Get Updates
Get notified of breaking news, exclusive insights, and must-see stories!

Ration: ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರು ಗಮನಿಸಲೇಬೇಕಾದ ಪ್ರಮುಖ ಮಾಹಿತಿ

Ration: ಸದ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಲ್‌ಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಈ ಮಹತ್ವದ ಕಾರ್ಯ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮುಂದುವರೆದಿದೆ. ಈ ನಡುವೆಯೇ ಇದೀಗ ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅನುಕೂಲವಾಗುವ ಗುಡ್‌ ನ್ಯೂಸ್‌ವೊಂದು ಇದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವರರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಕೂಡ ಪಡೆದುಕೊಂಡಿದ್ದ, ಇಂತಹರಿಗೆ ಕಡಿವಾಣ ಹಾಕುವ ಕಾರ್ಯಚರಣೆಯನ್ನಯ ಸರ್ಕಾರ ಮುಂದುವರೆಸಿದೆ. ಈ ನಡುವೆಯೆ ಪಡಿತರ ಚೀಟಿದಾರರು ಗಮನಿಸಲೇಬೇಕಾದ ಮಹತ್ವದ ಮಾಹಿಯೊಂದನ್ನು ಇಲ್ಲಿ ನೀಡಲಾಗಿದೆ.

Ration Card Update Major Information for BPL and Antyodaya Cardholders

ಯಾರಿಗೆ ಎಷ್ಟು ಕೆಜಿ ಅಕ್ಕಿ?: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025ರ ಮಾಹೆಗೆ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 21 ಕೆ.ಜಿ ರಾಗಿ ಹಾಗೂ 14 ಕೆ.ಜಿ ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿ ಹಾಗೂ 2 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಇದರ ಜೊತೆಗೆ ಕೆಲವೊಂದು ಮಹತ್ವದ ಅಪ್ಡೇಟ್‌ಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಮತ್ತು ಪಿಎಚ್‌ಎಚ್‌ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆಜಿ ಅನ್ನಭಾಗ್ಯ ಅಕ್ಕಿಯನ್ನು ನೀಡಲಾಗುತ್ತದೆ.

ರಾಜ್ಯ ವ್ಯಾಪ್ತಿಯ ಪ್ರತಿ ಪಿ.ಎಚ್.ಎಚ್ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿಯಂತೆ ಹಂಚಿಕೆ ಪ್ರಮಾಣವನ್ನು ನಿಗದಿಪಡಿಸಿ ಹಂಚಿಕೆ ನೀಡಿದೆ. ಪ್ರಸ್ತುತ ಡಿಸೆಂಬರ್-2025ರ ಮಾಹೆಗೆ ಆದ್ಯತೇತರ ಪಡಿತರ ಚೀಟಿ (ಎಪಿಎಲ್) ಪಡಿತರ ಚೀಟಿದಾರರಿಗೆ ಯಾವುದೇ ಆಹಾರಧಾನ್ಯ ಹಂಚಿಕೆ ಆಗಿರುವುದಿಲ್ಲ ಎಂದು ಪಡಿತರ ಚೀಟಿದಾರರಿಗೆ ತಿಳಿಸಲಾಗಿದೆ.

ಹಾಸನ ಜಿಲ್ಲೆಯ ಆಲೂರು, ಬೇಲೂರು, ಅರಕಲಗೂಡು ಮತ್ತು ಸಕಲೇಶಪುರ ತಾಲ್ಲೂಕಿನ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ ಗ್ರಾಮಾಂತರ ಪ್ರದೇಶದ ಎಎವೈ ಮತ್ತು ಪಿಎಚ್‌ಎಚ್‌ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ ಎರಡು ಲೀಟರ್‌ನಂತೆ ಪ್ರತಿ ಲೀಟರ್‌ಗೆ 35 ರೂಪಾಯಿನಂತೆ ಹಣ ಬಿಡುಗಡೆ ಮಾಡಲಾಗಿದೆ.

ಮಹತ್ವದ ಮಾಹಿತಿ: ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಅಡಿಯಲ್ಲಿ ಯಾವುದೇ ರಾಜ್ಯದ ಪಡಿತರ ಚೀಟಿದಾರರು, ಯಾವುದೇ ವರ್ಗದ ಪಡಿತರ ಚೀಟಿದಾರರು, ಯಾವ ನ್ಯಾಯಬೆಲೆ ಅಂಗಡಿಯಲ್ಲಾದರೂ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ಇಲ್ಲಿ ನೀಡಲಾಗಿರುವ ಸಂಖ್ಯೆಗೆ ಕರೆ ಮಾಡಬಹುದು.

ದೂರವಾಣಿ ಸಂಖ್ಯೆಗಳ ವಿವರ: ದೂರವಾಣಿ ಸಂಖ್ಯೆ 1967 ಹಾಗೂ 1800-425-9339 ಮತ್ತು 14445ಕ್ಕೆ ಹಾಗೂ ಆಯಾ ತಾಲ್ಲೂಕಿನಲ್ಲಿ ಇರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಜಂಟಿ ನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಕೆ ಮಾಡಬಹುದಾಗಿದೆ. ಸದರಿ ಯೋಜನೆಯಡಿ ವಿತರಣೆ ಮಾಡಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹವರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು. ಸದರಿ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತು ಮಾಡಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+