Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು
Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಈ ಪ್ರಮುಖಾಂಶಗಳನ್ನು ಗಮನಿಸಲೇಬೇಕಾಗುತ್ತದೆ.
ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ರಾಜ್ಯದ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದೇಗೆ ಹಾಗೂ ಏನೆಲ್ಲ ದಾಖಲೆಗಳು ಬೇಕಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ವೋಟರ್ ಐಡಿ
* ಆಧಾರ್ ಕಾರ್ಡ್
* ಇತ್ತೀಚಿನ ಪಾರ್ಸ್ ಪೋರ್ಟ್
* ಮೊಬೈಲ್ ಸಂಖ್ಯೆ
ಈ ದಾಖಲೆಗಳಿದ್ದರೆ ಮಾತ್ರ ಆನ್ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ kar.nic.in ಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಾಗೂ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ. ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ. ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಕೊನೆಯದಾಗಿ ಅರ್ಜಿಯ ಜೊತೆ ಅಲ್ಲಿ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್












Click it and Unblock the Notifications