ಆಪರೇಷನ್ ಕಮಲ ಕುರಿತು ಶ್ರೀನಿವಾಸ ಗೌಡ ಹೇಳಿಕೆ : ಎಸಿಬಿಗೆ ಪ್ರಶ್ನೆಗಳು
ಬೆಂಗಳೂರು, ಮಾರ್ಚ್ 22 : 'ಶಾಸಕ ಸ್ಥಾನಕ್ಕೆ ನನ್ನಿಂದ ರಾಜೀನಾಮೆ ಕೊಡಿಸಲು ಬಿಜೆಪಿ ಶಾಸಕರಾದ ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಅವರು 5 ಕೋಟಿ ರೂ. ಮುಂಗಡ ನೀಡಿದ್ದರು' ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರ ಈ ಹೇಳಿಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.
ಈ ಹೇಳಿಕೆ ಆಧರಿಸಿ ಸಾಮಾಜಿ ಕಾರ್ಯಕರ್ತ ಹನುಮೇಗೌಡ, ಪ್ರಶಾಂತ್, ಭ್ರಷ್ಟಾಚಾರ ಮುಕ್ತ ಕರ್ನಾಟಕ ವೇದಿಕೆ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಎಸಿಬಿಗೆ ದೂರು ನೀಡಿದ್ದರು. ಈ ದೂರಿನ ಕುರಿತು ಎಸಿಬಿ ತನಿಖೆ ನಡೆಯುತ್ತಿದೆ.
ಎಸಿಬಿ ವಿಚಾರಣೆಗೆ ಹಾಜರಾದ ಶ್ರೀನಿವಾಸ ಗೌಡ ಅವರು, 'ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ನಾಯಕರು ನನಗೆ 5 ಕೋಟಿ ಮುಂಗಡ ನೀಡಿರಲಿಲ್ಲ. ಆಪರೇಷನ್ ಕಮಲ ಪ್ರಯತ್ನವನ್ನು ವಿಫಲಗೊಳಿಸಲು ಸುಳ್ಳು ಹೇಳಿದೆ' ಎಂದು ಉಲ್ಟಾ ಹೊಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರವಿಕೃಷ್ಣ ರೆಡ್ಡಿ ಅವರು, ಲಂಚದ ಪ್ರಕರಣ ಎಸಿಬಿ ವಿಚಾರಣೆಯಲ್ಲಿ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎಂದು ಆರೋಪಿಸಿದ್ದಾರೆ ಮತ್ತು ಎಸಿಬಿಯ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಎಸಿಬಿಗೆ ಪ್ರಶ್ನೆಗಳು
* ಸಾಂದರ್ಭಿಕ ಸಾಕ್ಷಗಳನ್ನು ಗಮನಿಸಿದಾಗ ಶಾಸಕ ಗೌಡರು ಒಂದೂವರೆ ತಿಂಗಳ ಹಿಂದೆ ಮಾಡಿದ ನೇರ ಆಪಾದನೆಗೆ ಇಲ್ಲಿಯವರೆಗೂ ಬಿಜೆಪಿಯ ಮೂವರೂ ನಾಯಕರು (ಶಾಸಕರಾದ ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್ ಮತ್ತು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಪ್ರತಿಕ್ರಿಯಿಸಿಲ್ಲ. ಆರೋಪವನ್ನು ನಿರಾಕರಿಸಿಲ್ಲ.
* ಇಷ್ಟೇ ಸಾಕು ಅವರಿಗೂ ಈ ಪ್ರಕರಣ ಎಲ್ಲಿಗೆ ಬೇಕಾದರೂ ಹೋಗಬಹುದು ಎಂಬ ಭಯ ಹುಟ್ಟಿದೆ ಎಂದು ಭಾವಿಸಲು. ಹಾಗಾಗಿ ಅವರನ್ನು ಇಲ್ಲಿಯವರೆಗೂ ಪ್ರತ್ಯೇಕವಾಗಿ ಯಾಕೆ ನೀವು ವಿಚಾರಣೆಗೆ ಕರೆದಿಲ್ಲ?
* ಶಾಸಕ ಶ್ರೀನಿವಾಸಗೌಡ ಮತ್ತು ಇತರ ಮೂವರು ಬಿಜೆಪಿ ನಾಯಕರ ಮಧ್ಯೆ ನಡೆದಿರಬಹುದಾದ ಫೋನ್ ಕರೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೀರಾ?

ಮಾಹಿತಿ ಲಭ್ಯವಾಗಿದೆಯೇ?
* ಈ ಸದರಿ ಮೂವರು ಬಿಜೆಪಿ ನಾಯಕರುಗಳು ಮತ್ತು ಶಾಸಕ ಶ್ರೀನಿವಾಸ ಗೌಡರ ಫೋನ್ ಕರೆಗಳ ಮಾಹಿತಿಯನ್ನು ಸಂಗ್ರಹಿಸಿ, ಅದನ್ನು ಪರಿಶೀಲಿಸಿದಾಗ ನಿಮಗೆ ನಾಲ್ಕು ಜನ ಒಂದೇ ಕಡೆ ಏಕಕಾಲದಲ್ಲಿ ಇರುವ ಮಾಹಿತಿ ಲಭ್ಯವಾಗಿದೆಯೇ, ಇಲ್ಲವೇ?
* ಶಾಸಕ ಶ್ರೀನಿವಾಸ ಗೌಡರ ಮನೆಯ ಸುತ್ತಮುತ್ತ ಇರಬಹುದಾದ ಸಿಸಿಟಿವಿ ಸಾಕ್ಷ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಿದ್ದೀರಾ?

ಮಂಪರು ಪರೀಕ್ಷೆ
* ಈ ಪ್ರಕರಣದಲ್ಲಿ ಶ್ರೀನಿವಾಸ ಗೌಡರನ್ನು ಮಂಪರು/ ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಯಾವ ಕ್ರಮ ಕೈಗೊಂಡಿದ್ದೀರಿ?
* ಹಣ ನೀಡಿದ್ದರು ಎನ್ನಲಾದ ಬಿಜೆಪಿ ನಾಯಕರುಗಳ ಈ ಅವಧಿಯ ಬ್ಯಾಂಕ್ ಖಾತೆ ಮತ್ತು/ಅಥವಾ ಇತರೆ ಹಣಕಾಸು ವಹಿವಾಟು ವಿವರಗಳನ್ನು ಪರಿಶೀಲಿಸಿದ್ದೀರಾ?

ತನಿಖೆಯನ್ನು ಮಾಡಿ
ಇಂತಹ ಗಂಭೀರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮಾಡಬೇಕಾದ ಪ್ರಾಥಮಿಕ ತನಿಖಾ ಕೆಲಸಗಳು. ಹಾಗಾಗಿ ತಾವುಗಳು ಇಲ್ಲಿಯವರೆಗೂ ಇದನ್ನು ಮಾಡದೇ ಇದ್ದಲ್ಲಿ ದಯವಿಟ್ಟು ಈ ನಿಟ್ಟಿನಲ್ಲಿ ತನಿಖೆ ಮಾಡಿ ಎಂದು ಕೋರುತ್ತೇನೆ. ಆ ಮೂಲಕ, ಭ್ರಷ್ಟಾಚಾರ ನಿಗ್ರಹ ದಳವು ಒಂದು ಸ್ವತಂತ್ರ ತನಿಖಾ ಸಂಸ್ಥೆ ಮತ್ತು ಯಾವುದೇ ಪಟ್ಟಭದ್ರರ ಪ್ರಭಾವಕ್ಕೆ ಮಣಿಯುವುದಿಲ್ಲ ಎಂಬುದನ್ನು ನಿರೂಪಿಸಿ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications