ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕ: ಬಸವರಾಜ ಬೊಮ್ಮಾಯಿ

ಬೆಂಗಳೂರು, ನವೆಂಬರ್ 28: ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕನಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸೋಮವಾರ ಭಾರತೀಯ ರಿಸರ್ವ್ ಬ್ಯಾಂಕಿನ ಪರಿಶಿಷ್ಟ ಜಾತಿ / ಪಂಗಡ ವರ್ಗದ ನೌಕರರ ಸಂಘದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರ್.ಬಿ.ಐ ತನ್ನದೇ ಇತಿಹಾಸ ಹೊಂದಿದೆ. ಸ್ವತಂತ್ರ ಪೂರ್ವದಿಂದ ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ದೇಶದ ಆರ್ಥಿಕತೆಯನ್ನು ನಿಯಂತ್ರಣ ಮಾಡುತ್ತಿರುವ ಆರ್.ಬಿ.ಐ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದು ಸಂತಸದ ಸಂಗತಿ. ಸಂವಿಧಾನ ಪ್ರಜಾಪ್ರಭುತ್ವದ ಆತ್ಮ ಇದ್ದಂತೆ. ಸಂವಿಧಾನ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬಂದಿದೆ. ಇಷ್ಟು ದೊಡ್ಡ ಜನಸಂಖ್ಯೆ, ವೈವಿಧ್ಯಮಯ ಸಂಸ್ಕೃತಿ, ಭಾಷೆಗಳಿರುವ ದೇಶ ಒಂದು ಸಂವಿಧಾನವನ್ನು ಒಪ್ಪಿ, ಒಂದು ರಾಷ್ಟ್ರ, ಪ್ರಜಾಪ್ರಭುತ್ವ ವಾಗಿ ಗಣತಂತ್ರವಾಗಿ ಒಗ್ಗೂಡಿ ಕೆಲಸ ಮಾಡುತ್ತಿರುವುದು ಇಂದಿನ ಕಾಲದಲ್ಲಿ ಒಂದು ಅದ್ಭುತವೇ ಸರಿ ಎಂದರು.

ಆರ್ಥಿಕತೆಯಲ್ಲಿ ಕೇವಲ ಫಲಿತಾಂಶಗಳಿವೆ. ಫಲಿತಾಂಶ ಪಡೆಯಲು ಯೋಜನೆ, ಕ್ರಿಯೆ ಹಾಗೂ ಗುರಿ ಇರಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲವು ಸವಾಲುಗಳಿವೆ. ಆದರೆ ಆರ್ಥಿಕತೆಯನ್ನು ಸರಿದೂಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕೋವಿಡ್ ನಂತರದಲ್ಲಿ ಆರ್ಥಿಕತೆಯಲ್ಲಿ ಪುಟಿದೆದ್ದಿರುವ ಕೆಲವೇ ರಾಷ್ಟಗಳಲ್ಲಿ ನಮ್ಮ ದೇಶವೂ ಒಂದು. ಪ್ರಧಾನಮಂತ್ರಿಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆರ್ಥಿಕತೆಗೆ ವೇಗ ನೀಡಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ಮಹತ್ವದ ನಿರ್ಧಾರ ಗಳನ್ನು ಕೈಗೊಂಡಿದ್ದಾರೆ ಎಂದರು.

ಸಾಮಾಜಿಕ ನ್ಯಾಯ ದೊರಕಿಸಲು ಆರ್ಥಿಕತೆ ಪ್ರಮುಖ ಪಾತ್ರ

ಆರ್.ಬಿ.ಐ ಭಾರತದ ಆರ್ಥಿಕತೆ ಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಾಮಾಜಿಕ ನ್ಯಾಯ ದೊರಕಿಸಲು ಆರ್ಥಿಕತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಂಬೇಡ್ಕರ್ ಅವರು ಅರಿತೇ ಆರ್.ಬಿ.ಐ ಹುಟ್ಟುಹಾಕಿದರು. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ವಿಶ್ವ ದಲ್ಲಿಯೇ ನಂಬರ್ 1 ದೇಶವಾಗುವತ್ತ ನಾವು ಶ್ರಮಿಸಬೇಕು ಎಂದು ತಿಳಿಸಿದರು.

RBI, protector of Indian economy says CM Bommai

ಆರ್.ಬಿ. ಐ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಉನ್ನತ ಮಟ್ಟದ ಧ್ಯೇಯ, ತತ್ವವನ್ನಿಟ್ಟುಕೊಂಡು ಕಾನೂನು ಮತ್ತು ಸಂವಿಧಾನದ ಅನುಗುಣವಾಗಿ ಕೆಲಸ ಮಾಡುತ್ತಿರುವುದರಿಂದ ಭಾರತ ದೇಶದ ಆರ್ಥಿಕತೆ ಸಧೃಢವಾಗಿ ಬೆಳೆಯುತ್ತಿದೆ. ಇದು ನಮ್ಮ ಸಂವಿಧಾನದಿಂದ ಸಾಧ್ಯವಾಗಿದೆ. ಕಾರ್ಯಾಂಗ, ನ್ಯಾಯಾಂಗ ಯಾವುದೇ ರಂಗವಿದ್ದರೂ ಸಂವಿಧಾನಬದ್ಧವಾಗಿ ನಡೆದುಕೊಂಡಾಗ ಮಾತ್ರ ನ್ಯಾಯ ನೀತಿಯಿಂದ ಇರುತ್ತದೆ. ಸಂವಿಧಾನ ಶ್ರೇಷ್ಠ ಗ್ರಂಥ. ಜಗತ್ತಿನ ಎಲ್ಲಾ ತತ್ತ್ವಗಳನ್ನು ಆಯ್ದು ಅದರ ಉತ್ಕೃಷ್ಟ ಗುಣಗಳನ್ನು ಸೇರಿಸಿ ಸಂವಿಧಾನವಾಗಿದೆ. ಸಮಾನ ಅವಕಾಶಗಳನ್ನು ನೀಡುವ ಸಂವಿಧಾನದಿಂದಲೇ ಸ್ವತಂತ್ರ ಭಾರತ ತನ್ನ ಶಕ್ತಿಯನ್ನು ಪಡೆಯುತ್ತದೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂವಿಧಾನವೇ ನನ್ನ ಧರ್ಮಗ್ರಂಥ ಎಂದಿದ್ದಾರೆ. ಸಂವಿಧಾನವನ್ನು ಅಕ್ಷರಶಃ ಪಾಲಿಸುವುದೇ ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನೀಡುವ ನಿಜ ಗೌರವ ಎಂದರು.

ಅಂಬೇಡ್ಕರ್ ಅವರ ಬದುಕಿನ ಪಯಣ ನೋವಿನಿಂದ ಕೂಡಿದ್ದರೂ ತನ್ನ ಜನಾಂಗದವರಿಗೆ ಪರಿಹಾರ ಹಾಗೂ ನ್ಯಾಯ ಒದಗಿಸಲು ಶ್ರಮಿಸಿದರು. ನಮ್ಮ ಸಂವಿಧಾನ ಅತ್ಯಂತ ಜೀವಂತವಾಗಿರುವ ಸಂವಿಧಾನ. ಸಂವಿಧಾನವನ್ನು ಕಾಲಕಾಲಕ್ಕೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದಾರೆ. ಅತಿಹೆಚ್ಚು ತಿದ್ದುಪಡಿಗಳಾಗಿರುವ ಸಂವಿಧಾನ ವಿಶ್ವದಲ್ಲಿಯೇ ಅತ್ಯುತ್ತಮ ಸಂವಿಧಾನ ಎಂದು ಗುರುತಿಸಲಾಗಿದೆ. ಆದ್ದರಿಂದಲೇ 130 ಕೋಟಿ ಜನರಿರುವ ದೇಶ ಒಂದು ರಾಷ್ಟ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ.

RBI, protector of Indian economy says CM Bommai

ಉತ್ತಮ ಆರ್ಥಿಕತೆ ಪ್ರಗತಿಯ ಸಂಕೇತ

ಆರ್ಥಿಕತೆ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಆರ್ಥಿಕತೆ ವ್ಯಕ್ತಿಯ ಪ್ರಗತಿಗೂ ಕಾರಣವಾಗುತ್ತದೆ ಎಂದರು. ಆದ್ದರಿಂದ ಆರ್.ಬಿ.ಐ ಆರ್ಥಿಕತೆಯನ್ನು ಮುನ್ನಡೆಸುವ ನಾಯಕ. ಪಾಶ್ಚಿಮಾತ್ಯ ಆರ್ಥಿಕತೆ ಹಣದುಬ್ಬರ ಹಾಗೂ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಆದರೆ ನಮ್ಮಲ್ಲಿ ಆರ್.ಬಿ.ಐ ಸಂಸ್ಥೆಯ ಆರ್ಥಿಕ ನಿರ್ವಹಣೆಯಿಂದ ಉತ್ತಮ ಆರ್ಥಿಕ ವ್ಯವಸ್ಥೆ ಇದೆ ಎಂದರು. ಇಡೀ ಪ್ರಪಂಚ ಆರ್ಥಿಕ ಹಿಂಜರಿತ ಅನುಭವಿಸುತ್ತಿದ್ದರೆ, ನಮ್ಮಲ್ಲಿ ಶೇ 7 ರಷ್ಟು ಬೆಳವಣಿಗೆ ಯಾಗಿದೆ ಎಂದರು.

ಸರ್ಕಾರ, ಆರ್.ಬಿ.ಐ ಸಂಬಂಧ ಅತ್ಯಗತ್ಯವಾಗಿದ್ದು, ದೇಶ ತನ್ನ ಗುರಿ ಸಾಧಿಸಲು ಇದು ಮುಖ್ಯ. ಆರ್.ಬಿ.ಐ ಯಾವಾಗಲೂ ಸರ್ಕಾರದ ಗುರು ಸಾಧನೆಗೆ ಬೆನ್ನೆಲುಬಾಗಿ ನಿಂತಿದೆ. ಇದರಿಂದಾಗಿ ಆರ್ಥಿಕತೆಯೂ ಬಹಳ ಗಟ್ಟಿಯಾಗಿದೆ ಎಂದರು.

ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕ ಗುರುಮೂರ್ತಿ, ಎಸ್.ಸಿ.ಎಸ್.ಟಿ ನೌಕರರ ಸಂಘದ ಅಧ್ಯಕ್ಷ ಮಾಧವ ಕಾಳೆ, ಕಾರ್ಯದರ್ಶಿ ವಸಂತಕುಮಾರ್ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+