ಅದ್ಯಾವ ಗಳಿಗೆಯಲ್ಲಿ ಡಿಕೆಶಿಗೆ, ರಮೇಶ್ ಕುಮಾರ್ ಮಾತು ಕೊಟ್ರೋ? ಹಾಗೇ ಆಯ್ತು
Recommended Video
ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿಶ್ವಾಸ ಗೊತ್ತುವಳಿಯ ವೇಳೆ, ಸಚಿವರಾಗಿದ್ದ ಡಿ ಕೆ ಶಿವಕುಮಾರ್, ಬಿಜೆಪಿ ವಿರುದ್ದ ಟೀಕೆಯೇ ಪ್ರವಾಹವನ್ನೇ ಹರಿಸುತ್ತಿದ್ದರು. ಸತತ ಇಡಿ/ಐಟಿ ಅಧಿಕಾರಿಗಳ ವಿಚಾರಣೆಯ ಸಿಟ್ಟು ಅವರಲ್ಲಿ ಮಾತಿನಲ್ಲಿ, ಮುಖದಲ್ಲಿ ಕಾಣುತ್ತಿತ್ತು.
"ನಾನು ಪಟ್ಟಂಹತ ನೋವು, ಹಿಂಸೆ, ಯಾವ ಶತ್ರುವಿಗೂ ಬಾರದಿರಲಿ" ಎಂದು ಹೇಳುತ್ತಾ ಡಿಕೆಶಿ, ' ನನಗೆ, ನನ್ನ ಕುಟುಂಬವನ್ನು, ಏನೂ ಅರಿಯದ ನನ್ನ ತಾಯಿಯನ್ನೂ ಅಧಿಕಾರಿಗಳು ಬಿಟ್ಟಿಲ್ಲ, ಸಮಯ ಸಂದರ್ಭ ಎನ್ನುವುದು ಇದೆ, ಹಾಗಾಗಿ, ಸೂಕ್ತ ಸಮಯದಲ್ಲಿ ಇದಕ್ಕೆಲ್ಲಾ ಉತ್ತರ ನೀಡುತ್ತೇನೆ" ಎಂದು ವಾಗ್ದಾಳಿ ನಡೆಸುತ್ತಿದ್ದರು.
"ನಾವು ಆಡಳಿತ ಪಕ್ಷದಲ್ಲಿರುವುದೂ ಶಾಸ್ವತವಲ್ಲ, ನೀವು ವಿರೋಧ ಪಕ್ಷದಲ್ಲಿ ಇರುವುದು ಶಾಸ್ವತ ಅಲ್ಲ ಎನ್ನುವುದನ್ನು ನಾನು ಅರಿತಿದ್ದೇನೆ, ಕಾಲಚಕ್ರದ ಸುಳಿಯಲ್ಲಿ ಎಲ್ಲರೂ ಒಂದಲ್ಲಾ ಒಂದು ಸಿಲುಕಿ ಹಾಕಿಕೊಳ್ಳಲೇಬೇಕು", ಹೀಗೆ, ಪರೋಕ್ಷವಾಗಿ ತಾನು ಎದುರಿಸುತ್ತಿರುವ ವಿಚಾರಣೆಯ ನೋವನ್ನು ಡಿಕೆಶಿ ತೋಡಿಕೊಳ್ಳುತ್ತಿದ್ದರು.
ಹೀಗೆ, ಮಾತು ಮುಂದುವರಿಸುತ್ತಾ ಡಿಕೆಶಿ, "ಇಂದಲ್ಲಾ.. ನಾಳೆ.. ನಾನು ಜೈಲಿಗೆ ಹೋಗುತ್ತೇನೆ. ನಾನು ಒಂದು ವೇಳೆ ಜೈಲಿಗೆ ಹೋದರೆ, ನನ್ನನ್ನು ನೋಡಲು ನೀವು ಬರುತ್ತೀರಾ" ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಪ್ರಶ್ನಿಸುತ್ತಾರೆ.

ಹಿಂದೆಲ್ಲಾ ಶಾಸಕರನ್ನು ನೋಡಿದರೆ ಜನರು ಕೈಮುಗೀತಾ ಇದ್ದರು
"ಹಿಂದೆಲ್ಲಾ ಶಾಸಕರನ್ನು ನೋಡಿದರೆ ಜನರು ಕೈಮುಗೀತಾ ಇದ್ದರು, ಕಾಲಿಗೆ ಬೀಳುತ್ತಿದ್ದರು. ಈಗ, ಜನಪ್ರತಿನಿಧಿಗಳನ್ನು ನೋಡಿದರೆ, ಜನ ಛೀ..ಥೂ.. ಎಂದು ಉಗೀತಾರೆ. ಪರಿಸ್ಥಿತಿ ಹೀಗಿರುವಾಗ, ನಾವೆಲ್ಲಾ ತುಂಬಾ ಎಚ್ಚರಿಕೆಯಿಂದ ರಾಜಕಾರಣ ಮಾಡುವ ಅವಶ್ಯಕತೆಯಿದೆ. ಇಲ್ಲಿ, ಯಾರೂ ಶಾಸ್ವತವಲ್ಲ ಎನ್ನುವುದನ್ನು ನನ್ನ ಬಿಜೆಪಿ ಮಿತ್ರರಿಗೆ ಹೇಳಲು ಇಷ್ಟ ಪಡುತ್ತೇನೆ" ಎಂದು, ಅಂದು ಡಿಕೆಶಿ ಹೇಳಿದ್ದರು.

ನಾನು ಬಂಡೆಯಂತವನು, ಯಾವುದಕ್ಕೂ ಜಗ್ಗುವುದಿಲ್ಲ
"ವಿಚಾರಣೆಯ ಹೆಸರಿನಲ್ಲಿ ನನ್ನ ಮೇಲೆ ದ್ವೇಷ ಸಾಧಿಸಲಾಗುತ್ತಿದೆ. ಆದರೆ, ನಾನು ಬಂಡೆಯಂತವನು, ಯಾವುದಕ್ಕೂ ಜಗ್ಗುವುದಿಲ್ಲ. ಇಂದಲ್ಲಾ ನಾಳೆ, ನಾನು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬರಬಹುದು ಎನ್ನುವುದನ್ನು ಅರಿತಿದ್ದೇನೆ. ಮಾನಸಿಕವಾಗಿ ಸಿದ್ದನಾಗಿದ್ದೇನೆ ಕೂಡಾ" ಎಂದು ಡಿಕೆಶಿ ಹೇಳಿದ್ದರು.

ಡಿಕೆಶಿ, ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರಲ್ಲಿ ಕೇಳಿಕೊಂಡಿದ್ದು
" ನಾನು ಒಂದು ವೇಳೆ ಜೈಲಿಗೆ ಹೋದರೆ, ಯಾರು ನನ್ನನ್ನು ನೋಡಲು ಬರುತ್ತಾರೋ, ಇಲ್ಲವೋ, ನೀವಂತೂ ಬರುತ್ತೀರಾ ಎಂದು ನಂಬಿದ್ದೇನೆ" ಎಂದು ಡಿಕೆಶಿ, ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರಲ್ಲಿ ಹೇಳಿದ್ದರು. ಅದಕ್ಕೆ ರಮೇಶ್ ಕುಮಾರ್ "ಹಂಗೆಲ್ಲಾ ಮಾತಾಡೋಕೆ ಹೋಗಬೇಡಿ" ಎಂದು ಹೇಳಿದ್ದರು.

ನಾನಂತೂ ನಿನ್ನನ್ನು ನೋಡಲು ಬರುತ್ತೇನೆ
ರಮೇಶ್ ಕುಮಾರ್ ಮಾತು ಮುಂದವರಿಸುತ್ತಾ, " ನೀನು ನನಗೆ ಸಹೋದರ ಇದ್ದ ಹಾಗೇ.. ನೀನು ಜೈಲಿಗೆ ಹೋಗಬಾರದು ಎಂದು ಹಿತೈಷಿಯಾಗಿ ಬಯಸುತ್ತೇನೆ. ಒಂದು ವೇಳೆ, ಪರಿಸ್ಥಿತಿ ಕೈಮೀರಿ, ನೀನೇನಾದರೂ ಜೈಲಿಗೆ ಹೋಗಿದ್ದೇ ಆದಲ್ಲಿ, ಯಾರು ಬರುತ್ತಾರೋ, ಗೊತ್ತಿಲ್ಲ, ನಾನಂತೂ ನಿನ್ನನ್ನು ನೋಡಲು ಪ್ರತೀದಿನಾ ಬರುತ್ತೇನೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದರು.

ರಮೇಶ್ ಕುಮಾರ್ - ಡಿಕೆಶಿ ಈ ಚರ್ಚೆಯ ವಿಷಯ
ಇಡಿಯಿಂದ ಡಿಕೆಶಿ ಬಂಧನವಾದ ನಂತರ, ರಮೇಶ್ ಕುಮಾರ್ - ಡಿಕೆಶಿ ಈ ಚರ್ಚೆಯ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಅದ್ಯಾವ ಗಳಿಗೆಯಲ್ಲಿ ಈ ವಿಷಯ ಚರ್ಚೆಗೆ ಬಂತೋ ಎಂದು ಡಿಕೆಶಿ ಅಭಿಮಾನಿಗಳು, ಕಾರ್ಯಕರ್ತರು ನೊಂದುಕೊಳ್ಳುವಂತಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications