Ration Card: ಗೃಹಲಕ್ಷ್ಮಿಯರೇ ಗಮನಿಸಿ! ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 1 ರಿಂದ 10 ರವರೆಗೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ. ಪ್ರತಿ ಮನೆಯ ಯಜಮಾನಿಗೆ 2,000 ರೂಪಾಯಿ ಪಡೆಯುವ 'ಗೃಹ ಲಕ್ಷ್ಮಿ' ಯೋಜನೆಯ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿದಾರರು ಈಗ ಕುಟುಂಬದ ಮುಖ್ಯಸ್ಥರು, ವಿಳಾಸ ಮತ್ತು ಇತರ ವಿವರಗಳನ್ನು ಬದಲಾಯಿಸಬಹುದು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿದೆ. ಬಿಪಿಎಲ್, ಎಪಿಎಲ್, ಮತ್ತು ಅಂತ್ಯೋದಯ ಕಾರ್ಡ್ಗಳನ್ನು ಹೊಂದಿದ್ದರೆ ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. ಈ ಪಡಿತರ ಚೀಟಿಗಳಲ್ಲಿ ಹೆಸರು ಸೇರಿಸುವುದು, ಬದಲಾವಣೆ ಮಾಡಲು ಈಗ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರವು ಈ ಹಿಂದೆ ಪಡಿತರ ಚೀಟಿಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿ ನೀಡಿರಲಿಲ್ಲ ಮತ್ತು ಈಗ, ರಾಜ್ಯ ಸರ್ಕಾರ ವಿವರಗಳನ್ನು ಮಾರ್ಪಡಿಸಲು ಅವಕಾಶವನ್ನು ನೀಡಿದೆ. ಇದರಿಂದ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಲಕ್ಷಾಂತರ ಮಹಿಳೆಯರು ಅರ್ಹತೆ ಪಡೆಯುವ ಸಾಧ್ಯತೆ ಇದೆ.
ಈ ಕೇಂದ್ರಗಳಲ್ಲಿ ತಿದ್ದುಪಡಿ
ಪಡಿತರ ಚೀಟಿಯಲ್ಲಿ ಮಾಹಿತಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿತ್ತು. ಸರ್ವರ್ ಸಮಸ್ಯೆಯಿಂದ ಹಲವರಿಗೆ ತಿದ್ದುಪಡಿ ಮಾಡಲು ಸಾಧ್ಯವಾಗಿರಲಿಲ್ಲ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ, ಈಗ ಮತ್ತೆ 10 ದಿನಗಳ ಕಾಲ ಅವಕಾಶ ನೀಡಿದೆ.
ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಅವಕಾಶ ನೀಡಲಾಗಿದ್ದು, ಮನೆ ಯಜಮಾನಿ ಹೆಸರನ್ನು ನಮೂದು ಮಾಡಬಹುದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಾರ, 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳು ಕುಟುಂಬದ ಮುಖ್ಯಸ್ಥರಾಗಿ ಪುರುಷರನ್ನು ಹೊಂದಿದ್ದು, ಅವರು ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಿದೆ.
1.30 ಕೋಟಿ ಕಾರ್ಡ್ದಾರರು ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ಈ ಪೈಕಿ 1.10 ಕೋಟಿ ಜನರು ಈವರೆಗೆ ಯೋಜನೆಯ ಲಾಭ ಪಡೆಯಲು ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಹೇಳಿದೆ.
ಆಗಸ್ಟ್ 30 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಮೈಸೂರಿನಲ್ಲಿ ಯೋಜನೆಗೆ ಚಾಲನೆ ನೀಡಿದರು. ಯೋಜನೆಗೆ ನೋಂದಾಯಿಸಿದ ಫಲಾನುಭವಿಗಳಿಗೆ ನೇರ ಬ್ಯಾಂಕ್ ವರ್ಗಾವಣೆಯನ್ನು ಪ್ರಕ್ರಿಯೆಗೊಳಿಸಲು ಸರ್ಕಾರ ಪ್ರಾರಂಭಿಸಿದೆ.
ಇಲಾಖೆಯಲ್ಲಿ 2.90 ಲಕ್ಷ ಅರ್ಜಿಗಳು ಬಾಕಿ ಇರುವುದರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸ್ವೀಕರಿಸುವುದನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬಾಕಿ ಇರುವ ಅರ್ಜಿಗಳನ್ನು ತೆರವುಗೊಳಿಸಿದ ನಂತರವೇ ಹೊಸ ಅರ್ಜಿಗಳಿಗೆ ಅವಕಾಶ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು











Click it and Unblock the Notifications