Good News: ಶೀಘ್ರವೇ 18,800 ಶಿಕ್ಷಕರ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ಅಕ್ಟೋಬರ್ 08: ರಾಜ್ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 18800 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಬಹುದಿನಗಳಿಂದ ಶಿಕ್ಷಕರ ಹುದ್ದೆ ನೇಮಕಾತಿಗಾಗಿ ಕಾಯುತಿದ್ದ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರವೇ 18,800 ಹೊಸ ಶಿಕ್ಷಕರ ನೇಮಕಾತಿ ಮಾಡಲಾಗುವುದು. ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,800 ಶಿಕ್ಷಕರು ಸೇರಿದಂತೆ ಒಟ್ಟು 18,800ಕ್ಕೂ ಅಧಿಕ ಶಿಕ್ಷಕರ ನೇಮಕ ಪ್ರಕ್ರಿಯೆ ಸಿದ್ದತೆ ನಡೆಯುತ್ತಿದ್ದು, ಶೀಘ್ರವೇ ನೋಟಿಫಿಕೇಶನ್ ಹೊರಡಿಸಲಾಗುವುದು.ಜಸ್ಟಿಸ್ ನಾಗಮೋಹನ್ ದಾಸ್ ವರದಿ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು, ಹೀಗಾಗಿ ಶೀಘ್ರವೇ ರಾಜ್ಯದಲ್ಲಿ 18,800 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಇನ್ನೂ ಕರ್ನಾಟಕ ಕಿವುಡ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿ, ಕಿವುಡ ಸಮುದಾಯದವರ ಹಲವು ಬೇಡಿಕೆಗಳನ್ನು ಈಡೇರಿಸಲು ಮತ್ತು ಅವರ ಕಲ್ಯಾಣಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಕೋರಿ ಮನವಿ ಸಲ್ಲಿಸಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.
ಮನವಿಯಲ್ಲಿನ ಪ್ರಮುಖ ಬೇಡಿಕೆಗಳು:
* ಉಚಿತ ಬಸ್ ಪಾಸ್: ಕಿವುಡ ಸಮುದಾಯದವರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸುವುದು.
* ಮಾಸಿಕ ಪಿಂಚಣಿ: ಮಾಸಿಕ ಪಿಂಚಣಿ ಹೆಚ್ಚಿಸುವುದು.
* ಉದ್ಯೋಗಾವಕಾಶಗಳು: ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು.
* ಸಂಕೇತ ಭಾಷಾ ತರಬೇತಿ ಕೇಂದ್ರಗಳು: ರಾಜ್ಯದ ಎಲ್ಲಾ 5 ವಿಭಾಗಗಳಲ್ಲಿ (ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ಮಧ್ಯ ಕರ್ನಾಟಕ) ಸರ್ಕಾರಿ ಅನುದಾನಿತ ಸಂಕೇತ ಭಾಷಾ ಪ್ರಮಾಣಪತ್ರ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
* ಶಿಕ್ಷಕರ ನೇಮಕಾತಿ: ಭಾಷೆ ಮತ್ತು ಮೌಖಿಕ ಸಂವಹನದಲ್ಲಿ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸುವುದು.
* ಸಂಕೇತ ಭಾಷಾ ವ್ಯಾಖ್ಯಾನಕಾರರ ವ್ಯವಸ್ಥೆ: ಶಾಲೆಗಳು ಸೇರಿದಂತೆ ಅಗತ್ಯ ಸೇವೆಗಳನ್ನು ಪಡೆಯುವಾಗ ಕಿವುಡ ವ್ಯಕ್ತಿಗಳೊಂದಿಗೆ ಪ್ರಮಾಣೀಕೃತ ಸಂಕೇತ ಭಾಷಾ ವ್ಯಾಖ್ಯಾನಕಾರರನ್ನು ಒದಗಿಸುವುದು.
*VRIS ಕೇಂದ್ರಗಳಿಗೆ ಹಣಕಾಸು ನೆರವು: ಶಾಲೆಗಳು, ಕಂಪನಿಗಳು, ಪೊಲೀಸ್ ಠಾಣೆಗಳು, ಆಸ್ಪತ್ರೆಗಳು ಮತ್ತು ನ್ಯಾಯಾಲಯಗಳೊಂದಿಗೆ ಸಂವಹನ ನಡೆಸಲು ಸಹಾಯ ಮಾಡಲು, ವ್ಯಾಖ್ಯಾನಕಾರರೊಂದಿಗೆ ವಿಆರ್ಐಎಸ್ (VRIS) ಕೇಂದ್ರಗಳಿಗೆ ಹಣಕಾಸು ನೆರವು ನೀಡುವುದು.
* ವ್ಯಾಖ್ಯಾನಕಾರರ ಶುಲ್ಕಕ್ಕೆ ಸಹಾಯಧನ: ಪ್ರಮಾಣೀಕೃತ ವ್ಯಾಖ್ಯಾನಕಾರರ ವೆಚ್ಚವನ್ನು ಭರಿಸಲು ಅನುದಾನ ಅಥವಾ ಹಣಕಾಸಿನ ನೆರವನ್ನು ಅನುಮೋದಿಸುವುದು.
-
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications