Ration Card: ಬಿಪಿಎಲ್ ಕಾರ್ಡ್ ಹೊಂದಿರುವ 392 ಸರ್ಕಾರಿ ನೌಕರರು, ಪತ್ತೆಯಾದ ಅನರ್ಹರೆಷ್ಟು?
ಬೆಂಗಳೂರು, ಆಗಸ್ಟ್ 21: ಕರ್ನಾಟಕ ರಾಜ್ಯ ಸರ್ಕಾರದ ಪಡಿತರ ಯೋಜನೆಯಡಿ ಅಕ್ಕಿ, ದವಸ, ಧಾನ್ಯಗಳು ಬಡವರಿಗೆ ಸಿಗುವಂತೆ ಮಾಡಲು ಬಿಪಿಎಲ್ ನಂತಹ ಪಡಿತರ ಕಾರ್ಡ್ಗಳನ್ನು ನೀಡಿದೆ. ಆದರೆ ಈ ಬಿಪಿಎಲ್ ಕಾರ್ಡ್ಗಳು ಅರ್ಹತೆ ಇಲ್ಲದ, ಶ್ರೀಮಂತರು, ಸರ್ಕಾರಿ ಉದ್ಯೋಗ ಹೊಂದಿರುವವರು ಪಡೆದಿರುವುದು ಪತ್ತೆಯಾಗಿದೆ. ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ.
ಹೌದು, ರಾಜ್ಯ ಸರ್ಕಾರವು ಅನರ್ಹರು ಬಿಜೆಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಅಭಿಮಾನ ಆರಂಭಿಸಿದೆ. ಇದರಲ್ಲಿ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಕುಟುಂಬಗಳಿಗೆ ಸಿಮೀತವಾದ ಪಡಿತರ ಚೀಟಿಯನ್ನು ಶ್ರೀಮಂತರು, ಉಳ್ಳವರು ಪಡೆದಿದ್ದಾರೆ. ಈ ಕುರಿತು ಅಭಿಮಾನದ ಮೂಲಕ ಪತ್ತೆ ಕಾರ್ಯ ಆರಂಭಿಸಿದೆ.

ಅಧಿಕ ಆದಾಯ ಇರುವ ಒಟ್ಟು 32,092 ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದರಲ್ಲಿ 391 ಮಂದಿ ಸರ್ಕಾರಿ ಉದ್ಯೋಗ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ವಾರ್ಷಿಕವಾಗಿ ಲಕ್ಷಾಂತರ ರೂಪಾಯಿ ಗಳಿಸುವ 2000ಕ್ಕೂ ಹೆಚ್ಚು ಕುಟುಂಬಗಳಿವೆ. ನಿಗದಿತ ಆದಾಯ (1.20ಕ್ಕೂ) ಹೆಚ್ಚು ವಾರ್ಷಿಕ ವರಮಾನ ಹೊಂದಿರುವ 29000 ಕುಟುಂಬಗಳ ಪತ್ತೆ ಆಗಿವೆ.
ಸರ್ಕಾರಿ ಅಧಿಕಾರಿಗಳಿಂದ ಪಡಿತರ ಬದಲಿಗೆ ದಂಡ ವಸೂಲಿ
391 ಮಂದಿ ಸರ್ಕಾರಿ ಅಧಿಕಾರಿಗಳು ಸರ್ಕಾರಕ್ಕೆ ಮೋಸ ಮಾಡಿದ್ದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಳೆದ ಮೂರು ವರ್ಷಗಳಿಂದ ಯಾವೆಲ್ಲ ನೌಕರರು ಪಡೆದಿರುವ ಪಡಿತರ ಮೊತ್ತ ಕಲೆ ಹಾಕಬೇಕು. ನಿಯಮಾನುಸಾರ ನೋಟಿಸ್ ಜಾರಿ ಮಾಡಬೇಕು. ಇನ್ನೂ ಪಡೆದ ಪಡಿತರ ಮೌಲ್ಯದಷ್ಟು ಹಣವನ್ನು ಅವರಿಂದ ದಂಡವಾಗಿ ವಸೂಲಿಗೆ ಮಾಡುವುದರ ಜೊತೆಗೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.
Gold Rate Bangalore: ಬೆಂಗಳೂರಿನಲ್ಲಿ ಆಗಸ್ಟ್ 21ರಂದು ಚಿನ್ನ ಹಾಗೂ ಬೆಳ್ಳಿ ಬೆಲೆ ತಿಳಿಯಿರಿ
ಸರ್ಕಾರ ವ್ಯಾಪ್ತಿಯಲ್ಲಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ, ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕಾಯಂ ಆಗಿ ಕಾರ್ಯ ನಿರ್ವಹಿಸುವವರು, ಸ್ವಂತ ವಾಹನ ಇಲ್ಲವೇ ವಾಣಿಜ್ಯ ಚಟುವಟಿಕೆಗಾಗಿ ನಾಲ್ಕು ಚಕ್ರದ ವಾಹನ ಹೊಂದಿರುವವರು, ಮೂರು ಹೆಕ್ಟರ್ಗಿಂತ ಹೆಚ್ಚಿನ ಭೂಮಿ ಹೊಂದಿರುವವರು, ನಗರ ಅಥವಾ ಪಟ್ಟಣಗಳಲ್ಲಿ 1000 ಚದರ ಅಡಿಗೂ ಹೆಚ್ಚು ವಿಸ್ತೀರ್ಣದಲ್ಲಿ ಸ್ವಂತ ಮನೆಹೊಂದಿವರು, ಹಾಗೂ ವಾರ್ಷಿಕ 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿದ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹತೆ ಇರುವುದಿಲ್ಲ ಎಂದು ಇಲಾಖೆ ನಿಯಮಗಳು ಹೇಳುತ್ತವೆ.

ಆಗಸ್ಟ್ 31ರೊಳಗೆ ತಿದ್ದುಪಡಿ, ರದ್ದಿಗೆ ಅವಕಾಶ
ಇಂತಹ ಅರ್ಹತೆ ಇಲ್ಲದೇ, ಅನರ್ಹತೆ ಇದ್ದರೂ ಪಡಿತರ ಚೀಟಿ ಪಡೆದವರು ಇದೇ ಆಗಸ್ಟ್ 31ರೊಳಗೆ ನಿಮ್ಮ ಹತ್ತಿರ ತಾಲೂಕು ಕಚೇರಿ (ತಹಶೀಲ್ದಾರ್ ಕಚೇರಿ)ಗೆ ಹೋಗಿ ರದ್ದುಗೊಳಿಸಬೇಕು. ಇನ್ನೂ ಹೆಸರು ಸೇರಿವುದು, ಹೆಸರು ತೆಗೆಯುವುದ ಸೇರಿದಂತೆ ತಿದ್ದುಪಡಿ ಮಾಡಿಕೊಳ್ಳುವವರು ಆಗಸ್ಟ್ ತಿಂಗಳೇ ಕೊನೆಯ ಅವಕಾಶವಾಗಿದೆ. ನಂತರ ದಂಡ ಸಮೇತವಾಗಿ ತಿದ್ದುಮಾಡಿಕೊಳ್ಳಬೇಕು. ಅನರ್ಹರು ಪಡಿತರ ಚೀಟಿ ರದ್ದುಗೊಳಿಸದಿದ್ದರೆ ದಂಡ ತೆರಬೇಕಾಗುತ್ತದೆ ಇಲಾಖೆ ಎಚ್ಚರಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications