ಕರ್ನಾಟಕಕ್ಕೆ ಬಂತು 1,64,770 ಡೋಸ್ ಕೊವ್ಯಾಕ್ಸಿನ್
ಬೆಂಗಳೂರು, ಮೇ 31; ಕರ್ನಾಟಕದಲ್ಲಿ ಕೋವಿಡ್ ಲಸಿಕೆಯ ಕೊರತೆ ಇದೆ. ಆದ್ದರಿಂದ ಸರ್ಕಾರ 45 ವರ್ಷ ಮೀರಿದವರಿಗೆ ಮೊದಲು ಲಸಿಕೆ ನೀಡಲು ಆದ್ಯತೆ ಕೊಟ್ಟಿದೆ. ಕೊವ್ಯಾಕ್ಸಿನ್ ಲಸಿಕೆ ಸಿಗುತ್ತಿಲ್ಲ ಎಂದು ಜನರು ದೂರುತ್ತಿದ್ದರು.
Recommended Video
ಕೊವ್ಯಾಕ್ಸಿನ್ ಮೊದಲ ಡೋಸ್ ಪಡೆದವರು 2ನೇ ಡೋಸ್ಗಾಗಿ ಕಾಯುತ್ತಿದ್ದರು. ಕೊವ್ಯಾಕ್ಸಿನ್ 2ನೇ ಡೋಸ್ ಪಡೆಯಲು ಜನರು ಖಾಸಗಿ ಆಸ್ಪತ್ರೆಗಳಿಗೆ ಸಹ ಭೇಟಿ ನೀಡುತ್ತಿದ್ದರು.
ಕೇಂದ್ರ ಸರ್ಕಾರ ಕೊವ್ಯಾಕ್ಸಿನ್ ಕೊರತೆ ನೀಗಿಸಲು ರಾಜ್ಯಕ್ಕೆ ಸಹಕಾರ ನೀಡಿದೆ. 1,64,770 ಡೋಸ್ ಕೊವ್ಯಾಕ್ಸಿನ್ ಕರ್ನಾಟಕಕ್ಕೆ ಸೋಮವಾರ ಆಗಮಿಸಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಇದುವರೆಗೂ ರಾಜ್ಯಕ್ಕೆ 17.8 ಲಕ್ಷ ಡೋಸ್ ಕೊವ್ಯಾಕ್ಸಿನ್ ಸರಬರಾಜು ಆಗಿದೆ. ಕೇಂದ್ರ ಸರ್ಕಾರದಿಂದ 15.86 ಲಕ್ಷ ಡೋಸ್ ಲಸಿಕೆ ಬಂದಿದೆ. ರಾಜ್ಯ ಸರ್ಕಾರ ಖರೀದಿ ಮಾಡಿರುವ ಪೈಕಿ 1.94 ಲಕ್ಷ ಡೋಸ್ ಬಂದಿದೆ.
💉Karnataka received 1,64,770 doses of Covaxin from GoI supply today.
— Dr Sudhakar K (@mla_sudhakar) May 31, 2021
💉Total Covaxin supply: 17.8 lakh doses
💉 From GoI: 15.86 lakh doses
💉 From State procurement: 1.94 lakh doses
Available stock of Covaxin will be used to provide 2nd dose on priority.#KarnatakaFightsBack
ಈಗ ರಾಜ್ಯದಲ್ಲಿ ಲಭ್ಯವಿರುವ ಕೊವ್ಯಾಕ್ಸಿನ್ ಸಂಗ್ರಹವನ್ನು 2ನೇ ಡೋಸ್ ಲಸಿಕೆ ನೀಡಲು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರು ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.
27 ಕೇಂದ್ರದಲ್ಲಿ ಲಭ್ಯ; ಬೆಂಗಳೂರು ನಗರದಲ್ಲಿ 27 ಕೇಂದ್ರದಲ್ಲಿ ಕೊವ್ಯಾಕ್ಸಿನ್ ಲಭ್ಯವಿದೆ. ಬಿಬಿಎಂಪಿ ಆಯುಕ್ತರು ವಲಯವಾರು ಕೊವ್ಯಾಕ್ಸಿನ್ ಲಸಿಕೆ ಲಭ್ಯವಿರುವ ಸೆಂಟರ್ಗಳ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎರಡನೇ ಡೋಸ್ಗೆ ಕಾಯುತ್ತಿರುವವರು ನೇರವಾಗಿ ವಾಕ್ಇನ್ ಮೂಲಕ ಬರಬಹುದು ಎಂದು ಮಾಹಿತಿ ನೀಡಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು










Click it and Unblock the Notifications