Get Updates
Get notified of breaking news, exclusive insights, and must-see stories!

Ration Card: ಗೃಹಲಕ್ಷ್ಮಿಯರೇ ಗಮನಿಸಿ! ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 1 ರಿಂದ 10 ರವರೆಗೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ. ಪ್ರತಿ ಮನೆಯ ಯಜಮಾನಿಗೆ 2,000 ರೂಪಾಯಿ ಪಡೆಯುವ 'ಗೃಹ ಲಕ್ಷ್ಮಿ' ಯೋಜನೆಯ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿದಾರರು ಈಗ ಕುಟುಂಬದ ಮುಖ್ಯಸ್ಥರು, ವಿಳಾಸ ಮತ್ತು ಇತರ ವಿವರಗಳನ್ನು ಬದಲಾಯಿಸಬಹುದು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿದೆ. ಬಿಪಿಎಲ್, ಎಪಿಎಲ್, ಮತ್ತು ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿದ್ದರೆ ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. ಈ ಪಡಿತರ ಚೀಟಿಗಳಲ್ಲಿ ಹೆಸರು ಸೇರಿಸುವುದು, ಬದಲಾವಣೆ ಮಾಡಲು ಈಗ ಅವಕಾಶ ಕಲ್ಪಿಸಲಾಗಿದೆ.

 Ration Card Update Start From September 1 : Help Gruha Lakshmi beneficiaries

ಸರ್ಕಾರವು ಈ ಹಿಂದೆ ಪಡಿತರ ಚೀಟಿಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿ ನೀಡಿರಲಿಲ್ಲ ಮತ್ತು ಈಗ, ರಾಜ್ಯ ಸರ್ಕಾರ ವಿವರಗಳನ್ನು ಮಾರ್ಪಡಿಸಲು ಅವಕಾಶವನ್ನು ನೀಡಿದೆ. ಇದರಿಂದ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಲಕ್ಷಾಂತರ ಮಹಿಳೆಯರು ಅರ್ಹತೆ ಪಡೆಯುವ ಸಾಧ್ಯತೆ ಇದೆ.

ಈ ಕೇಂದ್ರಗಳಲ್ಲಿ ತಿದ್ದುಪಡಿ

ಪಡಿತರ ಚೀಟಿಯಲ್ಲಿ ಮಾಹಿತಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿತ್ತು. ಸರ್ವರ್ ಸಮಸ್ಯೆಯಿಂದ ಹಲವರಿಗೆ ತಿದ್ದುಪಡಿ ಮಾಡಲು ಸಾಧ್ಯವಾಗಿರಲಿಲ್ಲ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ, ಈಗ ಮತ್ತೆ 10 ದಿನಗಳ ಕಾಲ ಅವಕಾಶ ನೀಡಿದೆ.

ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಅವಕಾಶ ನೀಡಲಾಗಿದ್ದು, ಮನೆ ಯಜಮಾನಿ ಹೆಸರನ್ನು ನಮೂದು ಮಾಡಬಹುದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಾರ, 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ಕುಟುಂಬದ ಮುಖ್ಯಸ್ಥರಾಗಿ ಪುರುಷರನ್ನು ಹೊಂದಿದ್ದು, ಅವರು ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಿದೆ.

1.30 ಕೋಟಿ ಕಾರ್ಡ್‌ದಾರರು ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ಈ ಪೈಕಿ 1.10 ಕೋಟಿ ಜನರು ಈವರೆಗೆ ಯೋಜನೆಯ ಲಾಭ ಪಡೆಯಲು ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಹೇಳಿದೆ.

ಆಗಸ್ಟ್ 30 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಮೈಸೂರಿನಲ್ಲಿ ಯೋಜನೆಗೆ ಚಾಲನೆ ನೀಡಿದರು. ಯೋಜನೆಗೆ ನೋಂದಾಯಿಸಿದ ಫಲಾನುಭವಿಗಳಿಗೆ ನೇರ ಬ್ಯಾಂಕ್ ವರ್ಗಾವಣೆಯನ್ನು ಪ್ರಕ್ರಿಯೆಗೊಳಿಸಲು ಸರ್ಕಾರ ಪ್ರಾರಂಭಿಸಿದೆ.

ಇಲಾಖೆಯಲ್ಲಿ 2.90 ಲಕ್ಷ ಅರ್ಜಿಗಳು ಬಾಕಿ ಇರುವುದರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸ್ವೀಕರಿಸುವುದನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬಾಕಿ ಇರುವ ಅರ್ಜಿಗಳನ್ನು ತೆರವುಗೊಳಿಸಿದ ನಂತರವೇ ಹೊಸ ಅರ್ಜಿಗಳಿಗೆ ಅವಕಾಶ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+