Get Updates
Get notified of breaking news, exclusive insights, and must-see stories!

Ration Card: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ವಿತರಣೆ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಕೆ.ಎಚ್.ಮುನಿಯಪ್ಪ

Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ನಡುವೆಯೇ ಇದೀಗ ಹೊಸ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಮಹತ್ವದ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪಡಿತರ ಚೀಟಿ ವಿತರಣೆ ಯಾವಾಗ?: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಿದವರಿಗೆ ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕಲಬುರಗಿಯಲ್ಲಿ ಹೇಳಿದರು. ಇದೇ ವೇಳೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭ ಆಗಲಿದೆ ಎನ್ನುವ ಮಾಹಿತಿಯನ್ನು ಸಹ ನೀಡಿದ್ದಾರೆ.

Ration Card New Ration Card Distribution and Application Submission update in Karnataka State

ನಗರದ ಐವಾನ್‌ಎ ಶಾಹಿ ಅತಿಥಿಗೃಹದಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ಹಲವಯ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯ ಆಗಿಲ್ಲ. ಸುಮಾರು 2.5 ಲಕ್ಷದಿಂದ 3ಲಕ್ಷ ಅರ್ಜಿಗಳು ಸದ್ಯ ಬಾಕಿ ಇರುವ ಬಗ್ಗೆ ಮಾಹಿತಿಯಿದೆ. ಎಲ್ಲವೂ ಪರಿಶೀಲನೆ ಮಾಡಿ ಹೊಸ ಪಡಿತರ ಚೀಟಿಗಳನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭ?: ಇದೇ ವೇಳೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಯಾವಾಗ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಿದವರಿಗೆ ಪಡಿತ ವಿತರಣೆ ಮಾಡಲಾಗುತ್ತದೆ. ಇದು ಪ್ರಕ್ರಿಯೆ ಜನವರಿ ಅಂತ್ಯದೊಳಗೆ ಮುಗಿಯಲಿದ್ದು, ಮುಂದಿನ ತಿಂಗಳು ಫೆಭ್ರವರಿಯಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಇರುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಿರಾ ಕಿಟ್ ಅನ್ನು ವಿತರಣೆ ಶೀಘ್ರದಲ್ಲೇ ವಿತರಣೆ ಮಾಡಲಾಗಯತ್ತದೆ. ಜನವರಿ ಅಂತ್ಯ ಅಥವಾ ಮುಂದಿನ ತಿಂಗಳಿನಿಂದ ವಿತರಣೆ ಮಾಡಲಾಗುತ್ತದೆ. ಇದರಲ್ಲಿ ತೊಗರಿ ಬೇಳೆ, ಸಕ್ಕರೆ, ಎಣ್ಣೆ ಮತ್ತು ಉಪ್ಪು ಇರಲಿದೆ. ಅಕ್ಕಿ ಸದುಪಯೋಗ ಆಗುತ್ತಿಲ್ಲ ಎಂದು ತಿಳಿದಾಗ ನಾವು ಈ ನಿರ್ಧಾರ ತೆಗೆದುಕೊಂಡೆವು ಎಂದು ಹೇಳಿದರು.

ಕಿಟ್‌ನಲ್ಲಿ ಏನೆಲ್ಲಾ ಇರುತ್ತದೆ?

* ತೊಗರಿ ಬೇಳೆ
* ಅಡುಗೆ ಎಣ್ಣೆ
* ಸಕ್ಕರೆ
* ಉಪ್ಪು

ಸಿಎಂ ಬದಲಾವಣೆ ಕುರಿತು ಮುನಿಯಪ್ಪ ಹೇಳಿದ್ದೇನು?: ಸಿಎಂ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಮಗೊಂದು ಹೈಕಮಾಂಡ್ ಇದೆ. ಯಾರು ಮುಖ್ಯಮಂತ್ರಿ ಆಗಿ ಮುಂದುವರಿಯಬೇಕು ಅಥವಾ ಯಾರು ಇಳಿಯಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ನಮಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಸಿದ್ದರಾಮಯ್ಯ ಅವರು ಸಹ ಹೈಕಮಾಂಡ್ ಸೂಚನೆಯನ್ನು ಮೀರದಂತೆ ಕೆಲಸ ಮಾಡುತ್ತಿದ್ದಾರೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರದ ಗಮನ ಕೇವಲ ಜನಪರ ಕೆಲಸಗಳ ಕಡೆಗೆ ಇದೆ ಎಂದು ಮುನಿಯಪ್ಪ ಅವರು ಹೇಳಿದರು. ಅಲ್ಲದೆ, ಸಂಕ್ರಾಂತಿ ಬಳಿಕ ಯಾವುದೇ ಕ್ರಾಂತಿ ಆಗುವುದಿಲ್ಲ. ಅವೆಲ್ಲವೂ ಊಹಾಪೋಹಗಳು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರ ಆಗಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+