ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಸಮೀಕ್ಷೆ, ಪಾಲ್ಗೊಳ್ಳಿ
ಬೆಂಗಳೂರು, ಡಿಸೆಂಬರ್ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕೂವರೆ ವರ್ಷಗಳನ್ನು ಪೂರೈಸಿದೆ. ಕರ್ನಾಟಕದಲ್ಲಿ ಚುನಾವಣಾ ಕಾವು ಏರ ತೊಡಗಿದೆ. ಮುಂದಿನ ವರ್ಷ ರಾಜ್ಯದಲ್ಲಿ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
ಮಹಾದಾಯಿ ವಿಚಾರದಲ್ಲಿ ಬಿಜೆಪಿ, ಪರಿಕ್ಕರ್ ನಾಟಕ: ಸಿದ್ದರಾಮಯ್ಯ
ಅಧಿಕಾರಕ್ಕೆ ಬಂದ ದಿನದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಹಲವು ಭಾಗ್ಯಗಳನ್ನು ನೀಡುತ್ತಿದ್ದಾರೆ. ಚುನಾವಣಾ ಸಮಯದಲ್ಲಿ ಮತ್ತಷ್ಟು ಭಾಗ್ಯಗಳು ಘೋಷಣೆಯಾಗುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು
ಸಿದ್ದರಾಮಯ್ಯ ಸರ್ಕಾರಕ್ಕೆ ಜನರು ನೀಡುವ ಗ್ರೇಡ್ ಏನು? ಎಂದು ಒನ್ ಇಂಡಿಯಾ ಕನ್ನಡ ಸಮೀಕ್ಷೆ ಕೈಗೊಂಡಿದೆ. ರಾಜ್ಯದ ಎಲ್ಲರಿಗೂ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶವಿದೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಜನರು ತಮ್ಮ ಹೆಸರನ್ನು ನೋಂದಣಿ ಮಾಡಿ ಸರ್ಕಾರಕ್ಕೆ ಗ್ರೇಡ್ ನೀಡಬಹುದಾಗಿದೆ. ಮುಂದಿನ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ಯಾವ ಬದಲಾವಣೆ ಕಾಣಲು ಬಯಸುತ್ತೀರಿ ಎಂದು ಅಭಿಪ್ರಾಯ ವ್ಯಕ್ತಪಡಿಸಬಹುದಾಗಿದೆ.
ಸಿದ್ದರಾಮಯ್ಯ ಸರ್ಕಾರವನ್ನು ಕಾಡಿದ 10 ವಿವಾದಗಳು
ಚುನಾವಣೆ ಹತ್ತಿರವಾಗುತ್ತಿದೆ. ಬನ್ನಿ ಸಮೀಕ್ಷೆಯಲ್ಲಿ ಪಾಲ್ಗೊಂಡು ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ...