Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ
ಬೆಂಗಳೂರು: ಈ ಬಾರಿಯ ಐಪಿಎಲ್ (IPL 2026) ಆರಂಭಕ್ಕೂ ಮುನ್ನವೇ ಕನ್ನಡಿಗರಿಗೆ ಮತ್ತು ಆರ್ಸಿಬಿ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' (KMF) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಈ ಬಾರಿ ಅಧಿಕೃತ ಡೈರಿ ಪಾಲುದಾರನಾಗಿ (Official Dairy Partner) ಸಾಥ್ ನೀಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್ಸಿಬಿ ತಂಡದ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್ನ ಪ್ರಮುಖ ಆಕರ್ಷಣೆಯಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ಬಾರಿ ಚಾಂಪಿಯನ್ ಆಗಿ ಸಂಭ್ರಮಿಸಿದ್ದ ಆರ್ಸಿಬಿಗೆ ಈಗ ತವರು ನೆಲದ ಬ್ರ್ಯಾಂಡ್ ಬೆಂಬಲ ಸಿಕ್ಕಿರುವುದು ಅಭಿಮಾನಿಗಳಲ್ಲಿ ಹೊಸ ಚೈತನ್ಯ ತುಂಬಿದೆ.

ಕೆಎಂಎಫ್ ಕೇವಲ ಹಾಲಿನ ಉತ್ಪನ್ನಗಳ ಮಾರಾಟಕ್ಕಷ್ಟೇ ಸೀಮಿತವಾಗದೆ, ಜಾಗತಿಕ ಮಟ್ಟದ ಕ್ರೀಡಾಕೂಟಗಳಲ್ಲಿ ತನ್ನ ಅಸ್ತಿತ್ವವನ್ನು ಸಾಬೀತುಪಡಿಸುತ್ತಿದೆ. ಈಗ ಆರ್ಸಿಬಿಯ ಪ್ರಾಯೋಜಕತ್ವ ವಹಿಸಿಕೊಳ್ಳುವ ಮೂಲಕ ಮೈದಾನದಲ್ಲಿ ರಾರಾಜಿಸಲಿದೆ. ಇದು ಕೇವಲ ವ್ಯವಹಾರವಲ್ಲ, ಬದಲಿಗೆ ಕನ್ನಡಿಗರ ಬ್ರ್ಯಾಂಡ್ ಮತ್ತು ಕನ್ನಡಿಗರ ತಂಡ ಒಂದಾಗಿರುವ ಭಾವನಾತ್ಮಕ ಕ್ಷಣವಾಗಿದೆ.
ಅಭಿಮಾನಿಗಳ ಸಂಭ್ರಮ ಹೇಗಿದೆ?
ಸಾಮಾಜಿಕ ಜಾಲತಾಣಗಳಲ್ಲಿ ಆರ್ಸಿಬಿ ಅಭಿಮಾನಿಗಳು ಈ ಸುದ್ದಿಯನ್ನು ಸಂಭ್ರಮದಿಂದ ಸ್ವಾಗತಿಸುತ್ತಿದ್ದಾರೆ. "ನಮ್ಮ ಹಾಲು ನಂದಿನಿ, ನಮ್ಮ ತಂಡ ಆರ್ಸಿಬಿ" ಎಂಬ ಘೋಷಣೆಗಳು ಮೊಳಗುತ್ತಿವೆ. "ಕಳೆದ ಬಾರಿ ಚಾಂಪಿಯನ್ ಆದ್ವಿ, ಈ ಬಾರಿ ನಂದಿನಿ ಹಾಲಿನ ಶಕ್ತಿಯೊಂದಿಗೆ ಈ ಸಲನೂ ಕಪ್ ನಮ್ದೇ!" ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಮೈದಾನದಲ್ಲಿ ಆರ್ಸಿಬಿ ಆಟಗಾರರು ರನ್ ಮಳೆ ಸುರಿಸುತ್ತಿದ್ದರೆ, ಸ್ಟೇಡಿಯಂನ ಗ್ಯಾಲರಿಯಲ್ಲಿ ನಂದಿನಿ ಉತ್ಪನ್ನಗಳ ರುಚಿಯೂ ಅಭಿಮಾನಿಗಳಿಗೆ ಸಿಗುವ ಸಾಧ್ಯತೆಯಿದೆ.
Karnataka’s pride, the Nandini brand, is now the official dairy partner of Royal Challengers Bengaluru, the champions of the last IPL season.
— CM of Karnataka (@CMofKarnataka) March 24, 2026
The synergy between Nandini’s trusted legacy and RCB’s sporting excellence will be a key highlight of this IPL season.
ಕರ್ನಾಟಕದ ಹೆಮ್ಮೆಯ… pic.twitter.com/YbOgIKVuCR
ನಂದಿನಿಯ ಹೊಸ ಅಧ್ಯಾಯ
ಕರ್ನಾಟಕದ ಜೀವನಾಡಿ, ಕೋಟ್ಯಂತರ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಈಗ ಜಾಗತಿಕ ಕ್ರಿಕೆಟ್ ಭೂಪಟದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಚಾಂಪಿಯನ್ ತಂಡ ಆರ್ಸಿಬಿ ಜೊತೆ ಕೈಜೋಡಿಸಿರುವ ನಂದಿನಿ ಈ ಬಾರಿಯ ಐಪಿಎಲ್-2026ರ ಅಧಿಕೃತ ಪ್ರಾಯೋಜಕತ್ವದ ಪಾಲುದಾರನಾಗಿ ಮಿಂಚಲಿದೆ. ಬೆಂಗಳೂರು ಹಾಲು ಒಕ್ಕೂಟದ (BAMUL) ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಈ ಬಗ್ಗೆ ಮಾತನಾಡುತ್ತಾ, "ಇದು ನಮ್ಮ ನಂದಿನಿಯ ಪಾಲಿಗೆ ಹೊಸ ಅಧ್ಯಾಯ. ನಮ್ಮ ನಾಡಿನ ಹೆಮ್ಮೆಯ ಬ್ರ್ಯಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಆರ್ಸಿಬಿ ತಂಡಕ್ಕೆ ಪ್ರಾಯೋಜಕತ್ವ ನೀಡಲು ನಿರ್ಧರಿಸಲಾಗಿದೆ" ಎಂದು ಹೆಮ್ಮೆಯಿಂದ ತಿಳಿಸಿದ್ದಾರೆ.
ಈ ಒಪ್ಪಂದದ ಮೂಲಕ, ವಿಶ್ವದಾದ್ಯಂತ ಕೋಟ್ಯಂತರ ವೀಕ್ಷಕರಿರುವ ಐಪಿಎಲ್ ವೇದಿಕೆಯಲ್ಲಿ ನಂದಿನಿ ಲೋಗೋ ರಾರಾಜಿಸಲಿದೆ. ಇದರಿಂದ ಕೇವಲ ಕರ್ನಾಟಕ ಮಾತ್ರವಲ್ಲದೆ, ಅಂತರಾಷ್ಟ್ರೀಯ ಮಟ್ಟದಲ್ಲೂ ನಂದಿನಿ ಉತ್ಪನ್ನಗಳ ಮೌಲ್ಯ ಹೆಚ್ಚಾಗಲಿದೆ. ಕೇವಲ ಪ್ರಾಯೋಜಕತ್ವಕ್ಕೆ ಸೀಮಿತವಾಗದೆ, ಸಾರ್ವಜನಿಕರು ಮತ್ತು ಅಭಿಮಾನಿಗಳು ನಮ್ಮ ನಾಡಿನ ರೈತರ ಬೆನ್ನೆಲುಬಾಗಿರುವ ನಂದಿನಿ ಉತ್ಪನ್ನಗಳನ್ನೇ ಹೆಚ್ಚಾಗಿ ಬಳಸಬೇಕು ಎಂದು ಡಿ.ಕೆ.ಸುರೇಶ್ ಕರೆ ನೀಡಿದ್ದಾರೆ.
-
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications