Ration Card: ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕಾ?-ಮಾಹಿತಿ, ವಿವರ ಇಲ್ಲಿದೆ
Ration Card: ಎಪಿಎಲ್ ಪಡಿತರ ಚೀಟಿ ವಿತರಣೆಯನ್ನು ಕಳೆದ ಒಂದೂವರೆ ವರ್ಷದಿಂದ ರದ್ದ ಮಾಡಲಾಗಿತ್ತು. ಇದೀಗ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧಾರ ಮಾಡಿದೆ. ಇನ್ನು ಹೊಸ ಕಾರ್ಡ್ಗೆ ಅರ್ಜಿ ಯಾವಾಗಿನಿಂದ ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜೂನ್ ತಿಂಗಳಲ್ಲಿಯೇ ಹೊಸ ಕಾರ್ಡ್ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಹೊಸ ಕಾರ್ಡ್ಗಾಗಿ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರ ವೆಬ್ ಪೋರ್ಟಲ್ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ರದ್ದು ಮಾಡಲಾಗಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟದ ಬಳಿಕ ಜೂನ್ ಮೊದಲ ವಾರದಲ್ಲಿ ಈ ಪೋರ್ಟಲ್ನಲ್ಲಿಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಇಲಾಖೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕಳೆದ ವರ್ಷ 2023ರ ಮೇನಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ, ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯೂ ಅಂತ್ಯವಾಗಿತ್ತು. ಆದ್ದರಿಂದ ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆಗೆ ಆನ್ಲೈನ್ ಪೋರ್ಟಲ್ನಲ್ಲಿ ಅವಕಾಶ ಕೊಟ್ಟಿರಲಿಲ್ಲ. ಆದರೆ ಇದೀಗ ಈ ಅವಕಾಶ ಮತ್ತೆ ಕೂಡಿಬಂದಿದೆ.
ಬಳಿಕ ರಚನೆಯಾದ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯ, ಯೋಜನೆಗಳನ್ನು ಜಾರಿಗೆ ಮಾಡಿದ್ದು, ಇವುಗಳನ್ನು ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಕೆ ಮಾಡಲು ಕ್ಯೂನಲ್ಲಿ ನಿಲ್ಲುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ತಿಳಿದುಕೊಂಡ ಸರ್ಕಾರ, ಆಗಲೂ ಆನ್ಲೈನ್ ಪೋರ್ಟಲ್ ಅನ್ನೇ ಬಿಡಲಿಲ್ಲ. ಆದ್ದರಿಂದ ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್ ಮಾಡಿಸಲು ತುದಿಗಾಲಲ್ಲಿ ನಿಂತಿದ್ದಾರೆ.
ಸರ್ವರ್ ಸಮಸ್ಯೆ: ಕಳೆದ ವರ್ಷ ಮಧ್ಯ ಭಾಗದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸಾಕಷ್ಟು ಬಾರಿ ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳಿಗೆ ತಿದ್ದುಪಡಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದಕ್ಕೂ ತುಂಬಾ ಮಂದಿ ಕಾಯುತ್ತಿದ್ದರೂ ಸರ್ಕಾರ ಅವಕಾಶ ನೀಡಿರಲಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ಕ್ಕೆ ಹೊರಬೀಳಲಿದ್ದು, ಜೂನ್ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿದ್ದು, ಆ ಬಳಿಕ ರಾಜ್ಯದಲ್ಲಿ ಪಡಿತರ ಚೀಟಿ ಹಂಚಿಕೆ ಕಾರ್ಯ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಗಿದಿದ್ದು, ಇದೀಗ ಇನ್ನುಳಿದ ಕ್ಷೇತ್ರಗಳಿಗೆ ಮೇ 7ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications