ಸವಣೂರು ವೃಂದಾವನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು
ಸವಣೂರು, ಅ. 10 : ಕೂಡಲಿ ಆರ್ಯ ಅಕ್ಷೋಭ್ಯತೀರ್ಥ ಸಂಸ್ಥಾನ ಮಠದ ಶ್ರೀ ರಘುವಿಜಯತೀರ್ಥರ ನೇತೃತ್ವದಲ್ಲಿ ಸವಣೂರಿನ ಶ್ರೀ ಸತ್ಯಬೋಧ ಸ್ವಾಮಿಗಳ ಮೂಲವೃಂದಾವನ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಚಾಲನೆ ನೀಡಲಾಯಿತು.
ಶ್ರೀ ವೈಕುಂಠ ರಾಮದೇವರ ಮಹಾಪೂಜೆಯನ್ನು ಸ್ವಾಮೀಜಿ ವಿಧ್ಯುಕ್ತವಾಗಿ ಕೈಗೊಂಡರು. ಸಂಜೆ ಶ್ರೀಮದ್ ಭಾಗವತ ಪ್ರವಚನ ನಡೆಯಿತು. ಪರೀಕ್ಷಿತ ಹಾಗೂ ಶುಕಾಚಾರ್ಯರ ಸಂವಾದದ ಮೂಲಕ ಭಾಗವತ ಸೇರಿದಂತೆ ಹಲವಾರು ಪುರಾಣದ ಕಥೆಗಳು ನೀಡುವ ಸಂದೇಶ ವಿವರಿಸಲಾಯಿತು.[ಶ್ರೀ ಸತ್ಯಾತ್ಮತೀರ್ಥರಿಗೆ 60 ಕೆಜಿ ನಾಣ್ಯ ಸಮರ್ಪಣೆ]

ನಿರಂತರವಾಗಿ ಕೈಗೊಳ್ಳುವ ಸತ್ಕಥಾ ಶ್ರವಣ, ಮನನ, ಧ್ಯಾನಗಳಿಂದ ಜ್ಞಾನ ವೃದ್ಧಿಯಾಗುತ್ತದೆ. ಧ್ಯಾನದಿಂದ ತತ್ವ ನಿರ್ಣಯ ಸಾಧ್ಯವಾಗುತ್ತದೆ ಎಂದು ತಿಳಿಸಿದ ಸ್ವಾಮೀಜಿ ಭಗವಂತನ ಅವತಾರಗಳು, ಮಹಿಮೆಗಳು, ಕಲಿಯುಗದಲ್ಲಿ ಧರ್ಮದ ರಕ್ಷಣೆಯ ವಿಧಾನ, ದೇವತೆಗಳಲ್ಲಿನ ತಾರತಮ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ವಿವರಿಸಿದರು.
ಮಠದಲ್ಲಿ ದೇವರ ಮಹಾಪೂಜೆ, ಶ್ರೀ ಸತ್ಯಬೋಧತೀರ್ಥದ ಮೂಲವೃಂದಾವನಕ್ಕೆ ಪಂಚಾಮೃತ ಅಭಿಷೇಕ, ಅಲಂಕಾರ, ಹಸ್ಥೋದಕ, ಭಕ್ತವೃಂದಕ್ಕೆ ತೀರ್ಥ ಪ್ರಸಾದ ವಿತರಣೆ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲಾಯಿತು. ಭಜನೆ, ಕೀರ್ತನೆ, ದೇವರ ತೊಟ್ಟಿಲೋತ್ಸವಗಳು ನೆರವೇರಿದವು.[ಶ್ರಾವಣದ ಊರಲ್ಲಿ ಗೋಕಾಕರ ನಿರರ್ಥಕ ಹುಟ್ಟುಹಬ್ಬ]
ಸತ್ಯಬೋಧಾಚಾರ್ಯ ರಾಯಚೂರ, ಗುರುರಾಜಾಚಾರ್ಯ ರಾಯಚೂರ, ರಮೇಶ ರಾಯಚೂರ, ರಂಗಾಚಾರ್ಯ ರಾಯಚೂರ ಸೇರಿದಂತೆ ವಿಪ್ರ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications