Ration Card: ಪಡಿತರ ಚೀಟಿದಾರರು ನವೆಂಬರ್ವೊಳಗೆ ಈ ಕೆಲ್ಸ ಮಾಡಿಸದಿದ್ರೆ ರೇಷನ್ ಸ್ಥಗಿತ
Ration Card E-KYC: ಪಡಿತರ ಚೀಟಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಮಾತ್ರವಲ್ಲದೆ, ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇನ್ನು ಇದೀಗ ದಿನಬೆಳಗಾದಂತೆ ನಿಯಮಗಳಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಹಾಗೆಯೇ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಮಾಡಲಾಗಿದೆ.
ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಇ-ಕೆವೈಸಿ ಮಾಡಿಸದಿರುವ ಫಲಾನುಭವಿಗಳಿಗೆ ಡಿಸೆಂಬರ್ನಲ್ಲಿ ಪಡಿತರವನ್ನು ನೀಡದಿರಲು ಕ್ರಮಕ್ಕೆ ಮುಂದಾಗಿದೆ. ಆದ್ದರಿಂದ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾಣಿ ಮಾಡಿಸಿಕೊಳ್ಳಬೇಕೆಂಧೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇ-ಕೆವೈಸಿ ಮಾಡಿಸಲು ಯಾವೆಲ್ಲ ದಾಖಲೆಗಳು ಬೇಕು?
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ ತರಬೇಕಾಗುತ್ತದೆ.
ಮುಖ್ಯಮಂತ್ರಿ ಆರೋಗ್ಯ ಕಾರ್ಡ್: ಸರ್ಕಾರ ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಬಡಜನರಿಗೆ ಅನುಕೂಲವಾಗುವಂತೆ ಉತ್ತಮ ಕೆಂದ್ರ ಅರ್ಕಾರದ ಸಹಯೋಗದಲ್ಲಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇನ್ನು ಸರ್ಕಾರ ಪ್ರಧಾನಮಂತ್ರಿ ಆಯುಷ್ಮಾನ್ ಕಾರ್ಡ್ ಅನ್ನು ಜಾರಿಗೆ ತಂದಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ವಿತರಣೆ ಮಾಡಲಾಗುತ್ತಿದೆ.
ಈ ಒಂದು ಕಾರ್ಡ್ ಮೂಲಕ ಬಿಪಿಎಲ್ ಕಾರ್ಡ್ ಇದ್ದವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್ ಇದ್ದವರು 2 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಪ್ರಯೋಜನಾ ಪಡೆದುಕೊಳ್ಳಲಿದ್ದಾರೆ. ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲದೆ, ಕೆಲವು ಪ್ರಮುಖ ಗುರುತಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಈ ಕಾರ್ಡ್ ಹೊಂದಿರುವವರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಈ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಈ ಯೋಚನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು 5 ಲಕ್ಷ ರೂಪಾಯಿಗಳ ಆರೋಗ್ಯ ನೆರವು ಪಡೆದುಕೊಳ್ಳುತ್ತಾರೆ. ಅದೇ ರೀತಿ ಎಪಿಎಲ್ ಕಾರ್ಡ್ ಹೊಂದಿರುವವರಿಗೆ 1.5 ಲಕ್ಷಗಳಿಂದ 2 ಲಕ್ಷ ರೂಪಾಯಿ ಚಿಕಿತ್ಸಾ ರಿಯಾಯಿತಿ ಪಡೆದಕೊಳ್ಳಬಹುದು. ಇದೀಗ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆದುಕೊಳ್ಳಲು ನೀವು ಆನ್ಲೈನ್ನಲ್ಲಿಯೇ ಅರ್ಜಿ ಸಲ್ಲಿಸಬಹುದು.
ಹೇಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೆಲ್ತ್ ಕಾರ್ಡ್ ಪಡೆದುಕೊಳ್ಳಬಹುದು ಇಲ್ಲಿ ತಿಳಿಯಿರಿ. https://abdm.gov.in/ ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಂತರ ಹೆಲ್ತ್ ಯೋಜನೆಯ ಮುಖ್ಯಪುಟ ತೆರೆದುಕೊಳ್ಳುತ್ತದೆ. ABHA ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ನಂತರ ನಿಮ್ಮ ಮೊಬೈಲ್ ಒಂದು ಓಟಿಪಿ ಕಳುಹಿಸಲಾಗುತ್ತದೆ. ಅದನ್ನ ಇಲ್ಲಿ ನಮೂದಿಸಬೇಕು.
ಈಗ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಬೇಕು. ಈ ರೀತಿ ಮಾಹಿತಿಯನ್ನು ನೀಡಿ ಅದನ್ನು ಸಬ್ಮಿಟ್ ಮಾಡುವುದಕ್ಕೂ ಮೊದಲು ಮತ್ತೊಮ್ಮೆ ಪರಿಶೀಲನೆ ಮಾಡಿ. ಆರೋಗ್ಯ ಇಲಾಖೆ ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸರಿಯಾಗಿದ್ದರೆ ನಿಮಗೆ ಆಯುಷ್ಮಾನ್ ಕಾರ್ಡ್ ಅನ್ನು ಒದಗಿಸುತ್ತದೆ. ಬಳಿಕ ನೀವು ಸರ್ಕಾರದಿಂದ ಸಿಗುವ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಲು ಅರ್ಹರಾಗುತ್ತೀರಿ.












Click it and Unblock the Notifications