Ration card: ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ, ದಿನಾಂಕ, ಸಮಯಗಳ ವಿವರ ತಿಳಿಯಿರಿ
ಬೆಂಗಳೂರು, ನವೆಂಬರ್, 28: ಸಾಮಾನ್ಯವಾಗಿ ರೇಷನ್ ಕಾರ್ಡ್ಗಳಲ್ಲಿ ಸದಸ್ಯರ ಹೆಸರುಗಳು ಏನಾದರೂ ತಪ್ಪಾಗಿದ್ದರೆ ಅವುಗಳನ್ನು ಸರಿಪಡಿಸಲು ಆಯಾ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿರುತ್ತಾರೆ. ಆ ದಿನಾಂಕದೊಳಗೆ ದಾಖಲೆಗಳನ್ನು ಸರಿಪಡಿಸಿಕೊಂಡರೆ ಪಡಿತರ ಪಡೆಯಲು ಯಾವುದೇ ಸಮಸ್ಯೆಗಳನ್ನು ಇರುವುದಿಲ್ಲ. ಹಾಗೆಯೇ ಇದೀಗ ಈ ಜಿಲ್ಲೆಯಲ್ಲೂ ಸಹ ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ನಿಗಧಿಪಡಿಲಾಗಿದೆ. ಹಾಗಾದರೆ ಯಾವ ಜಿಲ್ಲೆಯಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿಮ್ಮ ಪಡಿತರ ಚೀಟಿಯಲ್ಲಿ ಹೆಸರುಗಳು ತಪ್ಪಿವೆಯೇ, ಯಾವುದಾದರೂ ಹೆಸರನ್ನು ಸೇರಿಸಬೇಕೆ, ಹಾಗಾದರೆ ಎರಡು ದಿನದಲ್ಲಿ ಇದನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯ ಆಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ರಾಜ್ಯದ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು, ನವೆಂಬರ್ 29 ಮತ್ತು 30ರ ಎರಡು ದಿನಗಳ ಮಟ್ಟಿಗೆ ಮಾತ್ರ ಈ ವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಅದೂ ಎರಡು ಗಂಟೆಗಳ ಕಾಲ ಮಾತ್ರ.
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್ಸಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಹಾಗೂ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಜಿ.ಗುಣಕಿ ಮಾಹಿತಿ ನೀಡಿದ್ದಾರೆ.
ಸದಸ್ಯರ ಹೆಸರು ಸೇರ್ಪಡೆ ಅಥವಾ ಬೇರ್ಪಡೆ ಅಥವಾ ತಿದ್ದುಪಡಿ, ಪಡಿತರ ಚೀಟಿಯಲ್ಲಿನ ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಪಡಿತರ ಪಡೆಯಲು ಇಚ್ಚೆ ವ್ಯಕ್ತಪಡಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ನವೆಂಬರ್ 29 ಹಾಗೂ 30ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 3ರಂದು ಒಂದು ದಿನ ಮಾತ್ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸರಿಯಾದ ಹೆಸರು, ಆಧಾರ್ ಕಾರ್ಡ್ ಹಾಗೂ ವಿಳಾಸದ ದಾಖಲೆಯನ್ನು ತರುವಂತೆ, ನಿಗದಿತ ಸಮಯದೊಳಗೆ ಆಗಮಿಸಬೇಕು ಎಂದು ತಿಳಿಸಲಾಗಿದೆ.
ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್ಲೈನ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications