ಕುಂಕುಮ, ಗಂಧ ಸಿಗುತ್ತೆ, ತೀರ್ಥ ಕೇಳಬೇಡಿ: ದೇವಸ್ಥಾನ ತೆರೆಯಲು 6 ಷರತ್ತುಗಳು
ಬೆಂಗಳೂರು, ಜೂನ್ 1: ಈಗಾಗಲೇ ವರದಿಯಾಗಿರುವಂತೆ, ಜೂನ್ ಒಂದರ ಬದಲು, ಜೂನ್ ಎಂಟರಂದು, ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳ ಸಹಿತ, ಎಲ್ಲಾ ದೇವಾಲಯಗಳು ಭಕ್ತರ ದರ್ಶನಕ್ಕೆ ತೆರೆಯಲಿವೆ.
"ಈ ಮೊದಲು ಜೂನ್ 1ಕ್ಕೆ ತೆರೆಯಬೇಕೆಂದು ನಿರ್ಧರಿಸಲಾಗಿದ್ದರೂ, ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯ ಮೇರೆಗೆ ಜೂನ್ 8ಕ್ಕೆ ದೇವಾಲಯ ತೆರೆಯುವುದನ್ನು ಮುಂದೂಡಲಾಗಿದ್ದು, ಎಲ್ಲಾ ಭಕ್ತರು ಸಹಕರಿಸಬೇಕಾಗಿ" ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.
ಮಾರ್ಗಸೂಚಿಯ ಪ್ರಕಾರ, ಯಾವುದೇ ಗೊಂದಲವಾಗದಂತೆ ನೋಡಿಕೊಳ್ಳಲು, ಈಗಿಂದಲೇ ಪೂರ್ವ ತಯಾರಿ ನಡೆಸಿಕೊಳ್ಳುವಂತೆ ಸಚಿವರು, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
"ದೇವಾಲಯದಲ್ಲಿ ಕುಂಕುಮ ಗಂಧ ಸಿಗುತ್ತದೆ. ಆದರೆ ತೀರ್ಥ ಸಿಗುವುದಿಲ್ಲ"ಎಂದು ಈಗಾಗಲೇ ಸಚಿವ ಕೋಟ ಪೂಜಾರಿಯವರು ಹೇಳಿದ್ದಾರೆ. ಇಲಾಖೆಯ ಆಯುಕ್ತರ ಸುತ್ತೋಲೆಯ ಪ್ರಕಾರ, ಎಲ್ಲಾ ದೇವಾಲಯಗಳು, ಈ ಮಾರ್ಗಸೂಚಿಯನ್ನು ಪಾಲಿಸಬೇಕಿದೆ. ಆರು ಷರತ್ತುಗಳು, ಹೀಗಿವೆ:

ಮಾಸ್ಕ್ ಅಥವಾ ಮೂಗು ಮುಚ್ಚವಂತೆ ಕರವಸ್ತ್ರ
1. ಎಲ್ಲಾ ದೇವಾಲಯದ ಪ್ರವೇಶ ದ್ವಾರಗಳಲ್ಲಿ ಉಷ್ಣತೆ ಪರೀಕ್ಷೆ ಕಡ್ಡಾಯ. ನಿಗದಿಗಿಂತ ಹೆಚ್ಚಿನ ಉಷ್ಟತೆ ಕಂಡು ಬಂದರೆ, ದೇವಾಲಯದೊಳಗೆ ಪ್ರವೇಶ ನೀಡಬಾರದು.
2. ಮಾಸ್ಕ್ ಅಥವಾ ಮೂಗು ಮುಚ್ಚವಂತೆ ಕರವಸ್ತ್ರಗಳನ್ನು ಧರಿಸಿದವರಿಗೆ ಮಾತ್ರ, ದೇವಾಲಯದೊಳಗೆ ಬಿಡಬೇಕು.

ಹೆಚ್ಚಿನ ಭದ್ರತಾ ಸಿಬ್ಬಂದಿ
3. ಮಾರ್ಗಸೂಚಿ ಪಾಲಿಸಲು ಹೆಚ್ಚಿನ ಭದ್ರತಾ ಸಿಬ್ಬಂದಿ ಬೇಕಿದ್ದಲ್ಲಿ, ಆಯಾಯ ದೇವಾಲಗಳು ಎರಡು ತಿಂಗಳ ಮಟ್ಟಿಗೆ ಇವರನ್ನು ನೇಮಿಸಿಕೊಳ್ಳಬಹುದು. ಇದಕ್ಕೆ ತಗಲುವ ಖರ್ಚನ್ನು ಆಯಾಯ ದೇವಾಲಯಗಳೇ ಭರಿಸಬೇಕು.

ಸಚಿವ ಕೋಟ ಶ್ರೀನಿವಾಸ ಪೂಜಾರಿ
4. ದೇವಾಲಯದ ಅರ್ಚಕ ವೃಂದ, ಒಳಾಂಗಣ ಸಿಬ್ಬಂದಿ ಹೊರತು ಪಡಿಸಿ, ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು.
5.ದೇವಾಲಯದ ದ್ವಾರದಲ್ಲೇ ಸ್ಯಾನಿಟೈಸರ್ ವ್ಯವಸ್ಥೆ ಇರಬೇಕು. ಇದಕ್ಕೂ ದೇವಾಲಯದ ನಿಧಿಯನ್ನೇ ಬಳಸಬೇಕು.

ಸ್ವಚ್ಚತೆಗೆ ಆದ್ಯತೆಯನ್ನು ನೀಡಬೇಕು
6. ದೇವಾಲಯದಲ್ಲಿ ಸ್ವಚ್ಚತೆಗೆ ಆದ್ಯತೆಯನ್ನು ನೀಡಬೇಕು. ದೇವಾಲಯದ ಹೊರ ಮತ್ತು ಒಳಾವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸುತ್ತಿರಬೇಕು. ಶೌಚಾಲಯಗಳನ್ನು ಸ್ವಚ್ಜಗೊಳಿಸುತ್ತಿರಬೇಕು.
ಈ ಎಲ್ಲಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋರಿದ್ದಾರೆ. ಜೊತೆಗೆ, ಭಕ್ತರೂ ಸಹಕರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications