯಾನ್ ಎಂಬುವವರು ಸಚಿವ ಡಿ.ಎನ್.ಜೀವರಾಜ್ ಸೇರಿದಂತೆ 13 ಜನರ ವಿರುದ್ಧ ಖಾಸಗಿ ದೂರು ನೀಡಿದ್ದಾರೆ. ಅಕ್ರಮ ಸಕ್ರಮ ಯೋಜನೆಯಡಿ ತಮಗೆ ಬೇಕಾದವರಿಗೆ ಜಮೀನನ್ನು ಸಚಿವರು ಸಕ್ರಮಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.
ಡಿ.ಎನ್.ಜೀವರಾಜ್ ಅವರು ಮಾಡಿದ ಲೋಪದಿಂದಾಗಿ 2004ನೆಯ ಸಾಲಿನಿಂದ ಈವರೆಗೆ ನರಸಿಂಹರಾಜಪುರ ತಾಲ್ಲೂಕಿನಲ್ಲಿ ಯಾರಿಗೂ ಸಾಗುವಳಿ ಚೀಟಿ ದೊರೆತಿಲ್ಲ ಎಂದು ವಾಸುದೇವ ಕೋಟ್ಯಾನ್ ಆರೋಪಿಸಿದ್ದಾರೆ. ಆದರೆ, ಸಚಿವ ಜೀವರಾಜ್ ಎಲ್ಲಾ ಆರೋಪಗಳನ್ನು ಅಲ್ಲಗೆಳೆದಿದ್ದರು. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆದಿತ್ತು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications