Ration Card: ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ: ಇಲ್ಲಿದೆ ಬೇಕಾಗುವ ದಾಖಲೆಗಳ ವಿವರ
Ration Card: ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ಪಡಿತರ ಪಡೆಯಲು ಅಷ್ಟೇ ಅಲ್ಲದೆ, ಹಲವಾರು ಸರ್ಕಾರಿ ಸಲಭ್ಯಗಳಿಗೆ ಅರ್ಜಿ ಸಲ್ಲಿಕೆ ವೇಳೆ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಪ್ಪುಗಳಿದ್ದರೆ, ಯಾವುದೇ ಅರ್ಜಿ ಸಲ್ಲಿಕೆಗೆ ಪರಿಗಣೆಗೆ ತೆಗೆದುಕೊಳ್ಳಲಾಗುವುದಿಲ್ಲ. ಅಂತಹ ಪಡಿತರ ಚೀಟಿದಾರರಿಗೆ ಇದೀಗ ಶುಭಸುದ್ದಿ ಇದ್ದು, ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.
ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾವಣೆ ಮಾಡುವ ಕಾರ್ಯ ಮುಂದುವರೆದಿದೆ. ಈ ಮೂಲಕ ಅನರ್ಹರಿಗೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ನಡುವೆಯೇ ಇದೀಗ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ. ಹಾಗಾದ್ರೆ, ಏನೆಲ್ಲಾ ತಿದ್ದುಪಡಿ ಮಾಡಿಸಬಹುದು ಹಾಗೂ ಬೇಕಾಗುವ ದಾಖಲೆಗಳೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?: ಫಲಾನುಭವಿಗಳು ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್ಸೈಟ್ಗೆ ಭೇಟಿ ನೀಡಬಹುದು.
ಏನೆಲ್ಲಾ ತಿದ್ದುಪಡಿಗೆ ಅವಕಾಶ?
* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ
ಬೇಕಾಗುವ ಅಗತ್ಯ ದಾಖಲೆಗಳು
* ಪಡಿತರ ಚೀಟಿ
* ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಒಬ್ಬ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಮೇಲೆ ಕ್ಲಿಕ್ ಮಾಡಿ
* ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ
* ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ)
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.
ಕಳೆದ ಕೆಲವು ದಿನಗಳ ಹಿಂದೆ ಪಡಿತರ ಚೀಟಿ ತಿದ್ದುಪಡಿಯನ್ನು ನಿಲ್ಲಿಸಲಾಗಿತ್ತು. ಆದರೆ, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ತಮ್ಮ ಪಡಿತರ ಚೀಟಿಗಳಲ್ಲಿ ಏನೇ ತಿದ್ದುಪಡಿ ಇದ್ದರೂ ಮಾಡಿಸಿಕೊಳ್ಳಬಹುದು. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications