Ration card: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ ತಿಳಿಯಿರಿ-ಇಲ್ಲಿದೆ ಮಾಹಿತಿ
ಬೆಂಗಳೂರು, ಡಿಸೆಂಬರ್, 01: ಪಡಿತರ ಚೀಟಿ ತಿದ್ದುಪಡಿಗೆ ಈಗಾಗಲೇ ಕೆಲವು ಕೆಲವು ಜಿಲ್ಲೆಗಳಿಗೆ ಅವಕಾಶ ನೀಡಲಾಗಿದ್ದು, ಅವಧಿಯೂ ಮುಗಿದಿದೆ. ಇನ್ನು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶವನ್ನು ಕಲ್ಪಿಸಿದೆ.
ಫಲಾನುಭವಿಗಳು ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಭಾನುವಾರ (ಡಿಸೆಂಬರ್ 3) ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಕೆಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟಿರುವ ಆಹಾರ ಇಲಾಖೆ, ಎಲ್ಲರಿಗೂ ಭಾನುವಾರ ಒಂದು ದಿನ ಮಾತ್ರ ಅವಕಾಶ ಕಲ್ಪಿಸಿದೆ.

ತಿದ್ದುಪಡಿಗೆ ನವೆಂಬರ್ 30 ಕೊನೇ ದಿನ
ಬೆಂಗಳೂರು, ನವೆಂಬರ್, 30: ಪಡಿತರ ಸರಿಯಾಗಿ ಸಿಗಬೇಕೆಂದರೆ ಪಡಿತರ ಚೀಟಿಯಲ್ಲಿ ಯಾವುದೇ ಲೋಪಗಳು ಇರಬಾರದು. ಒಂದು ವೇಳೆ ಅಂತಹ ಲೋಪಗಳು ಇದ್ದಲ್ಲಿ ತಿದ್ದಪಡಿಗೆ ಮಾಡಿಸಲು ಇಂತಿಷ್ಟು ದಿನಗಳು ಅಂತಾ ಅವಕಾಶವನ್ನು ನೀಡಲಾಗುತ್ತದೆ. ಇನ್ನು ಈ ಜಿಲ್ಲೆಯಲ್ಲಿ ನವೆಂಬರ್ 30ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಹಾಗಾದರೆ ಸಮಯಗಳ ವಿವರವನ್ನು ಇಲ್ಲಿ ಗಮನಿಸಿ.
ಬಡಜನರಿಗೆ ಯಾವುದೇ ತೊಂದರೆ ಆಗಬಾರದೆಂದು ಹೊಸ ರೇಷನ್ ಕಾರ್ಡ್ ಅಥವಾ ತಿದ್ದುಪಡಿ ಮಾಡಿಸಲು ಆಗಾಗ ಅವಕಾಶ ನೀಡಲಾಗುತ್ತಿದೆ. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ಇದು ನವೆಂಬರ್ 29ರಿಂದ ಪ್ರಾರಂಭವಾಗಿದ್ದು, ನವೆಂಬರ್ 30ರಂದು ಅರ್ಜಿ ಸಲ್ಲಿಸಲು ಕೊನೇ ದಿನವಾಗಿತ್ತು.
ಶೀಘ್ರದಲ್ಲಿಯೇ ಈ ಅವಕಾಶವನ್ನು ಇತರ ಜಿಲ್ಲೆಗಳಿಗೆ ನೀಡಲು ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಹೀಗಾಗಿ ಉಳಿದವರೂ ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಸಿದ್ಧರಾಗಿ. ಫಲಾನುಭವಿಗಳ ಜಿಎಸ್ಸಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅವಕಾಶ ನೀಡಿರುವುದರ ಜೊತೆಗೆ ಹೊಸ ಆದ್ಯತಾ ಪಡಿತರ ಚೀಟಿಗೂ ಅರ್ಜಿ ಸಲ್ಲಿಸಬಹುದು.
ಜಿಎಸ್ಸಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆ, ಹೊಸ ಪಡಿತರ ಕಾರ್ಡ್ ಪಡೆಯಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಅವಕಾಶವನ್ನು ನೀಡಲಾಗಿದೆ.
ತಿದ್ದುಪಡಿಯ ಸಮಯದ ವಿವರ ತಿಳಿಯಿರಿ
ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿತ್ತು.
ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 3ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ದಿನ ಮಾತ್ರ ಅವಕಾಶ ನೀಡಲಾಗಿದ್ದು, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಆದರೆ ಖಾಸಗಿ ಆನ್ಲೈನ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಸಲು ಅನುಮತಿ ನೀಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.
ತಿದ್ದುಪಡಿಗೆ ದಾಖಲೆಗಳೇನು ಏನೇನು ಬೇಕು?
ಹೊಸ ಸದಸ್ಯರ ಸೇರ್ಪಡೆ ಮಾಡಬೇಕಿದ್ದರೆ ಅವರ ಆಧಾರ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು. 5 ವರ್ಷದ ಒಳಗಿನ ಮಕ್ಕಳನ್ನು ಸೇರ್ಪಡೆ ಮಾಡಬೇಕಾದರೆ ಮನೆಯ ಹಿರಿಯ ಸದಸ್ಯರ ಆಧಾರ್ ಕಾರ್ಡ್ ಜೊತೆಗೆ ಆ ಮಗುವಿನ ಜನನ ಪ್ರಮಾಣ ಪತ್ರವನ್ನು ತೆಗೆದುಕೊಂಡು ಹೋಗಬೇಕು. ಹೆಸರು ತಿದ್ದುಪಡಿಗೆ ಆಧಾರ್ಕಾರ್ಡ್ ಅಥವಾ ಇತರೆ ಅಧಿಕೃತ ಗುರುತಿನ ಚೀಟಿಯನ್ನು ನೀಡಬೇಕು.
ಹೊಸ ಪಡಿತರ ಚೀಟಿಗೆ ಬೇಕಾದ ದಾಖಲಾತಿಗಳು
1. ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
2. ಮನೆಯ ವಿದ್ಯುತ್ ಬಿಲ್
3. ನಿವಾಸದ ಪೂರ್ಣ ವಿಳಾಸ
4. ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ಮನೆ ವಿಳಾಸದ ಹತ್ತಿರದ ಸ್ಥಳದ ಗುರುತು.
5. ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
6. ಮೊಬೈಲ್ ಸಂಖ್ಯೆ
7. ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ. ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications