ಸಿದ್ದರಾಮಯ್ಯ ಜತೆಗಿನ ಜಗಳದಲ್ಲಿ ಬಿಎಸ್ವೈಗೇ ಲಾಭ; ಓದುಗರ ಅಭಿಪ್ರಾಯ
ಬೆಂಗಳೂರು, ಜೂನ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಧ್ಯೆ ಗುದ್ದಾಟ ನಡೆಯುತ್ತಿದೆ. ಇವರಿಬ್ಬರ ಜಗಳದಲ್ಲಿ ಯಾರಿಗೆ ಲಾಭ ಎಂಬ ಪ್ರಶ್ನೆಯನ್ನು 'ಒನ್ ಇಂಡಿಯಾ' ಓದುಗರ ಮುಂದಿಟ್ಟಿತ್ತು. ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆಗಳು ಬಂದಿದ್ದು, ಓದುಗರ ನೀಡಿದ ಅಭಿಪ್ರಾಯಗಳು ಕುತೂಹಲಕಾರಿಯಾಗಿವೆ.
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ನಡುವಿನ ಹೋರಾಟದಲ್ಲಿ ಯಾರಿಗೆ ಗೆಲುವಾಗಲಿದೆ? ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆಗಳನ್ನು ನೀಡಲಾಗಿತ್ತು.
1. ಸಿದ್ದರಾಮಯ್ಯ
2. ಯಡಿಯೂರಪ್ಪ
3. ಕುಮಾರಸ್ವಾಮಿ
4. ಎಲ್ಲವೂ ಅತಂತ್ರ
ಈ ಪ್ರಶ್ನೆಗೆ ಈ ವರದಿ ಬರೆಯುವ ಹೊತ್ತಿಗೆ 8,118 ಜನ ಮತದಾನ ಮಾಡಿದ್ದು ಶೇ. 46.66 ಅಂದರೆ 3,788 ಜನರು ಯಡಿಯೂರಪ್ಪನವರಿಗೆ ಲಾಭವಾಗಲಿದೆ ಎಂದಿದ್ದಾರೆ. ಇನ್ನು 1,672 ಅಂದರೆ ಶೇಕಡಾ 20.6 ಜನರು ಇಬ್ಬರ ಜಗಳದಿಂದ ಕುಮಾರಸ್ವಾಮಿಯವರಿಗೆ ಲಾಭವಾಗಲಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ನಡುವಿನ ಜಗಳದಿಂದ ಸಿದ್ದರಾಮಯ್ಯನವರಿಗೇ ಹೆಚ್ಚು ನಷ್ಟ ಎಂಬುದು ಓದುಗರ ಅಭಿಪ್ರಾಯವಾಗಿದೆ. ಸಿದ್ದರಾಮಯ್ಯನವರಿಗೆ ಕೇವಲ ಶೇಕಡಾ 15.53 ಮತಗಳು (1,261 ಮತಗಳು) ಬಿದ್ದಿವೆ. ಇನ್ನು ಶೇಕಡಾ 17.21 ಜನರು ಅತಂತ್ರ ಫಲಿತಾಂಶ ನೀಡಿದ್ದಾರೆ.
ಕುತೂಹಲಕಾರಿ ಕಮೆಂಟುಗಳು
ಆದರೆ ಕಮೆಂಟುಗಳು ಮಾತ್ರ ಕುತೂಹಲಕಾರಿಯಾಗಿವೆ. ಸಿದ್ದರಾಮಯ್ಯನವರಿಗೆ ಮತಗಳು ಹೆಚ್ಚು ಬೀಳದಿದ್ದರೂ ಜನರು ಮಾತ್ರ ಅವರಿಗೇ ಲಾಭವಾಗಲಿದೆ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಒಂದಷ್ಟು ಕಮೆಂಟ್ ಗಳಲ್ಲಿ ಕುಮಾರಸ್ವಾಮಿಯವರಿಗೆ ಲಾಭವಾಗಲಿದೆ ಎಂದು ಓದುಗರು ಹೇಳಿದ್ದಾರೆ.
ವಿಶೇಷವೆಂದರೆ ಕಮೆಂಟುಗಳಲ್ಲಿ ಯಾರೂ ಯಡಿಯೂರಪ್ಪನವರಿಗೆ ಇದರಿಂದ ಲಾಭವಾಗಲಿದೆ ಎಂದು ಹೇಳಿಲ್ಲ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications