ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಪಂಗಳಲ್ಲಿ ಆರ್ಥಿಕ ಶಿಸ್ತು ಕಾಪಾಡಲು ಕೃಷ್ಣಬೈರೇಗೌಡ ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17: ಗ್ರಾಮ ಪಂಚಾಯ್ತಿಗಳಲ್ಲಿ ತೆರಿಗೆ ಸಂಗ್ರಹಿಸುವ ಬಿಲ್ ಕಲೆಕ್ಟರ್‌ಗಳು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು, ವಿಫಲವಾದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ರೈತರ ಸಾಲ ಮನ್ನಾ ಯಾರಿಗೆ ಸಿಗುತ್ತೆ, ಯಾರಿಗೆ ಸಿಗಲ್ಲ? ಇಲ್ಲಿದೆ ವಿವರ ರೈತರ ಸಾಲ ಮನ್ನಾ ಯಾರಿಗೆ ಸಿಗುತ್ತೆ, ಯಾರಿಗೆ ಸಿಗಲ್ಲ? ಇಲ್ಲಿದೆ ವಿವರ

ಗ್ರಾಮ ಪಂಚಾಯ್ತಿಗಳು ಸ್ಥಳೀಯ ಸರ್ಕಾರಗಳಾಗಿದ್ದು, ಸ್ವತಃ ಆಡಳಿತ ನಡೆಸುವುದನ್ನು ರೂಢಿಸಿಕೊಳ್ಳಬೇಕು, ತಮ್ಮ ವ್ಯಾಪ್ತಿಗೆ ಬರುವ ವಿವಿಧ ಬಗೆಯ ತೆರಿಗೆಗಳಿಂದ ಸಂಪನ್ಮೂಲವನ್ನು ಕ್ರೋಢೀಕರಿಸಿಕೊಂಡು ಶಕ್ತವಾಗಬೇಕು ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಬೆಳೆ ಸಮೀಕ್ಷೆಗೆ ಸ್ಥಳೀಯ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ.

ಸಾಲಮನ್ನಾ ಆದರೂ ಆತ್ಮಹತ್ಯೆ ಮಾಡಿಕೊಂಡ ಕೆ.ಆರ್. ನಗರದ ರೈತ ಸಾಲಮನ್ನಾ ಆದರೂ ಆತ್ಮಹತ್ಯೆ ಮಾಡಿಕೊಂಡ ಕೆ.ಆರ್. ನಗರದ ರೈತ

ರೈತರು ಅವರಿಗೆ ಸಹಕಾರ ನೀಡಬೇಕು.ಕರಾರುವಕ್ಕಾದ ಮಾಹಿತಿ ನೀಡುವುದರಿಂದ ವಿವಿಧ ಇಲಾಖೆಗಳಿಂದ ಪಡೆಯುವ ಸೌಲಭ್ಯವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಹಾಗೂ ಬೆಳೆ ಹಾನಿ ಮತ್ತು ಇತರೆ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ನಷ್ಟ ಪರಿಹಾರ ಪಡೆಯಲು ನೆರವಾಗುತ್ತದೆ ಎಂದು ಹೇಳಿದರು.

RDPR minister insists financial discipline in gram panchayat

ಗ್ರಾಮ ಪಂಚಾಯ್ತಿ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರ ರೂಪಿಸಿರುವ ವೆಬ್‌ಸೈಟ್‌ಗೆ ಅಳವಡಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಅದರ ಒಳಗಾಗಿ ಯೋಜನೆ ಸಿದ್ಧಪಡಿಸಿ ಕಡ್ಡಾಯವಾಗಿ ವೆಬ್‌ಸೈಟ್‌ಗೆ ಅಳವಡಿಸಬೇಕು. ಇದರಲ್ಲಿ ವಿಫಲವಾದರೆ 14ನೇ ಹಣಕಾಸು ಆಯೋಗದ ಯೋಜನೆಯಡಿ ದೊರಕಬೇಕಾದ ಅನುದಾನ ದೊರಕುವುದಿಲ್ಲ ಹೀಗಾಗಿ ಎಚ್ಚರಿಕೆ ವಹಿಸಿ ನಿಗದಿತ ಸಮಯದಲ್ಲಿ ವೆಬ್‌ಸೈಟ್‌ಗೆ ಅಳವಡಿಸಿ ಎಂದರು.

English summary
RDPR minister Krishna Byregowda has insisted village accountants to maintain financial discipline in gram panchayats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X