ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆಗೆ ರವಿ ಕೃಷ್ಣಾರೆಡ್ಡಿ ಒತ್ತಾಯ
ಬೆಂಗಳೂರು, ಜುಲೈ 05; ಕರ್ನಾಟಕ ಹೈಕೋರ್ಟ್ ನ್ಯಾಯೂಮೂರ್ತಿ ಎಚ್. ಪಿ. ಸಂದೇಶ್ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದೆ.
"ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ ಎಂದು ತರಾಟೆಗೆ ತೆಗೆದುಕೊಂಡ ಹಿನ್ನಲೆಯಲ್ಲಿ ನಿನ್ನ ವರ್ಗಾವಣೆಯಾದೀತು ಹುಷಾರಾಗಿರು ಎಂದು ನ್ಯಾಯಮೂರ್ತಿಯೊಬ್ಬರು ನನಗೆ ಬೆದರಿಕೆ ಒಡ್ಡಿದ್ದಾರೆ' ಎಂದು ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಮೇಲೆ ದಶಕದ ಹಿಂದೆ ಬಳ್ಳಾರಿ ಗಣಿ ಅಕ್ರಮಗಳಿಗೆ ಸಹಕರಿಸಿದ ಆರೋಪಗಳೂ ಸೇರಿದಂತೆ ಹಲವು ಗುರುತರ ಆರೋಪಗಳಿವೆ ಎಂದು ಹೇಳಿದ್ದಾರೆ.

ಈಗ ಅವರು ರಾಜ್ಯ ಎಸಿಬಿಯ ಮುಖ್ಯಸ್ಥರು. ಇವರ ವಿರುದ್ಧವೇ ಇತ್ತೀಚೆಗೆ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಕಿಡಿ ಕಾರಿದ್ದು ಮತ್ತು ಈ ಭ್ರಷ್ಟರೆಲ್ಲಾ ತನ್ನನ್ನೇ ವರ್ಗಾವಣೆ ಮಾಡಿಸುವಷ್ಟು ಸಶಕ್ತರು ಎಂದಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯ ನ್ಯಾಯಾಂಗದ ಇತಿಹಾಸದಲ್ಲಿ ಹೀಗೆಯೇ ನಿಷ್ಟುರವಾಗಿ ಮತ್ತು ನ್ಯಾಯಯುತವಾಗಿ ನ್ಯಾಯಾಂಗದ ಜವಾಬ್ದಾರಿ ನಿರ್ವಹಿಸುತ್ತಿದ್ದ ಸತ್ಯನಾರಾಯಣ, ರಮೇಶ್ರಂತಹ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿದ ಕೆಟ್ಟ ಉದಾಹರಣೆಗಳಿವೆ.
ಪ್ರಾಮಾಣಿಕ ಮತ್ತು ನ್ಯಾಯಪರ ನ್ಯಾಯಮೂರ್ತಿಗಳ ವರ್ಗಾವಣೆಗಳಿಂದ ನಷ್ಟಕ್ಕೊಳಗಾಗುವುದು ಅಂತಿಮವಾಗಿ ರಾಜ್ಯದ ಜನತೆಯೇ. ಈ ಬಾರಿ ಹಾಗೆ ಅಗದಂತೆ ಈಗಿನ ಪರಮಭ್ರಷ್ಟ ಸರ್ಕಾರ ಮತ್ತು ಅಧಿಕಾರರೂಢ ನೀಚ ರಾಜಕಾರಣಿಗಳು ನೋಡಿಕೊಳ್ಳಬೇಕು ಎಂದು ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದ್ದಾರೆ.
ಇದೇ ಸಮಯದಲ್ಲಿ ಕಳಂಕಿತ ವ್ಯಕ್ತಿಯೊಬ್ಬ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥನಾಗಿರುವುದು ಅಕ್ಷಮ್ಯ, ನಾಚಿಕೆಗೇಡು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಭ್ರಷ್ಟ ಪೊಲೀಸ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ರನ್ನು ಈ ಕೂಡಲೇ ಎಸಿಬಿಯಿಂದ ತೊಲಗಿಸಿ ಪ್ರಾಮಾಣಿಕ ಅಧಿಕಾರಿಯೊಬ್ಬರನ್ನು ಆ ಸ್ಥಾನಕ್ಕೆ ನೇಮಿಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸರ್ಕಾರವನ್ನು ಆಗ್ರಹಿಸಿದೆ.
ಭ್ರಷ್ಟ ಮತ್ತು ನಾಲಾಯಕ್ ಸಂಸ್ಥೆ ಆಗಿರುವ ಎಸಿಬಿಯನ್ನು ರದ್ದು ಮಾಡಿ, ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಹೋರಾಟ ಮತ್ತು ಅಧಿಕಾರದ ಮೂಲಕ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮಾಡಲಿದೆ ಎಂದು ರವಿಕೃಷ್ಣಾ ರೆಡ್ಡಿ ಹೇಳಿದ್ದಾರೆ.
ನ್ಯಾಯಾಂಗದ ಮೇಲೆಯೇ ದುಷ್ಪ್ರಭಾವ ಬೀರುವ ಭ್ರಷ್ಟ ವ್ಯವಸ್ಥೆಯ ಕುರಿತು ಮಾತನಾಡಿರುವ ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಮಾತುಗಳನ್ನು ರಾಜ್ಯದ ಹಿತದೃಷ್ಟಿಯಿಂದ ಗಂಭೀರವಾಗಿ ಆಲಿಸಬೇಕು ಮತ್ತು ಅವರಿಗೆ ನೈತಿಕ ಬೆಂಬಲ ನೀಡಬೇಕು ಎಂದು ರಾಜ್ಯದ ಜನತೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮನವಿ ಮಾಡಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications