ರೇಣುಕಾಚಾರ್ಯ ಕೇಳಿದ್ದು ಸಚಿವ ಸ್ಥಾನ ಆದರೆ ಸಿಕ್ಕಿದ್ದು ಬೇರೆ

Recommended Video

      ರೇಣುಕಾಚಾರ್ಯ ಕೇಳಿದ್ದೇನು..! ಯಡಿಯೂರಪ್ಪ ಕೊಟ್ಟಿದ್ದೇನು..? | Renukacharya

      ಬೆಂಗಳೂರು, ಸೆಪ್ಟೆಂಬರ್ 06: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಬಹಿರಂಗವಾಗಿ ಅತೃಪ್ತಿ ಹೊರಹಾಕಿದ್ದ ರೇಣುಕಾಚಾರ್ಯ ಅವರಿಗೆ ಕೊನೆಗೂ ಸ್ಥಾನವೊಂದನ್ನು ನೀಡಿ ಸುಮ್ಮನಾಗಿಸಲಾಗಿಸುವ ಪ್ರಯತ್ನ ಮಾಡಲಾಗಿದೆ.

      ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಅವರಿಗೆ ಸಂಪುಟ ದರ್ಜೆ ಸ್ಥಾನ-ಮಾನ ನೀಡುವಂತೆಯೂ ಆದೇಶ ನೀಡಲಾಗಿದೆ.

      ಇಂದು ಆದೇಶ ಹೊರಬಿದ್ದಿದ್ದು, ರಾಜ್ಯಪಾಲರ ಆದೇಶದಂತೆ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಕಾರ್ಯದರ್ಶಿಗಳು ಆದೇಶ ಜಾರಿ ಮಾಡಿದ್ದಾರೆ. ರೇಣುಕಾಚಾರ್ಯ ಅವರಿಗೆ ಸಚಿವರಿಗೆ ಸಿಗುವ ಸೌಲಭ್ಯಗಳೆಲ್ಲವೂ ದೊರಕಲಿವೆ.

      Renukacharya Appointed As Political Secretory Of CM Yediyurappa

      ಈ ಹಿಂದೆ ಸಿಎಂ ಆಗಿದ್ದ ಕುಮಾರಸ್ವಾಮಿ ಅವರಿಗೆ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆದರೆ ಅವರಿಗೆ ಸಚಿವ ಸಂಪುಟ ದರ್ಜೆ ನೀಡಲಾಗಿರಲಿಲ್ಲ. ಬದಲಿಗೆ ಕೇವಲ ನಾಮ್‌ಕೇವಾಸ್ತೆ ಸ್ಥಾನವನ್ನಾಗಿ ಮಾತ್ರವೇ ಅದನ್ನು ಇಡಲಾಗಿತ್ತು.

      ಆದರೆ ರೇಣುಕಾಚಾರ್ಯ ಅವರು ಸಚಿವ ಸ್ಥಾನಕ್ಕಾಗಿ ಅಸಮಾಧಾನ ಹೊಂದಿದ್ದ ಕಾರಣ, ಅದೇ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಸಚಿವ ದರ್ಜೆಯನ್ನು ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+