ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೈಲ ಬೆಲೆ ಇಳಿಕೆಯಿಂದ ರಾಜ್ಯಕ್ಕೆ 400 ಕೋಟಿ ನಷ್ಟ

|
Google Oneindia Kannada News

ಕಲಬುರಗಿ, ನ, 28 : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಪರಿಣಾಮ ವರ್ಷದ ಅಂತ್ಯಕ್ಕೆ ರಾಜ್ಯದ ಬೊಕ್ಕಸಕ್ಕೆ 400 ಕೋಟಿಗೂ ಅಧಿಕ ಆದಾಯ ಕೊರತೆ ಕಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಕೊರತೆ ತುಂಬುವ ಸಂಬಂಧ ಕೇಂದ್ರ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ ಎಂದು ಹೇಳಿದರು.[ಕಲಬುರಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳು]

siddaramaiah

ಬಸ್ ದರ ಇಳಿಕೆ ಮಾಡುವ ಯಾವ ಪ್ರಸ್ತಾಪವೂ ರಾಜ್ಯ ಸರ್ಕಾರದ ಮುಂದಿಲ್ಲ. ಸಾರ್ವಜನಿಕ ಸಾರಿಗೆ ನಷ್ಟದಲ್ಲಿಯೇ ಸಂಚರಿಸುತ್ತಿದೆ. ಅಲ್ಲದೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿದಿದೆ ಎಂದು ದೇಶದ ಯಾವುದೇ ಸಾರ್ವಜನಿಕ ಸಾರಿಗೆ ಸಂಸ್ಥೆ ದರ ಇಳಿಕೆ ಮಾಡಿದ ಉದಾಹರಣೆ ಇಲ್ಲ ಎಂದು ಹೇಳಿದರು.

ಡೀಸೆಲ್ ಬೆಲೆಯಲ್ಲಿ ಗಣನೀಯ ಇಳಿಕೆಯಾದರೆ ಬಸ್ ದರ ಇಳಿಸುವ ಸಂಬಂಧ ಚರ್ಚೆ ನಡೆಸಬಹುದು ಎಂದು ತಿಳಿಸಿದರು. ಕೇಂದ್ರ ಸರ್ಕಾರ ಹಿಂದಿನ ಸಾರಿ ತೈಲ ಬೆಲೆ ಇಳಿಸಿದ್ದಾಗ ಬಿಜೆಪಿ ಮತ್ತು ಅನೇಕ ಸಂಘಟನೆಗಳು ಬಸ್ ದರ ಇಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು.

English summary
Chief Minister Siddaramaiah on Friday said Karnataka would suffer a shortfall of about Rs 400 crore in revenue collection from the sale of petrol and diesel this year due to the fall in the prices of the fuel. He told There was no intimation yet from the Union government on making good this loss suffered by the State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X