ಡಿಸೆಂಬರ್ 9ರೊಂದಿಗೆ ಬಿಎಸ್ ವೈ ನಂಟೇನು?
ಬೆಂಗಳೂರು, ಡಿ. 1 : ಡಿಸೆಂಬರ್ 9 ಕ್ಕೂ ಮಾಜಿ ಸಿಎಂ, ಬಿಜೆಪಿ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ಎನೋ ಸಂಬಂಧವಿದೆ. ಇದಕ್ಕೆ ಮತ್ತಷ್ಟು ಪುರಾವೆಗಳು ಸಿಗಬೇಕೆಂದರೆ ಎರಡು ವರ್ಷದ ಹಿಂದೆ ಹೋಗಬೇಕು.
ಬಿಜೆಪಿಯಿಂದ ಸಿಡಿದೆದ್ದ ಬಿಎಸ್ ವೈ 2012 ರ ಡಿಸೆಂಬರ್ 9 ರಂದು ಕರ್ನಾಟಕ ಜನತಾ ಪಕ್ಷ ಕಟ್ಟಿದ್ದರು. ಹಾವೇರಿಯಲ್ಲಿ ಭರ್ಜರಿ ಸಮಾವೇಶ ಮಾಡಿ ಮಾತೃ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪೆಟ್ಟು ನೀಡುವ ಮಾತುಗಳನ್ನಾಡಿದ್ದರು.[ಬಿಜೆಪಿಯಿಂದ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ]

ನಂತರ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಡಯೂರಪ್ಪಗೆ ಸಿಕ್ಕಿದ್ದು ಕೇವಲ 'ಆರು ತೆಂಗಿನಕಾಯಿ'. ಬಿಜೆಪಿ ಒಡೆದ ಮನೆಯಾಗಿದ್ದನ್ನು ತನ್ನ ಲಾಭಕ್ಕೆ ಬಳಸಿಕೊಂಡ ಕಾಂಗ್ರೆಸ್ ಅಧಿಕಾರದ ಗದ್ದುಗೆ ಮೇಲೆ ಪ್ರತಿಷ್ಠಾಪನೆಗೊಂಡಿದ್ದು ಇತಿಹಾಸ.
ಕಳೆದ ಅಂದರೆ 2013 ಡಿಸೆಂಬರ್ 9ರ ವೇಳೆಗೆ ಬಿಎಸ್ ವೈ ಮತ್ತೆ ಸುದ್ದಿಯಲ್ಲಿದ್ದರು. ಕಟ್ಟಿದ್ದ ಕೆಜೆಪಿಗೆ ಕರ್ನಾಟಕದ ಜನ ಮಣೆ ಹಾಕುವುದಿಲ್ಲ ಎಂಬುದು ಅರಿವಾಗಿತ್ತು. ಇತ್ತ ಲೋಕಸಭಾ ಚುನಾವಣೆಯೂ ಎದುರಾಗಿತ್ತು. ಎಲ್ಲವನ್ನು ಮನಗಂಡ ಬಿಎಸ್ ವೈ ಮತ್ತೆ ಬಿಜೆಪಿಗೆ ಹಿಂದಿರುಗಿದರು.[ಯಡಿಯೂರಪ್ಪಗೆ ಮತ್ತೆ ಶನಿಕಾಟ]

ಈಗ ಮತ್ತೆ ಡಿಸೆಂಬರ್ 9 ಎದುರಾಗಿದೆ. ಯಡಿಯೂರಪ್ಪ ಸುದ್ದಿಯಲ್ಲಿದ್ದಾರೆ. 50 ಸಾವಿರ ಬಿಜೆಪಿ ಕಾರ್ಯಕರ್ತರೊಂದಿಗೆ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.
ತೀರ್ಥಹಳ್ಳಿ ನಂದಿತಾ ಸಾವಿನ ವೇಳೆ ಸ್ವಲ್ಪ ಮಾತಾಡಿದ್ದ ಯಡಿಯೂರಪ್ಪ ಸುಮ್ಮನೆ ಕುಳಿತುಕೊಂಡಿದ್ದರು. ಆದರೆ ಇದೀಗ ಡಿಸೆಂಬರ್ 9 ಬರುತ್ತಿದ್ದಂತೆ ಥಟ್ಟನೆ ಎದ್ದು ನಿಂತಿದ್ದಾರೆ.
ಡಿಸೆಂಬರ್ 9 ಸೋನಿಯಾ ಹುಟ್ಟುಹಬ್ಬ
ಮತ್ತೊಂದು ವಿಷಯ ಗಮನಿಸಬೇಕಾಗಿದೆ. ಡಿಸೆಂಬರ್ 9 ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹುಟ್ಟುಹಬ್ಬ. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದ ವೇಳೆ ಕೆಲ ಬಿಜೆಪಿ ನಾಯಕರು ಇದನ್ನಿಟ್ಟುಕೊಂಡೆ ಕುಹಕವಾಡಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications