Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಗುಡ್‌ ನ್ಯೂಸ್‌ : ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಏಪ್ರಿಲ್‌ 11: ಬೆಂಗಳೂರು ಭಾರತದ ಅತ್ಯಂತ ಜನಪ್ರಿಯ ಮತ್ತು ಜನನಿಬಿಡ ನಗರಗಳಲ್ಲಿ ಒಂದಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದೆಹಲಿ ಮತ್ತು ಲಕ್ನೋದಂತೆಯೇ ಇದ್ದು, ಬಿಸಿಲಿನ ತಾಪವು ಬೆಂಗಳೂರು ಜನತೆ ರೋಸಿ ಹೋಗಿದ್ದಾರೆ.

ಬೆಂಗಳೂರಿನ್ಲಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ವರುಣದೇವನ ಆಗಮನದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರದಲ್ಲಿ ಕರ್ನಾಟಕದಾದ್ಯಂತ ಮಳೆಯ ಮುನ್ಸೂಚನೆಯಿರುವುದರಿಂದ ರಾಜ್ಯದ ಜನತೆಗೆ ಶುಭ ಸುದ್ದಿ ಸಿಕ್ಕಿದೆ.

Relief From Heatwave Next Week As Rainfall Predicted Check Weather Forecast

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಪ್ರಕಾರ, ಮುಂಬರುವ ವಾರದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಪ್ರತ್ಯೇಕ ಮಳೆಯಾಗುವ ಮುನ್ಸೂಚನೆ ಇದೆ. KSNDMC ಪ್ರಕಾರ, ಏಪ್ರಿಲ್ 12 ರಿಂದ ಏಪ್ರಿಲ್ 14, ಏಪ್ರಿಲ್ 17 ಮತ್ತು ಏಪ್ರಿಲ್ 18, 2024 ರವರೆಗೆ ಮಳೆಯ ಮುನ್ಸೂಚನೆ ಇದೆ. ನಿರ್ದಿಷ್ಟವಾಗಿ ಬೆಂಗಳೂರಿನಲ್ಲಿ, ಏಪ್ರಿಲ್ 17 ಮತ್ತು 18, 2024 ರಂದು ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಲಘು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದುವರೆ ತಿಂಗಳಿನಿಂದ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕೆಲ ಭಾಗದಲ್ಲಿ ಬಿಸಿಲಿನ ತಾಪಮಾನ ಇಳಿಕೆ ಕಾಣುವ ಸಾಧ್ಯತೆ ಇದೆ. ವಾಡಿಕೆಗಿಂತ ಹೆಚ್ಚಾಗಿ ಬಿಸಿಲು, ಸದ್ಯ ಮುಂದಿನ ಒಂದು ವಾರಗಳ ಕಾಲ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಾಣಲಿದೆ. ಬೆಂಗಳೂರು ಸೇರಿದಂತೆ ಇತರೆ ಭಾಗದಲ್ಲಿ ಸಾಮಾನ್ಯ ವರ್ಷಗಳಂತೆ ವಾಡಿಕೆಯಷ್ಟು ಬಿಸಿಲು ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಿಂಚಿನ ವಾತಾವರಣ ಕಂಡುಬರಲಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಮೇತ ಈ ಅವಧಿಯಲ್ಲಿ ಹಗುರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಏಪ್ರಿಲ್ 11ರ ನಂತರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲೂ ಗುಡುಗು ಮಿಂಚಿನ ಸಹಿತ ಹಗುರ ಮಳೆ ಸುರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಈ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ

ಮಧ್ಯಪ್ರದೇಶವು ಕಳೆದ ಕೆಲವು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯುತ್ತದೆ ಎಂದು ಭವಿಷ್ಯ ನುಡಿದಿದೆ

ಮುಂದಿನ ದಿನಗಳಲ್ಲಿ, ಗುಡುಗು ಮತ್ತು ಮಿಂಚಿನ ಜೊತೆಗೆ, ಬಲವಾದ ಗಾಳಿ ಮತ್ತು ಮಳೆಯನ್ನು ನಿರೀಕ್ಷಿಸಲಾಗಿತ್ತು. ಕಳೆದ ಎರಡು ಅಥವಾ ಮೂರು ದಿನಗಳಿಂದ ಗಾಳಿ ಹಾಗೂ ಗುಡುಗುತ್ತಿದ್ದು, ಅಲ್ಪ ಪ್ರಮಾಣದ ಆಲಿಕಲ್ಲು ಮಳೆಯಾಗಿದೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಭಾಗದಲ್ಲಿ ಪಶ್ಚಿಮ ದೌರ್ಬಲ್ಯವು ಸಕ್ರಿಯವಾಗಿದೆ, ರಾಜಸ್ಥಾನದಲ್ಲಿ ಸೈಕ್ಲೋನಿಕ್ ಸರ್ಕಲ್ ಇದೆ ಮತ್ತು ಬಂಗಾಳಕೊಲ್ಲಿ ವಿರೋಧಿ ಸೈಕ್ಲೋನ್ ರಚನೆಯಾಗಿದೆ, ಇದರ ಪರಿಣಾಮವಾಗಿ ಮಧ್ಯ ಭಾರತದಲ್ಲಿ ಮೋಡ ಕವಿದಿದೆ ಎಂದು ಹವಾಮಾನ ತಜ್ಞ ಪ್ರಕಾಶ್ ಧಾವಳೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+